AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮನಬಿಲ್ಲಿನ ಬಣ್ಣಕ್ಕೆ ತಿರುಗಿದ ನೀಲಗಿರಿ ಮರದ ತೊಗಟೆ: ಫೋಟೋ ನೋಡಿ ಅಚ್ಚರಿಗೊಂಡ ನೆಟ್ಟಿಗರು

ನೀಲಗಿರಿ ಮರಗಳು ಕಾಮನಬಿಲ್ಲಿನ ಬಣ್ಣದ ತೊಗಟೆಯನ್ನು ಹೊಂದಿರುವ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಸುಸಾಂತ್​ ನಂದ ಅವರು ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ.

ಕಾಮನಬಿಲ್ಲಿನ ಬಣ್ಣಕ್ಕೆ ತಿರುಗಿದ ನೀಲಗಿರಿ ಮರದ ತೊಗಟೆ: ಫೋಟೋ ನೋಡಿ ಅಚ್ಚರಿಗೊಂಡ ನೆಟ್ಟಿಗರು
ನೀಲಗಿರಿ ಮರ
TV9 Web
| Edited By: |

Updated on:Mar 17, 2022 | 3:40 PM

Share

ಪ್ರಕೃತಿ ಸದಾ ಸೋಜಿಗದ ತಾಣ. ಒಂದಲ್ಲ ಒಂದು ವಿಸ್ಮಯವನ್ನು ತನ್ನೊಳಗಿಟ್ಟುಕೊಂಡು ಅಚ್ಚರಿಯನ್ನು ಉಂಟುಮಾಡುತ್ತದೆ. ಇದೀಗ ನೀಲಗಿರಿ ಮರಗಳು (Eucalyptus Tree) ಕಾಮನಬಿಲ್ಲಿನ ಬಣ್ಣದ ತೊಗಟೆಯನ್ನು ಹೊಂದಿರುವ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್​ ಆಗಿದೆ. ಐಎಫ್​ಎಸ್​ ಅಧಿಕಾರಿ ಸುಸಾಂತ್​ ನಂದ ಅವರು ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ನೀಲಗಿರ ಮರವೊಂದು ಕಾಮನಬಿಲ್ಲಿನ ಬಣ್ಣವನ್ನು ಹೊಂದಿರುವುದು ಸದ್ಯ ನೆಟ್ಟಿಗರನ್ನು ಅಚ್ಚರಿಗೊಳಿಸಿದೆ. ನೈಜವಾಗಿಯೂ ಮರ ಅದೇ ರೀತಿ ಇದೆ ಎಂದು ಹೇಳಲಾಗಿದೆ.

ಫೋಟೋ ಹಂಚಿಕೊಂಡ ಸುಸಾಂತ್​ ಅವರು  ಕಾಮನಬಿಲ್ಲಿನಂತೆ ಕಾಣುವ ನೀಲಗಿರಿ ಮರವು ಉತ್ತರ ಗೋಳಾರ್ಧದಲ್ಲಿ ಸ್ಥಳೀಯವಾಗಿರುವ ಏಕೈಕ ನೀಲಗಿರಿ ಮರವಾಗಿದೆ. ಇದು ವಿಶ್ವದ ಅತ್ಯಂತ ವರ್ಣರಂಜಿತ ಮರವಾಗಿದೆ. ಪ್ರತಿ ಋತುವಿನ ಅಂತ್ಯದಲ್ಲಿಯೂ ತೊಗಟೆಯು ಸಿಪ್ಪೆ ಸುಲಿಯುವುದರಿಂದ ಮಳೆಬಿಲ್ಲಿನಂತೆ ಕಾಣುತ್ತದೆ, ಇದು ಕೆಳಗಿನ ತಾಜಾ, ಗಾಢ ಬಣ್ಣದ ತೊಗಟೆಯನ್ನು ಬಹಿರಂಗಪಡಿಸುತ್ತದೆಎಂದು ಪೋಸ್ಟ್‌ನ ಕ್ಯಾಪ್ಷನ್​ನಲ್ಲಿ ಕಾಮನಬಿಲ್ಲಿನ ನೀಲಗಿರಿ ಮರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುಂದರವಾದ ಮರವನ್ನು ನೋಡಿ ನೆಟ್ಟಿಗರು ವಿಸ್ಮಯಗೊಂಡಿದ್ದಾರೆ. ಇದನ್ನು ಪ್ರಕೃತಿಯ ವಿಶಿಷ್ಟ ಚಿತ್ರ ಎಂದು ಕರೆದಿದ್ದಾರೆ. ಕಾಮನಬಿಲ್ಲಿನ ಯೂಕಲಿಪ್ಟಸ್​ ಮರಗಳು ತಗ್ಗು ಪ್ರದೇಶ ಮಳೆಕಾಡಿನಲ್ಲಿ ಸಮುದ್ರ ಮಟ್ಟದಿಂದ 1,800 ಮೀ (5,900 ಅಡಿ) ಎತ್ತರದಲ್ಲಿ ಬೆಳೆಯುತ್ತದೆ. ಇದು ಇಂಡೋನೇಷ್ಯಾ, ಪಪುವಾ ನ್ಯೂ ಗಿನಿಯಾ ಮತ್ತು ಫಿಲಿಪೈನ್ಸ್‌ಗೆ ಸ್ಥಳೀಯವಾಗಿದೆ, ಆದರೆ ಅನೇಕ ಇತರ ದೇಶಗಳಲ್ಲಿ ವ್ಯಾಪಕವಾಗಿ ನೆಡಲಾಗಿದೆ.

ಇದನ್ನೂ ಓದಿ:

Viral Video: ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು

Published On - 3:40 pm, Thu, 17 March 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ