Viral Video: ಕೆರೆಯಲ್ಲಿ ನೀರು ಕುಡಿಯಲು ಬಂದ ಹುಲಿಯನ್ನು ಅಟ್ಟಾಡಿಸಿಕೊಂಡು ಹೋದ ಗಜರಾಜ

ಭಾರತದ ಅರಣ್ಯ ಮೀಸಲು ಪ್ರದೇಶವೊಂದರಲ್ಲಿ ಕೆರೆಯ ಬಳಿ ದಾಹವನ್ನು ನೀಗಿಸಿಕೊಳ್ಳಲು ನೀರು ಕುಡಿಯಲು ಬಂದ ಹುಲಿಯನ್ನು ದೈತ್ಯ ಆನೆಯೊಂದು ಅಟ್ಟಾಡಿಸಿಕೊಂಡು ಹೋಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video: ಕೆರೆಯಲ್ಲಿ ನೀರು ಕುಡಿಯಲು ಬಂದ ಹುಲಿಯನ್ನು ಅಟ್ಟಾಡಿಸಿಕೊಂಡು ಹೋದ ಗಜರಾಜ
ವೈರಲ್ ವೀಡಿಯೊ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 17, 2023 | 5:19 PM

ಹುಲಿಗಳು ಕಾಡಿನ ಅತ್ಯಂತ ಅಪಾಯಕಾರಿ ಪರಭಕ್ಷಕ ಪ್ರಾಣಿಗಳು. ಅವುಗಳು ಕಾಡಿನ ಇತರ ಪ್ರಾಣಿಗಳನ್ನು ತನ್ನ ಆಹಾರಕ್ಕಾಗಿ ಬೇಟೆಯಾಡುತ್ತವೆ. ಇಂತಹ ಧೈರ್ಯಶಾಲಿ ಪ್ರಾಣಿ ಆನೆಗಳೊಂದಿಗೆ ಸೆನೆಸಾಡಲು ಹೋಗುವುದಿಲ್ಲ. ಹುಲಿಗಳು ಗಜರಾಜನಿಗೆ ಭಯಪಟ್ಟು ಅವುಗಳಿಂದ ಆದಷ್ಟು ದೂರವಿರುತ್ತವೆ. ಹೀಗೆ ಹುಲಿ, ಸಿಂಹಗಳಂತಹ ಬಲಶಾಲಿ ಪ್ರಾಣಿಗಳು ಆನೆಗೆ ಭಯಪಡುವಂತಹ ಹಾಗೂ ಪ್ರಾಣಿ ಸಾಮ್ರಾಜ್ಯದ ಇನ್ನಿತರ ಕುತೂಹಲಕಾರಿ ವೀಡಿಯೋಗಳನ್ನು ಭಾರತೀಯ ಅರಣ್ಯ ಅಧಿಕಾರಿ ಸುಸಾಂತ ನಂದಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಇದೇ ರೀತಿಯಲ್ಲಿ ಕೆರೆಯ ಬಳಿ ನೀರು ಕುಡಿಯಲು ಬಂದ ಹುಲಿಯನ್ನು ಗಜರಾಜ ಅಟ್ಟಾಡಿಸಿಕೊಂಡು ಹೋಗುವ ವೀಡಿಯೋವೊಂದನ್ನು ಅವರು ಹಂಚಿಕೊಂಡಿದ್ದಾರೆ.

ವೈರಲ್ ವೀಡಿಯೋವನ್ನು ಭಾರತೀಯ ಅರಣ್ಯ ಅಧಿಕಾರಿ ಸುಸಾಂತ ನಂದ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಹುಲಿಗಳು ಮತ್ತು ಆನೆಗಳು ಕಾಡಿನಲ್ಲಿ ಪರಸ್ಪರ ಹೊಂದಿಕೊಂಡು ಜೀವಿಸುತ್ತವೆ. ಆದರೆ ಕೆಲವೊಮ್ಮೆ ದೈತ್ಯ ಆನೆ ರಾಜ ಯಾರೆಂಬುದನ್ನು ತೋರಿಸುತ್ತದೆ’ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಹಾಗೂ ಹಿನ್ನೆಲೆಯಲ್ಲಿ ವೀಡಿಯೋ ಚಿತ್ರೀಕರಣ ಮಾಡುತ್ತಾ ಪ್ರವಾಸಿಗರು ಮಾತನಾಡುವುದನ್ನು ಕೇಳಬಹುದು. ಇಂತಹ ವನ್ಯಜೀವಿ ಸಂರಕ್ಷಿತ ಪ್ರದೇಶದಲ್ಲಿ ಮೊಬೈಲ್ ನಿಷೇಧಿಸಬೇಕೆ? ಎಂದು ಕೇಳಿದ್ದಾರೆ.

ಇದನ್ನೂ ಓದಿ:Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವೀಡಿಯೋದಲ್ಲಿ ಸಣ್ಣ ಕೆರೆಯೊಂದರ ಬಳಿ ಆನೆಯೊಂದು ನೀರು ಕುಡಿಯುತ್ತಾ ನಿಂತಿರುತ್ತದೆ. ಇತ್ತ ಕಡೆ ಕಾಡಿನಲ್ಲಿ ಬೇಟೆಯಾಡಿ ಸುಸ್ತಾಗಿ ಬಾಯಾರಿಕೆ ನೀಗಿಸಿಕೊಳ್ಳಲು ಹುಲಿ ಅದೇ ಕರೆಯ ಬಳಿಗೆ ಬರುತ್ತದೆ. ಆನೆಯನ್ನು ಕಂಡು ತುಸು ಮೆಲ್ಲನೆ ಹೆಜ್ಜೆಯನ್ನಿಡುತ್ತಾ ಹುಲಿರಾಯ ಬರುತ್ತೆ. ಆದರೆ ಹುಲಿ ಬರುವುದನ್ನು ಆನೆ ಮೊದಲೇ ಗಮನಿಸಿದೆ. ನಾನಿರುವ ಸ್ಥಳದಲ್ಲಿ ನೀನು ನೀರು ಕುಡಿಯುತ್ತೀಯಾ ಎಂದು ಕೋಪಗೊಂಡ ಗಜರಾಜ ಹುಲಿಯನ್ನು ಓಡಿಸಿಕೊಂಡು ಹೋಗುವ ದೃಶ್ಯಾವಳಿಯನ್ನು ಕಾಣಬಹುದು.

ಟ್ವಿಟರ್​​ನಲ್ಲಿ ಜೂನ್ 13ರಂದು ಹಂಚಿಕೊಳ್ಳಲಾದ ಈ ವೀಡಿಯೊ 49.9 ಸಾವಿರ ವೀಕ್ಷಣೆಗಳನ್ನು ಹಾಗೂ 1.3 ಸಾವಿರ ಲೈಕ್ಸ್​​ಗಳನ್ನು ಪಡೆದುಕೊಂಡಿದೆ. ಈ ವೀಡಿಯೊವನ್ನು ನೋಡಿ ಅನೇಕರು ಕಮೆಂಟ್ಸ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರರು ‘ಪ್ರಕೃತಿಯು ಶಕ್ತಿಯ ಸಮತೋಲನವನ್ನು ಚೆನ್ನಾಗಿ ನಿರ್ವಹಿಸುತ್ತಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ವಾಹನಗಳು ಕಾಡು ಪ್ರಾಣಿಗಳಿಗೆ ತುಂಬಾ ಹತ್ತಿರದಲ್ಲಿರುವಂತಿದೆ, ಹಾಗಾಗಿ ಪ್ರಾಣಿಗಳಿಗೆ ತೊಂದರೆಯಾಗದಂತೆ ಆದಷ್ಟು ಅಂತರವನ್ನು ಕಾಪಡಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ. ಇನ್ನೂ ಅನೇಕರು ಸುಸಾಂತ ನಂದ ಅವರು ಕೇಳಿದ ಪ್ರಶ್ನೆಗೆ ಹೌದು ಅರಣ್ಯದಲ್ಲಿ ಪ್ರವಾಸಿಗರು ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಬೇಕು. ಕನಿಷ್ಟ ಪಕ್ಷ ಪ್ರವಾಸಿಗರು ಇಂತಹ ಸ್ಥಳದಲ್ಲಿ ಮೊಬೈಲ್​​​ನ್ನು ಫೈಟ್ ಮೋಡ್​​​ನಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ