AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ: ಪಾಪ ನಿಂತುಕೊಂಡೇ ಐಪಿಎಲ್​ ಪಂದ್ಯ ವೀಕ್ಷಿಸಿದ ಫ್ಯಾನ್ಸ್​​

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯವನ್ನು ನೋಡಬೇಕೆಂದು ಉತ್ಸುಕರಾಗಿದ್ದ ವ್ಯಕ್ತಿಯೊಬ್ಬರು ಪಂದ್ಯದ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ದುರದೃಷ್ಟವಶಾತ್, ಅವರು ಸೀಟು ಕಾಯ್ದಿರಿಸಿದರೂ ಇಡೀ ಪಂದ್ಯವನ್ನು ನಿಂತು ನೋಡುವ ಪರಿಸ್ಥಿತಿ ಎದುರಾಗಿದೆ.

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ: ಪಾಪ ನಿಂತುಕೊಂಡೇ ಐಪಿಎಲ್​ ಪಂದ್ಯ ವೀಕ್ಷಿಸಿದ ಫ್ಯಾನ್ಸ್​​
ನಿಂತುಕೊಂಡು ಪಂದ್ಯ ನೋಡುತ್ತಿರುವ ಅಭಿಮಾನಿ
ಗಂಗಾಧರ​ ಬ. ಸಾಬೋಜಿ
|

Updated on:Apr 07, 2024 | 7:50 PM

Share

2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಈಗಾಗಲೇ ಶುರುವಾಗಿ ಕೆಲ ದಿನಗಳಾಗಿದೆ. ಪ್ರತಿ ಬಾರಿಯಂತೆ ಈ ಸಲ ಕೂಡ ತಮ್ಮ ನೆಚ್ಚಿನ ಆಟಗಾರರು ಮತ್ತು ತಂಡವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕ್ರೀಡಾಂಗಣಗಳಿಗೆ ಮುಗಿ ಬೀಳುತ್ತಿದ್ದಾರೆ. ಐಪಿಎಲ್​ನ ಪ್ರತಿ ಪಂದ್ಯಕ್ಕೂ ಟಿಕೆಟ್​ ದರ ದುಬಾರಿ ಇದೆ. ಅಷ್ಟಾದರೂ ಅಭಿಮಾನಿಗಳು ಟಿಕೆಟ್​ಗಳನ್ನು ಖರೀದಿಸುತ್ತಿದ್ದಾರೆ. ಆದರೆ ಇಲ್ಲೊಬ್ಬರು ಫ್ಯಾನ್ಸ್​ಗೆ ಟಿಕೆಟ್​ ಸಿಕ್ಕಿದ್ದರೂ ಕೂಡ ಕುಳಿತುಕೊಳ್ಳಲು ಕುರ್ಚಿ ಮಾತ್ರ ಸಿಕ್ಕಿಲ್ಲ. ಹೌದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯವನ್ನು ನೋಡಬೇಕೆಂದು ಉತ್ಸುಕರಾಗಿದ್ದ ವ್ಯಕ್ತಿಯೊಬ್ಬರು ಪಂದ್ಯದ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ದುರದೃಷ್ಟವಶಾತ್, ಅವರು ಸೀಟು ಕಾಯ್ದಿರಿಸಿದರೂ ಇಡೀ ಪಂದ್ಯವನ್ನು ನಿಂತು ನೋಡುವ ಪರಿಸ್ಥಿತಿ ಎದುರಾಗಿದೆ.

ಜುನೈದ್ ಅಹ್ಮದ್ ಎಂಬ ವ್ಯಕ್ತಿ SRH ಮತ್ತು CSK ಪಂದ್ಯ ನೋಡಲು 4.5 ಸಾವಿರ ರೂ. ನೀಡಿ ಟಿಕೆಟ್‌ ಖರೀದಿಸಿದ್ದಾರೆ. ಆದರೆ ಅವರು ಸ್ಟೇಡಿಯಂ ಹೋಗಿ ನೋಡಿದಾಗ ಅವರಿಗೆ ಆಸನ ಪತ್ತೆ ಆಗಿಲ್ಲ. ಈ ಕುರಿತಾಗಿ ಅವರು ತಮ್ಮ ಎಕ್ಸ್​ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ‘ನಾನು ಟಿಕೆಟ್ ಕಾಯ್ದಿರಿಸಿದ್ದೇನೆ. ಆಸನ ಸಂಖ್ಯೆ ಜೆ 66. ಆದರೆ ನಾನು ನಿಂತುಕೊಂಡು ಪಂದ್ಯ ನೋಡಿದ್ದೇನೆ’ ಎಂದು ಬೇಸರಗೊಂಡಿದ್ದಾರೆ.

‘ಕಾಯ್ದಿರಿಸಿದ್ದ ಆಸನವು ಕಾಣೆಯಾಗಿದ್ದು, ನಿಂತುಕೊಂಡು ಪಂದ್ಯವನ್ನು ಆನಂದಿಸಬೇಕಾಗಿತ್ತು. ಇದಕ್ಕಾಗಿ ನಾನು ಮರುಪಾವತಿ ಮತ್ತು ಪರಿಹಾರವನ್ನು ಪಡೆಯುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎದೆಯ ಮೇಲೆ ಫ್ಯಾನ್​ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಿ ಎಂದ ನೆಟ್ಟಿಗರು

ಜುನೈದ್ ಅಹ್ಮದ್ ಅವರು ತಮ್ಮ ಬೇಸರವನ್ನು ಎಕ್ಸ್​ನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಜನರು ಈ ರೀತಿಯ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಓರ್ವ ನಾಯಕ ಬಂದು ಕುರ್ಚಿಯನ್ನು ಕದ್ದಿರಬೇಕು. ಏಕೆಂದರೆ ಅವರಿಗೆ ಕುರ್ಚಿಯೆಂದರೆ ಇಷ್ಟವೆಂದಿದ್ದಾರೆ. ಮತ್ತೊಬ್ಬರು ಇದು “ಸ್ಕ್ಯಾಮ್ 2024” ಎಂದು ಕರೆದಿದ್ದಾರೆ.

ಸಂಖ್ಯೆಯ ಅನುಗುಣವಾಗಿ ಆಸನವು ಕೆಲಸ ಮಾಡುವುದಿಲ್ಲ ಭಾಯ್, ಇದು ಮೊದಲು ಬಂದವರಿಗೆ ಮೊದಲ ಸೇವೆಯ ಆಧಾರದ ಮೇಲೆ ಎಂದಿದ್ದಾರೆ. ಮತ್ತೊಬ್ಬರು, ಇದು ಹೈದರಾಬಾದ್‌ನಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ಭಾವೈಕ್ಯತೆಯ ಸಂಗಮ; ದೇವಾಲಯಕ್ಕೆ ತೆರಳುವ ಭಕ್ತರಿಗಾಗಿ ಮುಸ್ಲಿಂ ವ್ಯಕ್ತಿಯ ಮಾನವೀಯ ಕಾರ್ಯ

ಪಂದ್ಯ ನಡುವೆ ಜುನೈದ್ ಅಹ್ಮದ್​ ಮತ್ತೊಂದು ಟ್ವೀಟ್​ ಮಾಡಿದ್ದು, ಕಾಣೆಯಾಗಿದ್ದ ಜೆ 69-70 ಆಸನವು ಪಂದ್ಯದ ಇನ್ನಿಂಗ್ಸ್​ನಲ್ಲಿ ಪತ್ತೆಯಾಗಿದೆ. ಯಾರೋ ಅದನ್ನು ಅದಲು ಬದಲು ಮಾಡದ್ದಾರೆ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 pm, Sun, 7 April 24

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ