ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ: ಪಾಪ ನಿಂತುಕೊಂಡೇ ಐಪಿಎಲ್​ ಪಂದ್ಯ ವೀಕ್ಷಿಸಿದ ಫ್ಯಾನ್ಸ್​​

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯವನ್ನು ನೋಡಬೇಕೆಂದು ಉತ್ಸುಕರಾಗಿದ್ದ ವ್ಯಕ್ತಿಯೊಬ್ಬರು ಪಂದ್ಯದ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ದುರದೃಷ್ಟವಶಾತ್, ಅವರು ಸೀಟು ಕಾಯ್ದಿರಿಸಿದರೂ ಇಡೀ ಪಂದ್ಯವನ್ನು ನಿಂತು ನೋಡುವ ಪರಿಸ್ಥಿತಿ ಎದುರಾಗಿದೆ.

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ: ಪಾಪ ನಿಂತುಕೊಂಡೇ ಐಪಿಎಲ್​ ಪಂದ್ಯ ವೀಕ್ಷಿಸಿದ ಫ್ಯಾನ್ಸ್​​
ನಿಂತುಕೊಂಡು ಪಂದ್ಯ ನೋಡುತ್ತಿರುವ ಅಭಿಮಾನಿ
Follow us
|

Updated on:Apr 07, 2024 | 7:50 PM

2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಈಗಾಗಲೇ ಶುರುವಾಗಿ ಕೆಲ ದಿನಗಳಾಗಿದೆ. ಪ್ರತಿ ಬಾರಿಯಂತೆ ಈ ಸಲ ಕೂಡ ತಮ್ಮ ನೆಚ್ಚಿನ ಆಟಗಾರರು ಮತ್ತು ತಂಡವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕ್ರೀಡಾಂಗಣಗಳಿಗೆ ಮುಗಿ ಬೀಳುತ್ತಿದ್ದಾರೆ. ಐಪಿಎಲ್​ನ ಪ್ರತಿ ಪಂದ್ಯಕ್ಕೂ ಟಿಕೆಟ್​ ದರ ದುಬಾರಿ ಇದೆ. ಅಷ್ಟಾದರೂ ಅಭಿಮಾನಿಗಳು ಟಿಕೆಟ್​ಗಳನ್ನು ಖರೀದಿಸುತ್ತಿದ್ದಾರೆ. ಆದರೆ ಇಲ್ಲೊಬ್ಬರು ಫ್ಯಾನ್ಸ್​ಗೆ ಟಿಕೆಟ್​ ಸಿಕ್ಕಿದ್ದರೂ ಕೂಡ ಕುಳಿತುಕೊಳ್ಳಲು ಕುರ್ಚಿ ಮಾತ್ರ ಸಿಕ್ಕಿಲ್ಲ. ಹೌದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಪಂದ್ಯವನ್ನು ನೋಡಬೇಕೆಂದು ಉತ್ಸುಕರಾಗಿದ್ದ ವ್ಯಕ್ತಿಯೊಬ್ಬರು ಪಂದ್ಯದ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ದುರದೃಷ್ಟವಶಾತ್, ಅವರು ಸೀಟು ಕಾಯ್ದಿರಿಸಿದರೂ ಇಡೀ ಪಂದ್ಯವನ್ನು ನಿಂತು ನೋಡುವ ಪರಿಸ್ಥಿತಿ ಎದುರಾಗಿದೆ.

ಜುನೈದ್ ಅಹ್ಮದ್ ಎಂಬ ವ್ಯಕ್ತಿ SRH ಮತ್ತು CSK ಪಂದ್ಯ ನೋಡಲು 4.5 ಸಾವಿರ ರೂ. ನೀಡಿ ಟಿಕೆಟ್‌ ಖರೀದಿಸಿದ್ದಾರೆ. ಆದರೆ ಅವರು ಸ್ಟೇಡಿಯಂ ಹೋಗಿ ನೋಡಿದಾಗ ಅವರಿಗೆ ಆಸನ ಪತ್ತೆ ಆಗಿಲ್ಲ. ಈ ಕುರಿತಾಗಿ ಅವರು ತಮ್ಮ ಎಕ್ಸ್​ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ‘ನಾನು ಟಿಕೆಟ್ ಕಾಯ್ದಿರಿಸಿದ್ದೇನೆ. ಆಸನ ಸಂಖ್ಯೆ ಜೆ 66. ಆದರೆ ನಾನು ನಿಂತುಕೊಂಡು ಪಂದ್ಯ ನೋಡಿದ್ದೇನೆ’ ಎಂದು ಬೇಸರಗೊಂಡಿದ್ದಾರೆ.

‘ಕಾಯ್ದಿರಿಸಿದ್ದ ಆಸನವು ಕಾಣೆಯಾಗಿದ್ದು, ನಿಂತುಕೊಂಡು ಪಂದ್ಯವನ್ನು ಆನಂದಿಸಬೇಕಾಗಿತ್ತು. ಇದಕ್ಕಾಗಿ ನಾನು ಮರುಪಾವತಿ ಮತ್ತು ಪರಿಹಾರವನ್ನು ಪಡೆಯುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎದೆಯ ಮೇಲೆ ಫ್ಯಾನ್​ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಿ ಎಂದ ನೆಟ್ಟಿಗರು

ಜುನೈದ್ ಅಹ್ಮದ್ ಅವರು ತಮ್ಮ ಬೇಸರವನ್ನು ಎಕ್ಸ್​ನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಜನರು ಈ ರೀತಿಯ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಓರ್ವ ನಾಯಕ ಬಂದು ಕುರ್ಚಿಯನ್ನು ಕದ್ದಿರಬೇಕು. ಏಕೆಂದರೆ ಅವರಿಗೆ ಕುರ್ಚಿಯೆಂದರೆ ಇಷ್ಟವೆಂದಿದ್ದಾರೆ. ಮತ್ತೊಬ್ಬರು ಇದು “ಸ್ಕ್ಯಾಮ್ 2024” ಎಂದು ಕರೆದಿದ್ದಾರೆ.

ಸಂಖ್ಯೆಯ ಅನುಗುಣವಾಗಿ ಆಸನವು ಕೆಲಸ ಮಾಡುವುದಿಲ್ಲ ಭಾಯ್, ಇದು ಮೊದಲು ಬಂದವರಿಗೆ ಮೊದಲ ಸೇವೆಯ ಆಧಾರದ ಮೇಲೆ ಎಂದಿದ್ದಾರೆ. ಮತ್ತೊಬ್ಬರು, ಇದು ಹೈದರಾಬಾದ್‌ನಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ಭಾವೈಕ್ಯತೆಯ ಸಂಗಮ; ದೇವಾಲಯಕ್ಕೆ ತೆರಳುವ ಭಕ್ತರಿಗಾಗಿ ಮುಸ್ಲಿಂ ವ್ಯಕ್ತಿಯ ಮಾನವೀಯ ಕಾರ್ಯ

ಪಂದ್ಯ ನಡುವೆ ಜುನೈದ್ ಅಹ್ಮದ್​ ಮತ್ತೊಂದು ಟ್ವೀಟ್​ ಮಾಡಿದ್ದು, ಕಾಣೆಯಾಗಿದ್ದ ಜೆ 69-70 ಆಸನವು ಪಂದ್ಯದ ಇನ್ನಿಂಗ್ಸ್​ನಲ್ಲಿ ಪತ್ತೆಯಾಗಿದೆ. ಯಾರೋ ಅದನ್ನು ಅದಲು ಬದಲು ಮಾಡದ್ದಾರೆ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 pm, Sun, 7 April 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ