Viral Video: ಚೀನಾದ ಅತಿ ಎತ್ತರದ ಜಲಪಾತ ಕೂಡಾ ನಕಲಿಯಂತೆ, ಕ್ಯಾಮೆರಾದಲ್ಲಿ ಸೆರೆಯಾಯಿತು ಅಸಲಿಯತ್ತು  

ಚೀನಾದ ಎತ್ತರದ ಜಲಪಾತ ಅಂತಾನೇ ಪ್ರಸಿದ್ಧಿ ಪಡೆದಿರುವ ಯುಂಟೈ ಜಲಪಾತದ ರಹಸ್ಯ ಇದೀಗ ಬಯಲಾಗಿದ್ದು, ಈ ಎತ್ತರದ ಜಲಪಾತಕ್ಕೆ ಪೈಪ್ಗಳ ಮೂಲಕ ನೀರು ಪೂರೈಸುತ್ತಿರುವ ದೃಶ್ಯವನ್ನು ಪ್ರವಾಸಿಗರೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಚೀನಾದ ಈ ನಕಲಿ ಜಲಪಾತದ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. 

Viral Video: ಚೀನಾದ ಅತಿ ಎತ್ತರದ ಜಲಪಾತ ಕೂಡಾ ನಕಲಿಯಂತೆ, ಕ್ಯಾಮೆರಾದಲ್ಲಿ ಸೆರೆಯಾಯಿತು ಅಸಲಿಯತ್ತು  
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 11, 2024 | 12:12 PM

ನಕಲಿ ವಸ್ತುಗಳನ್ನು ತಯಾರಿಸುವುದರಲ್ಲಿ ಚೀನಾ ಎತ್ತಿದ ಕೈ. ಇವರ ನಕಲಿ ಪದಾರ್ಥಗಳ ಹಾವಳಿ ಹೆಚ್ಚಿದ್ದು, ಚೀನಾದ ಅದೆಷ್ಟೋ ನಕಲಿ ವಸ್ತುಗಳು ಅರಿವಿಲ್ಲದಂತೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿ ಸುಲಭವಾಗಿ ಜನರ ಕೈಗೆಟುಕುತ್ತಿವೆ. ಚೀನಾದಲ್ಲಿ ತಯಾರಾಗುವಂತಹ ಉತ್ಪನ್ನಗಳು ಮಾತ್ರವಲ್ಲ ಇಲ್ಲಿನ ಪ್ರಸಿದ್ಧ ಜಲಪಾತ ಕೂಡಾ ನಕಲಿಯಂತೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಚೀನಾದ ಹೆನಾನ್ ಪ್ರಾಂತ್ಯದಲ್ಲಿರುವ  ಯುಂಟೈ ಜಲಪಾತ ಏಷ್ಯಾದ ಅತೀ ಎತ್ತರದ ನೈಸರ್ಗಿಕ ಜಲಪಾತ ಎಂಬ ಖ್ಯಾತಿಯನ್ನು ಪಡೆದಿದೆ. ಇಲ್ಲಿನ ಪ್ರಕೃತಿಯ ರಮಣೀಯ ದೃಶ್ಯವನ್ನು ಸವಿಯಲು  ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಇತ್ತೀಚಿಗೆ ಈ ಜಲಪಾತಕ್ಕೆ ಸಂಬಂಧಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಇದು ನೈಸರ್ಗಿಕ ಜಲಪಾತವಲ್ಲ ಬದಲಿಗೆ ಇಲ್ಲಿ ಪೈಪ್ನಲ್ಲಿ ನೀರು ಬಿಡುವ ಮೂಲಕ ಪ್ರವಾಸಿಗರನ್ನು ಮರುಳು ಮಾಡಲಾಗುತ್ತಿದೆ ಎಂಬ ಆಪಾದನೆ ಕೇಳಿಬಂದಿದೆ.

ಪ್ರವಾಸಿಗರೊಬ್ಬರು ಯುಂಟೈ ಪರ್ವತದ ಮೇಲ್ಭಾಗಕ್ಕೆ ಟ್ರೆಕ್ಕಿಂಗ್ ಹೋದ ಸಂದರ್ಭದಲ್ಲಿ ಇಲ್ಲಿನ ಜಲಪಾತಕ್ಕೆ ಪೈಪ್ ಮೂಲಕ ನೀರು ಹರಿಬಿಡುತ್ತಿದ ವಿಚಾರವನ್ನು ಅವರು ಪತ್ತೆ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ಇದರ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲೂ ಹರಿಬಿಟ್ಟಿದ್ದಾರೆ. ಈ ವಿಡಿಯೋ ದೃಶ್ಯಾವಳಿ ವೈರಲ್ ಆಗುತ್ತಿದ್ದಂತೆ ಇಲ್ಲಿನ ಆಡಳಿತ ಮಂಡಳಿ “ಪ್ರವಾಸಿಗರೂ ಇಲ್ಲಿ ಹೆಚ್ಚು ಬರುತ್ತಿದ್ದು, ಮಳೆಯಿಲ್ಲದ ಕಾರಣ  ಜಲಪಾತ ಬರಿದಾಗಬಾರದೆಂದು ಪೈಪ್ ಮೂಲಕ ನೀರು ಬಿಡಲಾಗುತ್ತಿದೆ” ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ಮಾತು ಬಾರದ ಮಗನ ಮೊದಲ ತೊದಲು ನುಡಿಗಳನ್ನು ಕೇಳಿ ಭಾವುಕಳಾದ ತಾಯಿ

ಈ ಕುರಿತ ವಿಡಿಯೋವನ್ನು Shanghai Daily ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಜಲಪಾತದ ಮೇಲ್ಭಾಗದಲ್ಲಿ ಪೈಪ್ ಮೂಲಕ ನೀರು ಹರಿಬಿಡುತ್ತಿರುವ ದೃಶ್ಯವನ್ನು ಕಾಣಬಹುದು. ಮೇ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋ 31 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದ್ದು, ಇದೆಲ್ಲಾ ಮೇಡ್ ಚೀನಾದ ಪ್ರಭಾವ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ