AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ

ಮನೆಯಲ್ಲೇ ಕುಳಿತು ಕೆಲಸ ಮಾಡುವುದು ಬೆಸ್ಟ್ ಎನ್ನುವುದು ಅನೇಕರ ಅಭಿಪ್ರಾಯ. ವರ್ಕ್ ಫ್ರಮ್ ಹೋಮ್ ಮಾಡುವವರ ಕಷ್ಟ ಅನುಭವಿಸಿದವರಿಗೆ ಮಾತ್ರ ಗೊತ್ತು. ನೀವು ಬೈಕ್, ಬಸ್ಸ್, ರೈಲಿನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಕೆಲಸ ಮಾಡುವವರನ್ನು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಲ್ಯಾಪ್ ಟಾಪ್ ಹಿಡಿದುಕೊಂಡು ಕುಳಿತಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Jun 17, 2026 | 11:17 AM

Share

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ.

ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಅಸಾಮಾನ್ಯ ಕೆಲಸದ ಸೆಟಪ್ ಅನ್ನು ತೋರಿಸುತ್ತದೆ. ಸಹಾರಾ ಮರುಭೂಮಿಯ ಮಧ್ಯದಲ್ಲಿ ಒಂಟೆಯ ಮೇಲೆ ಸವಾರಿ ಮಾಡುತ್ತ ಉದ್ಯೋಗಿ ಝೂಮ್ ಮೀಟಿಂಗ್ ಹಾಜರಾಗಿದ್ದಾನೆ. ಈ ಕ್ಲಿಪಿಂಗ್ ನಲ್ಲಿ ವಿಶಾಲವಾದ ಸಹರಾ ಮರುಭೂಮಿಯ ದೃಶ್ಯವನ್ನು ನೀವು ನೋಡಬಹುದು. ಇಲ್ಲೊಬ್ಬ ವ್ಯಕ್ತಿ ಒಂಟೆಯ ಮೇಲೆ ವ್ಯಕ್ತಿ ಕುಳಿತುಕೊಂಡಿದ್ದಾನೆ. ಒಂಟೆ ಚಲಿಸುತ್ತಿದ್ದರೂ ಆಫೀಸಿನ ಝೂಮ್ ಮೀಟಿಂಗ್ ಭಾಗಿಯಾಗಿ ಅದರಲ್ಲೇ ಮುಳುಗಿ ಹೋಗಿದ್ದಾನೆ‌.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ಮರುಭೂಮಿಯಲ್ಲಿ ಇಂಟರ್ನೆಟ್ ಸಂಪರ್ಕ ಹೇಗೆ ಸಿಕ್ಕಿತು ಎಂದು ಕೇಳಿದ್ದಾರೆ. ಇನ್ನೊಬ್ಬರು, ಕೆಲಸದ ಮೇಲಿನ ಶ್ರದ್ಧೆಗೆ ನನ್ನದೊಂದು ಸಲಾಂ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ರಿಮೋಟ್ ಕೆಲಸದ ಆದರ್ಶ ಆವೃತ್ತಿಯನ್ನು ಪ್ರತಿನಿಧಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ