AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಲಕ್ಷ ಲಕ್ಷ ಸಂಬಳದ ಕೆಲಸ ಬಿಟ್ಟು ಜಾಲಿ ಟ್ರಿಪ್ ಹೋದ ಉದ್ಯೋಗಿ, ಮುಂದೇನಾಯ್ತು ನೋಡಿ

ಇದ್ದ ಕೆಲಸ ಬಿಟ್ಟರೆ ಮುಂದೇನು ಎನ್ನುವ ಪ್ರಶ್ನೆ ಕಾಡುತ್ತದೆ. ಹೀಗಾಗಿ ಕೆಲಸ ಬಿಡುವ ಮುನ್ನ ಸಾವಿರ ಸಲ ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಉದ್ಯೋಗಿ ಅಧಿಕ ಸಂಬಳವಿರುವ ಉದ್ಯೋಗ ತೊರೆದು ಆರು ತಿಂಗಳ ಕಾಲ ಟ್ರಿಪ್ ಕೈಗೊಂಡಿದ್ದಾನೆ. ಆ ಬಳಿಕ ಈ ಉದ್ಯೋಗಿಯೂ ಏನು ಮಾಡಿದ ಎಂದು ತಿಳಿದ್ರೆ ನೀವು ಅಚ್ಚರಿ ಪಡ್ತೀರಾ. ಈ ಬಗ್ಗೆ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಂಡು ಮುಂದೇನು ಮಾಡಿದೆ ಎಂದು ಹೇಳಿದ್ದಾನೆ. ಈ ಕುರಿತಾದ ಪೋಸ್ಟ್ ಇಲ್ಲಿದೆ.

Viral: ಲಕ್ಷ ಲಕ್ಷ ಸಂಬಳದ ಕೆಲಸ ಬಿಟ್ಟು ಜಾಲಿ ಟ್ರಿಪ್ ಹೋದ ಉದ್ಯೋಗಿ, ಮುಂದೇನಾಯ್ತು ನೋಡಿ
ಸಾಂದರ್ಭಿಕ ಚಿತ್ರImage Credit source: Unsplash
ಸಾಯಿನಂದಾ
|

Updated on: Aug 21, 2025 | 10:59 AM

Share

ಉದ್ಯೋಗ (job)ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟೇ ಓದಿಕೊಂಡಿದ್ದರೂ ಉದ್ಯೋಗ ಸಿಗುವುದೇ ಕಷ್ಟ. ಹೀಗಿರುವಾಗ ಇದ್ದ ಕೆಲಸವನ್ನು ಬಿಟ್ಟರೆ ಮುಂದೇನು ಎನ್ನುವ ಯೋಚನೆ ಬರುತ್ತದೆ. ಆದರೆ ಇಲ್ಲೊಬ್ಬ ಉದ್ಯೋಗಿಯು 65 ಲಕ್ಷ ವಾರ್ಷಿಕ ಸಂಬಳವಿರುವ ಕೆಲಸ ಬಿಟ್ಟು ಆರು ತಿಂಗಳ ಕಾಲ ಜಾಲಿ ಟ್ರಿಪ್‌ಗೆ  ಹೋಗಿದ್ದಾನೆ. ಟ್ರಿಪ್‌ನಿಂದ ಮರಳಿದ ಬಳಿಕ ಅದೇ ಕಂಪನಿಯಲ್ಲಿ ಅಧಿಕ ಸಂಬಳದೊಂದಿಗೆ ಮತ್ತೆ ಕೆಲಸಗಿಟ್ಟಿಸಿಕೊಂಡಿದ್ದಾನೆ. ವೃತ್ತಿ ಜೀವನದ ತನ್ನ ಈ ನಿರ್ಧಾರ ಹಾಗೂ ಕೊನೆಗೆ ತನ್ನ ಆಯ್ಕೆಯ ಬಗ್ಗೆ ರೆಡ್ಡಿಟ್ ಖಾತೆಯಲ್ಲಿ (Reddit Post) ಶೇರ್ ಮಾಡಿಕೊಂಡಿದ್ದು ನೆಟ್ಟಿಗರ ಗಮನ ಸೆಳೆದಿದ್ದಾನೆ.

ಅಧಿಕ ಸಂಬಳದ ಕೆಲಸ ತೊರೆದ ಉದ್ಯೋಗಿ

Creative_System6833 ಎಂಬ ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡ ಡೆವಲಪರ್ ತನ್ನ ವೃತ್ತಿಜೀವನದ ಬಗ್ಗೆ ಹಂಚಿಕೊಂಡಿದ್ದಾನೆ. ಕಳೆದ ವರ್ಷ ನಾನು ವರ್ಷಕ್ಕೆ 65 ಲಕ್ಷ ರೂಪಾಯಿ ಸಂಬಳದ ನನ್ನ ಜಾಬ್‌ ಬಿಟ್ಟೆ. ಉದ್ಯೋಗಕ್ಕಾಗಿ ನಾನು ಬೇರೆ ಕಂಪನಿಗೆ ಹೋಗಲೇ ಇಲ್ಲ, ಕೇವಲ ಒಂದು ಕಾರು ಖರೀದಿಸಿ ಆಮೇಲೆ 6 ತಿಂಗಳು ಪ್ರವಾಸ ಕೈಗೊಂಡೆ. ಲೈಫ್‌ ಎಂಜಾಯ್‌ ಮಾಡಿದೆ, ನನಗೆ ಏನು ಇಷ್ಟವೋ ಅದನ್ನೆಲ್ಲಾ ಈ ಆರು ತಿಂಗಳಲ್ಲಿ ಮಾಡಿ ಮುಗಿಸಿದೆ. ಆರು ತಿಂಗಳು ಮುಗಿದಿದ್ದೆ ತಿಳಿಯಲಿಲ್ಲ. ನನಗೆ ಈ ಬಗ್ಗೆ ಯಾವುದೇ ಪಶ್ಚಾತ್ತಾಪ ಭಾವನೆಯಿಲ್ಲ ಎಂದಿದ್ದಾನೆ.

ಇದನ್ನೂ ಓದಿ
Image
ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಯುವತಿ
Image
ಸ್ಯಾಲರಿ ಕ್ರೆಡಿಟ್ ಆದ ಕೆಲವೇ ನಿಮಿಷಕ್ಕೆ ಜಾಬ್ ರಿಸೈನ್ ಮಾಡಿದ ಉದ್ಯೋಗಿ
Image
ಗರ್ಭಿಣಿ ಪತ್ನಿಗಾಗಿ ಕೋಟಿ ಕೋಟಿ ಸಂಬಳದ ಕೆಲಸ ತ್ಯಜಿಸಿದ ವ್ಯಕ್ತಿ
Image
ಟೈಮ್ ಆದ್ರೂ ಕೆಲಸ ವಹಿಸಿದ ಮ್ಯಾನೇಜರ್, ನೋ ಎಂದು ಆಫೀಸಿನಿಂದ ಹೊರನಡೆದ ಯುವತಿ

ಅದೇ ಕಂಪನಿಗೆ 15% ಹೆಚ್ಚುವರಿ ಸಂಬಳದೊಂದಿಗೆ ಮತ್ತೆ ಜಾಯಿನ್ ಆದ ಉದ್ಯೋಗಿ

ಆದರೆ ಈಗ ನಾನು ಅದೇ ಕಂಪನಿಗೆ 15% ಹೈಕ್‌ ಜೊತೆಯಲ್ಲಿ ಮತ್ತೆ ಕೆಲಸಕ್ಕೆ ಸೇರಿರುವೆ. ಮತ್ತೆ ಈ ಕಂಪನಿಯಲ್ಲಿ ಕೆಲಸ ಮಾಡೋದಕ್ಕೆ ಬಹಳ ಖುಷಿಯಾಗಿದೆ. ಹಣವನ್ನು ವಿಭಿನ್ನವಾಗಿ ನೋಡುತ್ತೇನೆ. ಅದರ ಬಗ್ಗೆ ಹೆಚ್ಚಿನ ಗೌರವವಿದೆ. ಈ ಸಣ್ಣದಾದ ವಿರಾಮವು ನನ್ನನ್ನು ರೀ ಸೆಟ್‌ ಮಾಡಿತು. ಈ ನಿರ್ಧಾರವು ನನಗೆ ದೃಷ್ಟಿಕೋನ, ಉದ್ದೇಶ ಎರಡನ್ನೂ ನೀಡಿತು ಎಂದು ಸ್ಪಷ್ಟವಾಗಿ ಹೇಳಿದ್ದಾನೆ.

ಓದುವ ಆಸೆಯಿದೆ ಎಂದ ಡೆವಲಪರ್

ನನ್ನ ಸಂಬಳವನ್ನು ಯುಎಸ್ ಡಾಲರ್‌ಗಳಲ್ಲಿ ಪಡೆಯುತ್ತೇನೆ. ಭಾರತೀಯ ಕಾನೂನುಗಳ ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಪಡೆಯುತ್ತೇನೆ. ನಾನು ಅಮೆರಿಕದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಂದುವರಿಸುವ ಯೋಚನೆ ಇದೆ. ಇದು ನನ್ನ ಕಂಪನಿಯ ಓನರ್ ಗೆ ಗೊತ್ತು. ನಾನಿನ್ನು ಬ್ಯಾಚುಲರ್, ಹೀಗಾಗಿ ನನ್ನ ಕರಿಯರ್‌ ಜೊತೆ ಆಟ ಆಡಲು ತುಂಬಾನೇ ಸಮಯವಿದೆ. ಹೀಗಾಗಿ ಈ ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಗೆ ನಾನು ಮತ್ತೆ ಉತ್ತಮ ಸಂಬಳ, ತೆರಿಗೆ ಪ್ರಯೋಜನಗಳೊಂದಿಗೆ ಸೇರಿದ್ದೇನೆ. ಭಾರತೀಯ ಕಂಪನಿಗಳು ಈ ರೀತಿ ಮಾಡೋದಿಲ್ಲ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ:Video: ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಬೆಂಗಳೂರಿನ ಯುವತಿ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಳಕೆದಾರರೊಬ್ಬರು, ಈ ರೀತಿ ಬ್ರೇಕ್ ತೆಗೆದುಕೊಂಡು ಸುತ್ತಾಡುವುದು ಅಷ್ಟು ಸುಲಭವಲ್ಲ ಧೈರ್ಯ ಬೇಕು ಎಂದಿದ್ದಾರೆ. ಇನ್ನೊಬ್ಬರು, ತಮ್ಮ ಆದ್ಯತೆಗಳೇನು, ನಿರ್ಧಾರದ ಬಗ್ಗೆ ಸ್ಪಷ್ಟವಾಗಿ ತಿಳಿದಿದ್ದವರು ಮಾತ್ರ ಈ ರೀತಿ ಮಾಡಲು ಸಾಧ್ಯ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ನೀವು ಮತ್ತೆ ಅದೇ ಕಂಪನಿಗೆ ಸೇರಲು ನಿರ್ಧಾರ ಮಾಡಿದ್ದು ಯಾಕೆ, ಕೆಲಸ ಬಿಟ್ಟಿರುವ ಹಿಂದಿನ ಕಾರಣವೇನು ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ