AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ

ಯಾವುದೇ ವ್ಯಕ್ತಿ ಒಂದು ಕಂಪನಿಯಿಂದ ಉದ್ಯೋಗ ತೊರೆಯುವಾಗ ಔಪಚಾರಿಕವಾಗಿ ರಾಜೀನಾಮೆ ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಉದ್ಯೋಗಿ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದಿದ್ದು, ಈ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಾನು ಈ ರೀತಿ ರಾಜೀನಾಮೆ ಪತ್ರ ಬರೆಯುವ ಹಿಂದಿನ ಕಾರಣವನ್ನು ತಿಳಿಸಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Dec 29, 2025 | 1:22 PM

Share

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ವೋಟ್ಪಿಸ್ಮಿಕ್‌ (Whotfismick) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಉದ್ಯೋಗಿಯು ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದಿರುವುದನ್ನು ಕಾಣಬಹುದು. ಕಂಪನಿ ನನ್ನನ್ನು ಹೇಗೆ ನಡೆಸಿಕೊಂಡಿತು ಎಂಬುದರ ಸಂಕೇತವಾಗಿ ನಾನು ಈ ಟಾಯ್ಲೆಟ್ ಪೇಪರ್‌ರನ್ನು ನನ್ನ ರಾಜೀನಾಮೆ ಪತ್ರ ಬರೆಯಲು ಆರಿಸಿಕೊಂಡೆ. ನಾನು ಈ ಕೆಲಸವನ್ನು ತ್ಯಜಿಸುತ್ತೇನೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ:ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ

ಡಿಸೆಂಬರ್ 23 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 1.6 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ವ್ಯಕ್ತಿಯೂ ಕಂಪನಿ ನಡೆಸಿಕೊಂಡ ರೀತಿ ತೀರಾ ವೈಯುಕ್ತಿಕವಾಗಿ ತೆಗೆದುಕೊಂಡ ಎನಿಸುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ಕಂಪನಿಗೆ ಮುಟ್ಟಿಕೊಳ್ಳುವಂತಹ ಉತ್ತರ ನೀಡಿದ ಉದ್ಯೋಗಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅತ್ಯದ್ಭುತ ಪ್ರತಿಭೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!