AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಲೆಬಾಗಿ ನಮಸ್ಕರಿಸಿದ ಪುಟಾಣಿಗೆ ಸೊಂಡಿಲೆತ್ತಿ ಆಶೀರ್ವಾದ ಮಾಡಿದ ಗಜರಾಜ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಪುಟ್ಟ ಹುಡುಗಿಯು ಆನೆಗೆ ನಮಸ್ಕರಿಸುತ್ತಿದ್ದಂತೆ ಆನೆಯೊಂದು ಮುದ್ದಾಗಿ ರಿಯಾಕ್ಷನ್ ನೀಡಿದೆ. ಎರಡು ಮುಗ್ಧ ಮನಸ್ಸುಗಳ ನಡುವಿನ ಶುದ್ಧ ಪ್ರೀತಿಯನ್ನು ಕಂಡು ನೆಟ್ಟಿಗರು ತಲೆ ಬಾಗಿದ್ದಾರೆ. ಈ ಕುರಿತಾದ ವಿಡಿಯೋ ಇಲ್ಲಿದೆ ನೋಡಿ.

Video: ತಲೆಬಾಗಿ ನಮಸ್ಕರಿಸಿದ ಪುಟಾಣಿಗೆ ಸೊಂಡಿಲೆತ್ತಿ ಆಶೀರ್ವಾದ ಮಾಡಿದ ಗಜರಾಜ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Oct 05, 2025 | 6:55 PM

Share

ಆನೆಗಳು (elephant) ಭಾವನಾತ್ಮಕ ಜೀವಿಗಳು. ಆದರೆ ಈ ಆನೆಗಳಿಗೆ ಮನುಷ್ಯರು ತುಂಬಾ ಮುದ್ದಾಗಿ ಕಾಣುತ್ತಾರೆಯಂತೆ. ಹೀಗಾಗಿ ಈ ಆನೆಗಳು ಮನುಷ್ಯರೊಂದಿಗೆ ಬಹುಬೇಗನೇ ಆಪ್ತವಾಗುತ್ತವೆ. ಹೀಗೆ ಆನೆಗಳು ಮನುಷ್ಯರೊಂದಿಗೆ ಆಟ ಆಡುವ, ಬಾಂಧವ್ಯ ಸಾರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೊಂದು (little girl) ಆನೆಯನ್ನು ಕಂಡೊಡನೆ ನಮಸ್ಕರಿಸಿದ್ದು, ಆನೆಯು ತನ್ನ ಸೊಂಡಿಲನ್ನು ಎತ್ತಿ ಈ ಪುಟಾಣಿಗೆ ಆಶೀರ್ವಾದಿಸಿದೆ. ಈ ಮುದ್ದಾದ ದೃಶ್ಯವೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಪುಟಾಣಿಯನ್ನು ಕಂಡು ಆನೆ ಕೊಟ್ಟ ರಿಯಾಕ್ಷನ್ ನೋಡಿ

ಅತುಲ್ಯ ಭಾರತ್ (Atulya Bharat) ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿಯೂ ಆನೆಯ ಕಡೆಗೆ ನಡೆದು ಬರುವುದನ್ನು ಕಾಣಬಹುದು. ಆ ಬಳಿಕ ಈ ಪುಟಾಣಿಯೂ ಆನೆ ಮಾವುತನಿಗೆ ಹಣವನ್ನು ನೀಡಿ ತಲೆ ಬಾಗಿಸಿ ಆನೆಗೆ ನಮಸ್ಕರಿಸುತ್ತಾಳೆ. ಈ ಪುಟಾಣಿಯನ್ನು ಕಂಡೊಡನೆ ಸೊಂಡಿಲನ್ನು ಎತ್ತಿದೆ. ಆ ಬಳಿಕ ಆನೆಯೂ ತನ್ನ ಸೊಂಡಿಲನ್ನು ಪುಟ್ಟ ಹುಡುಗಿಯ ತಲೆಯ ಮೇಲೆ ಇಟ್ಟು ಆಶೀರ್ವಾದ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ
Image
ಮಳೆಯಲ್ಲಿ ನೆನೆಯುತ್ತಿದ್ದ ಮಾಲಕಿಗೆ ಆಸರೆಯಾಗಿ ನಿಂತ ಆನೆ
Image
ತನ್ನ ಮಾಲೀಕಳ ಜೊತೆಗೆ ಮುನಿಸಿಕೊಂಡು ಗುರ್ ಎಂದ ಮರಿಯಾನೆ
Image
ಸತ್ತು ಹೋದ ಆನೆಯ ತಲೆಬುರುಡೆಯನ್ನು ಕಂಡು ರೋಧಿಸಿದ ಹೆಣ್ಣಾನೆ
Image
ಹುಟ್ಟಿದ ನಂತರ ಮೊದಲ ಬಾರಿಗೆ ನೀರಿನ ಸ್ಪರ್ಶ

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಮಳೆಯಲ್ಲಿ ನೆನೆಯುತ್ತಿದ್ದ ಮಾಲಕಿಗೆ ಆಸರೆಯಾಗಿ ನಿಂತ ಆನೆ

ಈ ವಿಡಿಯೋ ಐದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಎಷ್ಟು ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು ಪ್ರಥಮ ಪೂಜ್ಯ ಗಣಪತಿ ಬಪ್ಪಾನಿಗೆ ಜೈ ಎಂದರೆ ಮತ್ತೊಬ್ಬರು ದೈವಿಕ ಆಶೀರ್ವಾದವೂ ಜೀವನವನ್ನು ರಕ್ಷಣೆ, ಶಾಂತಿ ಹಾಗೂ ಸಮೃದ್ಧಿಯೊಂದಿಗೆ ಮುನ್ನಡೆಸುತ್ತವೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ