AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನ ತುಂಬ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ರಾಷ್ಟ್ರಗೀತೆ; ಜನರೆಲ್ಲ ನಿಂತು ಸಲ್ಯೂಟ್ ಮಾಡೋದು ನೋಡೋದೇ ಚೆಂದ!

ಪ್ರತಿದಿನ ಬೆಳಗ್ಗೆ ಸರಿಯಾಗಿ 8.30 ಗಂಟೆಗೆ ತೆಲಂಗಾಣದ ನಲ್ಗೊಂಡ ಪಟ್ಟಣದ 12 ಪ್ರಮುಖ ಜಂಕ್ಷನ್‌ಗಳಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸಲಾಗುತ್ತದೆ.

ಈ ಊರಿನ ತುಂಬ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ರಾಷ್ಟ್ರಗೀತೆ; ಜನರೆಲ್ಲ ನಿಂತು ಸಲ್ಯೂಟ್ ಮಾಡೋದು ನೋಡೋದೇ ಚೆಂದ!
ತೆಲಂಗಾಣದಲ್ಲಿ ರಾಷ್ಟ್ರಗೀತೆಗೆ ರಸ್ತೆಯಲ್ಲೇ ನಿಂತು ಸಲ್ಯೂಟ್ ಮಾಡುತ್ತಿರುವ ಜನರು
TV9 Web
| Edited By: |

Updated on:Jan 29, 2022 | 6:40 PM

Share

ಹೈದರಾಬಾದ್: ಕೇವಲ ಸ್ವಾತಂತ್ರ್ಯ ದಿನಾಚರಣೆ (Independence Day), ಗಣರಾಜ್ಯೋತ್ಸವದ ದಿನ (Republic Day) ಮಾತ್ರವಲ್ಲ ತೆಲಂಗಾಣದ ಈ ಊರಿನಲ್ಲಿ ಪ್ರತಿದಿನವೂ ರಾಷ್ಟ್ರಗೀತೆಯನ್ನು ಮೊಳಗಿಸಲಾಗುತ್ತದೆ. ಪ್ರತಿದಿನ ಬೆಳಗ್ಗೆ ಸರಿಯಾಗಿ 8.30 ಗಂಟೆಗೆ ತೆಲಂಗಾಣದ ನಲ್ಗೊಂಡ ಪಟ್ಟಣದ 12 ಪ್ರಮುಖ ಜಂಕ್ಷನ್‌ಗಳಲ್ಲಿ ರಾಷ್ಟ್ರಗೀತೆಯನ್ನು (National Anthem) ಮೊಳಗಿಸಲಾಗುತ್ತದೆ. ಈ ವೇಳೆ ಆ ನಗರದಲ್ಲಿರುವ ಎಲ್ಲಾ ನಾಗರಿಕರು ಅವರು ಏನು ಮಾಡುತ್ತಿದ್ದರೂ ಆ ಕೆಲಸವನ್ನು ಅಲ್ಲೇ ಬಿಟ್ಟು ಪ್ರತಿದಿನ ಬೆಳಿಗ್ಗೆ ಆ 52 ಸೆಕೆಂಡುಗಳ ಕಾಲ ನಿಂತು, ಸಲ್ಯೂಟ್ ಮಾಡಿ ರಾಷ್ಟ್ರಗೀತೆಗೆ ಗೌರವ ಸೂಚಿಸುತ್ತಾರೆ.

ಈ ಹೊಸ ಪದ್ಧತಿಯು ಎಲ್ಲಾ ಜಾತಿ ಮತ್ತು ಧರ್ಮದ ಜನರನ್ನು ಪ್ರತಿದಿನ ಬೆಳಿಗ್ಗೆ ರಾಷ್ಟ್ರಗೀತೆ ಹಾಡಲು ಒಟ್ಟಿಗೆ ತಂದಿದೆ. ಈ ಪದ್ಧತಿಯನ್ನು ಈ ವರ್ಷದ ಜನವರಿ 23ರಂದು ಪ್ರಾರಂಭಿಸಲಾಯಿತು. ಜನ ಗಣ ಮನ ಉತ್ಸವ ಸಮಿತಿ ಅಧ್ಯಕ್ಷ ಕರ್ನಾಟಿ ವಿಜಯ್ ಕುಮಾರ್ ಮತ್ತು ಅವರ ಸ್ನೇಹಿತರು ತಮ್ಮ ಊರಿನಲ್ಲಿ ಈ ಅಭ್ಯಾಸ ಆರಂಭಿಸಿದರು. ಪ್ರತಿದಿನ ಬೆಳಿಗ್ಗೆ ರಾಷ್ಟ್ರಗೀತೆ ಹಾಡುವುದರಿಂದ ಜನರಲ್ಲಿ ದೇಶಭಕ್ತಿ ಹೆಚ್ಚಾಗುತ್ತದೆ ಎಂಬ ನಂಬಿಕೆ ಅವರದ್ದು.

ಈ ಅಭ್ಯಾಸ ಈಗ ತೆಲಂಗಾಣದ ನಲ್ಗೊಂಡ ಸುತ್ತಮುತ್ತಲಿನ ಹಲವಾರು ಸಣ್ಣ ಪಟ್ಟಣಗಳಿಗೆ ಹರಡಿದೆ. 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ-ಭಾರತದ ಘರ್ಷಣೆಯ ಸಮಯದಲ್ಲಿ ಸಾವನ್ನಪ್ಪಿದ ಕರ್ನಲ್ ಸಂತೋಷ್ ಬಾಬು ಅವರು ತೆಲಂಗಾಣದ ನಲ್ಗೊಂಡ ಪ್ರದೇಶದಲ್ಲಿ ಹುಟ್ಟಿ ಬೆಳೆದವರು. ಆ ನೆನಪಿನಲ್ಲಿ ದಿನವೂ ಬೆಳಗ್ಗೆ ರಾಷ್ಟ್ರಗೀತೆ ಮೊಳಗಿಸಲಾಗುತ್ತಿದೆ.

ಇದನ್ನೂ ಓದಿ: Interesting Facts: ಭಾರತದ ಈ ಒಂದು ರೈಲು ನಿಲ್ದಾಣಕ್ಕೆ ಹೆಸರೇ ಇಲ್ಲ; ಇದರ ಕತೆಯೇ ರೋಚಕ!

ದುಬೈ ಬಿಟ್ಟು ಬಂದು ಕಾಸರಗೋಡಿನಲ್ಲಿ ಅಡಿಕೆ ಹಾಳೆಯ ಪ್ಲೇಟ್ ತಯಾರಿಸುತ್ತಿರುವ ದಂಪತಿ; ಇವರ ಆದಾಯ ಕೇಳಿದ್ರೆ ಅಚ್ಚರಿ ಪಡ್ತೀರ!

Published On - 6:38 pm, Sat, 29 January 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ