AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆರೆಯಲ್ಲಿ ನೀರು ಕುಡಿಯಲು ಬಂದ ಹುಲಿಯನ್ನು ಅಟ್ಟಾಡಿಸಿಕೊಂಡು ಹೋದ ಗಜರಾಜ

ಭಾರತದ ಅರಣ್ಯ ಮೀಸಲು ಪ್ರದೇಶವೊಂದರಲ್ಲಿ ಕೆರೆಯ ಬಳಿ ದಾಹವನ್ನು ನೀಗಿಸಿಕೊಳ್ಳಲು ನೀರು ಕುಡಿಯಲು ಬಂದ ಹುಲಿಯನ್ನು ದೈತ್ಯ ಆನೆಯೊಂದು ಅಟ್ಟಾಡಿಸಿಕೊಂಡು ಹೋಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video: ಕೆರೆಯಲ್ಲಿ ನೀರು ಕುಡಿಯಲು ಬಂದ ಹುಲಿಯನ್ನು ಅಟ್ಟಾಡಿಸಿಕೊಂಡು ಹೋದ ಗಜರಾಜ
ವೈರಲ್ ವೀಡಿಯೊ
ಮಾಲಾಶ್ರೀ ಅಂಚನ್​
| Edited By: |

Updated on: Jun 17, 2023 | 5:19 PM

Share

ಹುಲಿಗಳು ಕಾಡಿನ ಅತ್ಯಂತ ಅಪಾಯಕಾರಿ ಪರಭಕ್ಷಕ ಪ್ರಾಣಿಗಳು. ಅವುಗಳು ಕಾಡಿನ ಇತರ ಪ್ರಾಣಿಗಳನ್ನು ತನ್ನ ಆಹಾರಕ್ಕಾಗಿ ಬೇಟೆಯಾಡುತ್ತವೆ. ಇಂತಹ ಧೈರ್ಯಶಾಲಿ ಪ್ರಾಣಿ ಆನೆಗಳೊಂದಿಗೆ ಸೆನೆಸಾಡಲು ಹೋಗುವುದಿಲ್ಲ. ಹುಲಿಗಳು ಗಜರಾಜನಿಗೆ ಭಯಪಟ್ಟು ಅವುಗಳಿಂದ ಆದಷ್ಟು ದೂರವಿರುತ್ತವೆ. ಹೀಗೆ ಹುಲಿ, ಸಿಂಹಗಳಂತಹ ಬಲಶಾಲಿ ಪ್ರಾಣಿಗಳು ಆನೆಗೆ ಭಯಪಡುವಂತಹ ಹಾಗೂ ಪ್ರಾಣಿ ಸಾಮ್ರಾಜ್ಯದ ಇನ್ನಿತರ ಕುತೂಹಲಕಾರಿ ವೀಡಿಯೋಗಳನ್ನು ಭಾರತೀಯ ಅರಣ್ಯ ಅಧಿಕಾರಿ ಸುಸಾಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಇದೇ ರೀತಿಯಲ್ಲಿ ಕೆರೆಯ ಬಳಿ ನೀರು ಕುಡಿಯಲು ಬಂದ ಹುಲಿಯನ್ನು ಗಜರಾಜ ಅಟ್ಟಾಡಿಸಿಕೊಂಡು ಹೋಗುವ ವೀಡಿಯೋವೊಂದನ್ನು ಅವರು ಹಂಚಿಕೊಂಡಿದ್ದಾರೆ.

ವೈರಲ್ ವೀಡಿಯೋವನ್ನು ಭಾರತೀಯ ಅರಣ್ಯ ಅಧಿಕಾರಿ ಸುಸಾಂತ ನಂದ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಹುಲಿಗಳು ಮತ್ತು ಆನೆಗಳು ಕಾಡಿನಲ್ಲಿ ಪರಸ್ಪರ ಹೊಂದಿಕೊಂಡು ಜೀವಿಸುತ್ತವೆ. ಆದರೆ ಕೆಲವೊಮ್ಮೆ ದೈತ್ಯ ಆನೆ ರಾಜ ಯಾರೆಂಬುದನ್ನು ತೋರಿಸುತ್ತದೆ’ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಹಾಗೂ ಹಿನ್ನೆಲೆಯಲ್ಲಿ ವೀಡಿಯೋ ಚಿತ್ರೀಕರಣ ಮಾಡುತ್ತಾ ಪ್ರವಾಸಿಗರು ಮಾತನಾಡುವುದನ್ನು ಕೇಳಬಹುದು. ಇಂತಹ ವನ್ಯಜೀವಿ ಸಂರಕ್ಷಿತ ಪ್ರದೇಶದಲ್ಲಿ ಮೊಬೈಲ್ ನಿಷೇಧಿಸಬೇಕೆ? ಎಂದು ಕೇಳಿದ್ದಾರೆ.

ಇದನ್ನೂ ಓದಿ:Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವೀಡಿಯೋದಲ್ಲಿ ಸಣ್ಣ ಕೆರೆಯೊಂದರ ಬಳಿ ಆನೆಯೊಂದು ನೀರು ಕುಡಿಯುತ್ತಾ ನಿಂತಿರುತ್ತದೆ. ಇತ್ತ ಕಡೆ ಕಾಡಿನಲ್ಲಿ ಬೇಟೆಯಾಡಿ ಸುಸ್ತಾಗಿ ಬಾಯಾರಿಕೆ ನೀಗಿಸಿಕೊಳ್ಳಲು ಹುಲಿ ಅದೇ ಕರೆಯ ಬಳಿಗೆ ಬರುತ್ತದೆ. ಆನೆಯನ್ನು ಕಂಡು ತುಸು ಮೆಲ್ಲನೆ ಹೆಜ್ಜೆಯನ್ನಿಡುತ್ತಾ ಹುಲಿರಾಯ ಬರುತ್ತೆ. ಆದರೆ ಹುಲಿ ಬರುವುದನ್ನು ಆನೆ ಮೊದಲೇ ಗಮನಿಸಿದೆ. ನಾನಿರುವ ಸ್ಥಳದಲ್ಲಿ ನೀನು ನೀರು ಕುಡಿಯುತ್ತೀಯಾ ಎಂದು ಕೋಪಗೊಂಡ ಗಜರಾಜ ಹುಲಿಯನ್ನು ಓಡಿಸಿಕೊಂಡು ಹೋಗುವ ದೃಶ್ಯಾವಳಿಯನ್ನು ಕಾಣಬಹುದು.

ಟ್ವಿಟರ್​​ನಲ್ಲಿ ಜೂನ್ 13ರಂದು ಹಂಚಿಕೊಳ್ಳಲಾದ ಈ ವೀಡಿಯೊ 49.9 ಸಾವಿರ ವೀಕ್ಷಣೆಗಳನ್ನು ಹಾಗೂ 1.3 ಸಾವಿರ ಲೈಕ್ಸ್​​ಗಳನ್ನು ಪಡೆದುಕೊಂಡಿದೆ. ಈ ವೀಡಿಯೊವನ್ನು ನೋಡಿ ಅನೇಕರು ಕಮೆಂಟ್ಸ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರರು ‘ಪ್ರಕೃತಿಯು ಶಕ್ತಿಯ ಸಮತೋಲನವನ್ನು ಚೆನ್ನಾಗಿ ನಿರ್ವಹಿಸುತ್ತಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ವಾಹನಗಳು ಕಾಡು ಪ್ರಾಣಿಗಳಿಗೆ ತುಂಬಾ ಹತ್ತಿರದಲ್ಲಿರುವಂತಿದೆ, ಹಾಗಾಗಿ ಪ್ರಾಣಿಗಳಿಗೆ ತೊಂದರೆಯಾಗದಂತೆ ಆದಷ್ಟು ಅಂತರವನ್ನು ಕಾಪಡಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ. ಇನ್ನೂ ಅನೇಕರು ಸುಸಾಂತ ನಂದ ಅವರು ಕೇಳಿದ ಪ್ರಶ್ನೆಗೆ ಹೌದು ಅರಣ್ಯದಲ್ಲಿ ಪ್ರವಾಸಿಗರು ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಬೇಕು. ಕನಿಷ್ಟ ಪಕ್ಷ ಪ್ರವಾಸಿಗರು ಇಂತಹ ಸ್ಥಳದಲ್ಲಿ ಮೊಬೈಲ್​​​ನ್ನು ಫೈಟ್ ಮೋಡ್​​​ನಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ