AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತುಸು ವಿಶ್ರಾಂತಿ ಪಡೆಯೋಣ ಬಾ ಕಂದ; ತಾಯಿ ಮತ್ತು ಕುಟುಂಬದೊಂದಿಗೆ ಹಾಯಾಗಿ ಮಲಗಿ ವಿಶ್ರಾಂತಿ ಪಡೆದ ಮರಿ ಆನೆ

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳು ಹರಿದಾಡುತ್ತಿರುತ್ತವೆ. ಸದ್ಯ ಅಂತಹದ್ದೇ ಮುದ್ದಾದ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.

Viral Video: ತುಸು ವಿಶ್ರಾಂತಿ ಪಡೆಯೋಣ ಬಾ ಕಂದ; ತಾಯಿ ಮತ್ತು ಕುಟುಂಬದೊಂದಿಗೆ  ಹಾಯಾಗಿ ಮಲಗಿ ವಿಶ್ರಾಂತಿ ಪಡೆದ  ಮರಿ ಆನೆ
ಮಾಲಾಶ್ರೀ ಅಂಚನ್​
| Edited By: |

Updated on: May 16, 2024 | 6:25 PM

Share

ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಅದರಲ್ಲೂ ಆನೆಗಳ ವಿಡಿಯೋಗಳಂತೂ ನೋಡುಗರಿಗೆ ತುಂಬಾನೇ ಇಷ್ಟವಾಗುತ್ತದೆ. ಆನೆಗಳ ಆಟ, ತುಂಟಾಟ, ತಾಯಿ ಆನೆಯೊಂದಿಗೆ ಮರಿಯಾನೆಯ ಕಸರತ್ತು ಹೀಗೆ ಆನೆಗಳು ಮುದ್ದು ಪೆದ್ದು ಆಟವನ್ನು ನೋಡುವುದೇ ಚೆಂದ. ಸದ್ಯ ಅಂತಹದ್ದೇ ಮುದ್ದಾದ ವಿಡಿಯೋ ಇದೀಗ ವೈರಲ್ ಆಗಿದ್ದು, ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.

ತಮಿಳುನಾಡಿನ ಅಣ್ಣಾಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಸುಂದರವಾದ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಈ ಮುದ್ದಾದ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರೀಯಾ ಸಹು (@supriyasahuias) ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಸುಂದರವಾದ ಆನೆ ಕುಟುಂಬವೊಂದು ಹಾಯಾಗಿ ನಿದ್ರಿಸುತ್ತಿದೆ. ಮರಿ ಆನೆಗೆ ಕುಟುಂಬದಿಂದ Z+ ಭದ್ರತೆಯನ್ನು ಹೇಗೆ ನೀಡಲಾಗಿದೆ ಗಮನಿಸಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ, ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ

ವೈರಲ್ ವಿಡಿಯೋದಲ್ಲಿ ಅಣ್ಣಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆಗಳ ಕುಟುಂಬವೊಂದು ಹಾಯಾಗಿ ಮಲಗಿರುವ ದೃಶ್ಯವನ್ನು ಕಾಣಬಹುದು. ಮರಿಯಾನೆಯನ್ನು ಮಧ್ಯದಲ್ಲಿ ಮಲಗಿಸಿ ಉಳಿದ ನಾಲ್ಕು ಆನೆಗಳು ಮರಿಯಾನೆಯ ಸುತ್ತಲೂ ಮಲಗಿ ತಮ್ಮ ಮಗುವಿಗೆ ಅಪಾಯವಾಗದಂತೆ ರಕ್ಷಣೆ ಒದಗಿಸಿವೆ. ಇಂದು ಬೆಳಗ್ಗೆ ಹಂಚಿಕೊಳ್ಳಲಾದ ಈ ವಿಡಿಯೋ ಮೂರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆನೆಗಳು ವಿಶ್ರಾಂತಿ ಪಡೆಯುತ್ತಿರುವ ಮುದ್ದಾದ ದೃಶ್ಯ ಪ್ರಾಣಿ ಪ್ರಿಯರ ಮನಗೆದ್ದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ