AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನ ತುಂಬ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ರಾಷ್ಟ್ರಗೀತೆ; ಜನರೆಲ್ಲ ನಿಂತು ಸಲ್ಯೂಟ್ ಮಾಡೋದು ನೋಡೋದೇ ಚೆಂದ!

ಪ್ರತಿದಿನ ಬೆಳಗ್ಗೆ ಸರಿಯಾಗಿ 8.30 ಗಂಟೆಗೆ ತೆಲಂಗಾಣದ ನಲ್ಗೊಂಡ ಪಟ್ಟಣದ 12 ಪ್ರಮುಖ ಜಂಕ್ಷನ್‌ಗಳಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸಲಾಗುತ್ತದೆ.

ಈ ಊರಿನ ತುಂಬ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ರಾಷ್ಟ್ರಗೀತೆ; ಜನರೆಲ್ಲ ನಿಂತು ಸಲ್ಯೂಟ್ ಮಾಡೋದು ನೋಡೋದೇ ಚೆಂದ!
ತೆಲಂಗಾಣದಲ್ಲಿ ರಾಷ್ಟ್ರಗೀತೆಗೆ ರಸ್ತೆಯಲ್ಲೇ ನಿಂತು ಸಲ್ಯೂಟ್ ಮಾಡುತ್ತಿರುವ ಜನರು
TV9 Web
| Edited By: |

Updated on:Jan 29, 2022 | 6:40 PM

Share

ಹೈದರಾಬಾದ್: ಕೇವಲ ಸ್ವಾತಂತ್ರ್ಯ ದಿನಾಚರಣೆ (Independence Day), ಗಣರಾಜ್ಯೋತ್ಸವದ ದಿನ (Republic Day) ಮಾತ್ರವಲ್ಲ ತೆಲಂಗಾಣದ ಈ ಊರಿನಲ್ಲಿ ಪ್ರತಿದಿನವೂ ರಾಷ್ಟ್ರಗೀತೆಯನ್ನು ಮೊಳಗಿಸಲಾಗುತ್ತದೆ. ಪ್ರತಿದಿನ ಬೆಳಗ್ಗೆ ಸರಿಯಾಗಿ 8.30 ಗಂಟೆಗೆ ತೆಲಂಗಾಣದ ನಲ್ಗೊಂಡ ಪಟ್ಟಣದ 12 ಪ್ರಮುಖ ಜಂಕ್ಷನ್‌ಗಳಲ್ಲಿ ರಾಷ್ಟ್ರಗೀತೆಯನ್ನು (National Anthem) ಮೊಳಗಿಸಲಾಗುತ್ತದೆ. ಈ ವೇಳೆ ಆ ನಗರದಲ್ಲಿರುವ ಎಲ್ಲಾ ನಾಗರಿಕರು ಅವರು ಏನು ಮಾಡುತ್ತಿದ್ದರೂ ಆ ಕೆಲಸವನ್ನು ಅಲ್ಲೇ ಬಿಟ್ಟು ಪ್ರತಿದಿನ ಬೆಳಿಗ್ಗೆ ಆ 52 ಸೆಕೆಂಡುಗಳ ಕಾಲ ನಿಂತು, ಸಲ್ಯೂಟ್ ಮಾಡಿ ರಾಷ್ಟ್ರಗೀತೆಗೆ ಗೌರವ ಸೂಚಿಸುತ್ತಾರೆ.

ಈ ಹೊಸ ಪದ್ಧತಿಯು ಎಲ್ಲಾ ಜಾತಿ ಮತ್ತು ಧರ್ಮದ ಜನರನ್ನು ಪ್ರತಿದಿನ ಬೆಳಿಗ್ಗೆ ರಾಷ್ಟ್ರಗೀತೆ ಹಾಡಲು ಒಟ್ಟಿಗೆ ತಂದಿದೆ. ಈ ಪದ್ಧತಿಯನ್ನು ಈ ವರ್ಷದ ಜನವರಿ 23ರಂದು ಪ್ರಾರಂಭಿಸಲಾಯಿತು. ಜನ ಗಣ ಮನ ಉತ್ಸವ ಸಮಿತಿ ಅಧ್ಯಕ್ಷ ಕರ್ನಾಟಿ ವಿಜಯ್ ಕುಮಾರ್ ಮತ್ತು ಅವರ ಸ್ನೇಹಿತರು ತಮ್ಮ ಊರಿನಲ್ಲಿ ಈ ಅಭ್ಯಾಸ ಆರಂಭಿಸಿದರು. ಪ್ರತಿದಿನ ಬೆಳಿಗ್ಗೆ ರಾಷ್ಟ್ರಗೀತೆ ಹಾಡುವುದರಿಂದ ಜನರಲ್ಲಿ ದೇಶಭಕ್ತಿ ಹೆಚ್ಚಾಗುತ್ತದೆ ಎಂಬ ನಂಬಿಕೆ ಅವರದ್ದು.

ಈ ಅಭ್ಯಾಸ ಈಗ ತೆಲಂಗಾಣದ ನಲ್ಗೊಂಡ ಸುತ್ತಮುತ್ತಲಿನ ಹಲವಾರು ಸಣ್ಣ ಪಟ್ಟಣಗಳಿಗೆ ಹರಡಿದೆ. 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ-ಭಾರತದ ಘರ್ಷಣೆಯ ಸಮಯದಲ್ಲಿ ಸಾವನ್ನಪ್ಪಿದ ಕರ್ನಲ್ ಸಂತೋಷ್ ಬಾಬು ಅವರು ತೆಲಂಗಾಣದ ನಲ್ಗೊಂಡ ಪ್ರದೇಶದಲ್ಲಿ ಹುಟ್ಟಿ ಬೆಳೆದವರು. ಆ ನೆನಪಿನಲ್ಲಿ ದಿನವೂ ಬೆಳಗ್ಗೆ ರಾಷ್ಟ್ರಗೀತೆ ಮೊಳಗಿಸಲಾಗುತ್ತಿದೆ.

ಇದನ್ನೂ ಓದಿ: Interesting Facts: ಭಾರತದ ಈ ಒಂದು ರೈಲು ನಿಲ್ದಾಣಕ್ಕೆ ಹೆಸರೇ ಇಲ್ಲ; ಇದರ ಕತೆಯೇ ರೋಚಕ!

ದುಬೈ ಬಿಟ್ಟು ಬಂದು ಕಾಸರಗೋಡಿನಲ್ಲಿ ಅಡಿಕೆ ಹಾಳೆಯ ಪ್ಲೇಟ್ ತಯಾರಿಸುತ್ತಿರುವ ದಂಪತಿ; ಇವರ ಆದಾಯ ಕೇಳಿದ್ರೆ ಅಚ್ಚರಿ ಪಡ್ತೀರ!

Published On - 6:38 pm, Sat, 29 January 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು