AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:  ನೀರು ಕುಡಿಯುತ್ತಿದ್ದ ಆನೆಯ ಮೇಲೆ ಏಕಾಏಕಿ ದಾಳಿ ಮಾಡಿದ ಮೊಸಳೆ, ಭಯಾನಕ ದಾಳಿಯ ವಿಡಿಯೋ ಇಲ್ಲಿದೆ 

ತನ್ನ ಗುಂಪಿನೊಂದಿಗೆ ಬಂದು ನೀರು ಕುಡಿಯುತ್ತಿದ್ದ ದೈತ್ಯ ಆನೆಯ ಮೇಲೆ  ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದ ಮೊಸಳೆಯೊಂದು ದಾಳಿ ಮಾಡಿದೆ. ಕ್ಷಣಾರ್ಧದಲ್ಲಿ ತನ್ನ ಸಮಯ ಪ್ರಜ್ಞೆಯಿಂದ ಆನೆಯು ಮೊಸಳೆಯ ದಾಳಿಯಿಂದ ತಪ್ಪಿಸಿಕೊಂಡಿದೆ. ಈ ಭೀಕರ ದೃಶ್ಯಾವಳಿ ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video:  ನೀರು ಕುಡಿಯುತ್ತಿದ್ದ ಆನೆಯ ಮೇಲೆ ಏಕಾಏಕಿ ದಾಳಿ ಮಾಡಿದ ಮೊಸಳೆ, ಭಯಾನಕ ದಾಳಿಯ ವಿಡಿಯೋ ಇಲ್ಲಿದೆ 
ಮಾಲಾಶ್ರೀ ಅಂಚನ್​
| Edited By: |

Updated on: May 15, 2024 | 5:54 PM

Share

ಕಾಡಿನಲ್ಲಿರುವ ಸಿಂಹ, ಚಿರತೆ, ಹುಲಿ ಎಷ್ಟು ಅಪಾಯಕಾರಿ ಜೀವಿಗಳೋ, ಅದೇ ರೀತಿ ನೀರಿನಲ್ಲಿರುವ ಮೊಸಳೆಗಳು ಕೂಡಾ ತುಂಬಾನೇ ಅಪಾಯಕಾರಿ. ಹೇಳಿ ಕೇಳಿ ಮೊಸಳೆಗಳು  ಬೇಟೆಯಾಡವುದರಲ್ಲಿ ಪಳಗಿರುವ ಪ್ರಾಣಿ. ನದಿ ನೀರಿನ ಬಳಿ ಬೇರಾವ ಪ್ರಾಣಿ ಬಂದರೂ ಮೊಸಳೆ  ಕ್ಷಣಾರ್ಧದಲ್ಲಿ  ಆ ಪ್ರಾಣಿಗಳ ಮೇಲೆರಗಿ ಅವುಗಳನ್ನು ಕೊಂದೇ ಬಿಡುತ್ತವೆ. . ಇಂತಹ ಭಯಾನಕ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ತನ್ನ ಗುಂಪಿನೊಂದಿಗೆ ನೀರು ಕುಡಿಯಲು ಬಂದಂತಹ ದೈತ್ಯ ಆನೆಯ ಮೇಲೆ ಮೊಸಳೆಯೊಂದು ದಾಳಿ ಮಾಡಿ. ಆ ತಕ್ಷಣ ತನ್ನ ಬುದ್ಧಿವಂತಿಕೆಯಿಂದ ಆನೆಯು ಭೀಕರ ದಾಳಿಯಿಂದ ತಪ್ಪಿಸಿಕೊಂಡಿದೆ.

ಈ ಕುರಿತ ವಿಡಿಯೋವನ್ನು Latest Sightings ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಆನೆಗಳ ಹಿಂಡೊಂದು ನದಿ ಪಕ್ಕ ಬಂದು ಪ್ರಶಾಂತವಾಗಿ ನೀರು ಕುಡಿಯುತ್ತಿರುವಂತಹ ದೃಶ್ಯವನ್ನು ಕಾಣಬಹುದು.  ಹೀಗೆ ಆನೆಗಳು ನೀರು ಕುಡಿಯುತ್ತಿದ್ದ ವೇಳೆ ಬೇಟೆಗಾಗಿ ಹೊಂಚುಹಾಕಿ ಕುಳಿತಿದ್ದ ಮೊಸಳೆಯೊಂದು ದೈತ್ಯ ಆನೆಯ ಸೊಂಡಿಲಿನ ಮೇಲೆ ಬಂದೆರಗುತ್ತದೆ. ಆ ತಕ್ಷಣ ಆನೆ ತನ್ನ ಸಮಯ ಪ್ರಜ್ಞೆಯಿಂದ ಮೊಸಳೆಯ ದಾಳಿಯಿಂದ ತಪ್ಪಿಸಿಕೊಂಡು ಕಾಲ್ಕಿತ್ತು ಓಡಿ ಹೋಗುತ್ತದೆ. ನಂತರ ರಾತ್ರಿಯ ವೇಳೆಯೂ ಆನೆಗಳ ಮೇಲೆ ದಾಳಿ ನಡೆಸಲು ಮೊಸಳೆ ಹೊಂಚು ಹಾಕಿತ್ತು, ಆದರೆ ದುರಾದೃಷ್ಟವಶಾತ್ ಮೊಸಳೆಗೆ ತನ್ನ ಬೇಟೆಯೇ ಸಿಗಲಿಲ್ಲ.

ಇದನ್ನೂ ಓದಿ: IPL ಪಂದ್ಯದ ವೇಳೆ ಬಾಲ್ ಎಗರಿಸಿ ಪ್ಯಾಂಟ್​​​​​ ಒಳಗಿಟ್ಟು ಪೊಲೀಸರ ಕೈಗೆ ಸಿಕ್ಕಿ ಬಿದ್ದ KKR ಅಭಿಮಾನಿ

ಮೇ 14 ರಂದು ಹಂಚಿಕೊಳ್ಳಲಾದ  ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಮೊಸಳೆಯ ದಾಳಿಯ ಭೀಕರ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​