AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಬ್ರೇಕಪ್ ನಂತರ ಪ್ರತಿ ನಿಮಿಷಕ್ಕೆ 1 ರೂ. ಗೂಗಲ್ ಪೇ ಮಾಡ್ತಿದ್ದಾನೆ ಮಾಜಿ ಪ್ರಿಯಕರ, ಇದು ಪ್ರೀತಿ ಅಲ್ಲ ಹಿಂಸೆ

ಪ್ರೀತಿಸಿದವರು ಕೈ ಕೊಟ್ರೆ, ಅದರಿಂದಾಗುವ ನೋವು ಅಷ್ಟಿಷ್ಟಲ್ಲ. ಕೆಲವರು ಬ್ರೇಕಪ್ ನೋವಿನಿಂದ ಹೊರ ಬರಲಾರದೆ ಜೀವ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಾರೆ. ಕೆಲವರು ಕೈ ಕೊಟ್ಟ ಹುಡುಗಿಗೆ ನಾನಾ ರೀತಿಯಲ್ಲಿ ಹಿಂಸೆ ನೀಡುತ್ತಾರೆ. ಆದ್ರೆ ಇಲ್ಲೊಬ್ಬ ಯುವತಿಯೂ ತನಗೆ ಮಾಜಿ ಪ್ರಿಯಕರ ಹೇಗೆ ಹಿಂಸೆ ನೀಡುತ್ತಿದ್ದಾನೆ ಎಂಬುದನ್ನು ಹೇಳಿದ್ದಾಳೆ. ಈ ಯುವತಿಯ ಪೋಸ್ಟ್ ನೋಡಿದ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

Viral : ಬ್ರೇಕಪ್ ನಂತರ ಪ್ರತಿ ನಿಮಿಷಕ್ಕೆ 1 ರೂ. ಗೂಗಲ್ ಪೇ ಮಾಡ್ತಿದ್ದಾನೆ ಮಾಜಿ ಪ್ರಿಯಕರ, ಇದು ಪ್ರೀತಿ ಅಲ್ಲ ಹಿಂಸೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 23, 2024 | 3:54 PM

ಪ್ರೀತಿ ಮಾಯೆ ಹುಷಾರು ಕಣ್ಣೀರು ಮಾರೋ ಬಜಾರು ಎನ್ನುವ ಹಾಡಿದೆ. ಪ್ರೀತಿಯಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ಆದರೆ ಬ್ರೇಕಪ್ ಆದರೆ ಮುಗಿದೇ ಹೋಯಿತು. ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ ಆ ನೋವಿನಿಂದ ಹೊರಬರಲು ತುಂಬಾನೇ ಸಮಯ ಬೇಕಾಗುತ್ತದೆ. ಆದರೆ ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಇಲ್ಲೊಬ್ಬಳು ಯುವತಿಯೂ ತನ್ನ ಮಾಜಿ ಪ್ರಿಯಕರ ಹೇಗೆ ತನಗೆ ಹಿಂಸೆ ನೀಡುತ್ತಿದ್ದಾನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.

ಯುವತಿಯೂ ಆತನ ನಂಬರನ್ನು ಎಲ್ಲ ಕಡೆಯಲ್ಲಿಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಈ ಮಾಜಿ ಪ್ರಿಯಕರನೂ ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇಯನ್ನು ಆಯ್ಕೆ ಮಾಡ್ಕೊಂಡಿದ್ದಾನೆ. ಹೌದು, ಬ್ರೇಕಪ್ ನಂತರ ಆಕೆ ಮಾಜಿ ಪ್ರೇಮಿಯೂ ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನಂತೆ.

ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiiiದಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡ್ತಾರಾ ಎಂದೇನಿಸುತ್ತದೆ.

ಇದನ್ನೂ ಓದಿ: ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ಈ ಪೋಸ್ಟ್ ಒಂದು ಲಕ್ಷದವರೆಗೂ ವೀಕ್ಷಣೆ ಕಂಡಿದ್ದು, ನೆಟ್ಟಿಗರು ಕಾಮೆಂಟ್ ಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡ್ಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ