AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನರಳಿ ನರಳಿ ಪ್ರಾಣ ಬಿಟ್ಟ ಗಜರಾಜ, ಕಾಡಾನೆಗೆ ಡಿಕ್ಕಿ ಹೊಡೆದ ರೈಲು

ಮನುಷ್ಯನ ಅಭಿವೃದ್ಧಿಯ ದೆಸೆಯಿಂದ ಪ್ರಾಣಿಗಳಿಗೆ ಸ್ವತಂತ್ರವಾಗಿ ಓಡಾಡಲೂ ಕಷ್ಟಸಾಧ್ಯವಾಗಿದೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಹೃದಯ ವಿದ್ರಾವಕ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Video: ನರಳಿ ನರಳಿ ಪ್ರಾಣ ಬಿಟ್ಟ ಗಜರಾಜ, ಕಾಡಾನೆಗೆ ಡಿಕ್ಕಿ ಹೊಡೆದ ರೈಲು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jul 12, 2024 | 2:21 PM

Share

ಮಾನವ- ವನ್ಯಮೃಗ ಸಂಘರ್ಷದಿಂದ ಈಗಾಗಲೇ ಸಾಕಷ್ಟು ಕಾಡು ಪ್ರಾಣಿಗಳು ಬಲಿಯಾಗಿದ್ದು, ಈ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದೀಗ ಅಂತಹದೇ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆ ಅಸ್ಸಾಂ ರಾಜ್ಯದಲ್ಲಿ ನಡೆದಿದ್ದು, ಇಲ್ಲಿನ ಮೊರಿಗಾಂವ್‌ನಲ್ಲಿರುವ ಜಾಗಿರೋಡ್ ರೈಲು ನಿಲ್ದಾಣದ ಬಳಿ ವೇಗವಾಗಿ ಬರುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಕಾಡಾನೆ ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದೆ. ತನ್ನ ಹಿಂಡಿನಿಂದ ಬೆರ್ಪಟ್ಟ ಗಂಡಾನೆ ರೈಲ್ವೆ ಹಳಿ ದಾಟುತಿತ್ತು. ಹೀಗೆ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದ ರಭಸಕ್ಕೆ ಅಲ್ಲೇ ಕುಸಿದು ಬಿದ್ದ ಆನೆ, ಗಂಭೀರವಾಗಿ ಗಾಯಗೊಂಡ ಕಾರಣ ಹಳಿಯ ಮೇಲಿಂದ ಎದ್ದೇಳಲು ಹರಸಾಹಸ ಪಟ್ಟು ಕೊನೆಗೆ ಅಲ್ಲಿಯೇ ನರಳಿ ನರಳಿ ಪ್ರಾಣ ಬಿಟ್ಟಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ

ನಂದನ್ ಪ್ರತಿಮ್ ಶರ್ಮಾ (NANDANPRATHIM) ಎಂಬವರು ಈ ಕುರಿತ ಪೋಸ್ಟ್ ಒಂದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ರೈಲಿಗೆ ಡಿಕ್ಕಿ ಹೊಡೆದ ಆನೆ ಎದ್ದು ನಿಂತುಕೊಳ್ಳಲು ಆಗದೆ ತೆವಳುತ್ತಾ ತೆವಳುತ್ತಾ ಹೋಗಿ ಕೊನೆಯಲ್ಲಿ ಅಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಮನಕಲಕುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಐಸ್ ಕ್ರೀಮ್ ಕೊಟ್ಟು ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ; ವಿಡಿಯೋ ವೈರಲ್

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರು ‘ಈ ಸಾವು ನ್ಯಾಯವೇ’ ಎಂದು ಪ್ರಶ್ನಿಸಿದ್ದಾರೆ. ಇನ್ನೂ ನೆಟ್ಟಿಗರು ಮನುಷ್ಯರಿಂದಲೇ ಮುಗ್ಧ ಪ್ರಾಣಿಗಳು ಬಲಿಯಾಗುತ್ತಿವೆ ಎಂದು ಕಿಡಿ ಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Fri, 12 July 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ