Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​

ಕಣ್ಣಂಚಿನಿಂದ ನೀರು ಬರುತ್ತಿದೆ. ರಿಯಲಿಸ್ಟಿಕ್​ ಸ್ಕೆಚ್​ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಕಲಾವಿದನನ್ನು ಶ್ಲಾಘಿಸಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​
ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ
Follow us
TV9 Web
| Updated By: shruti hegde

Updated on:Nov 22, 2021 | 11:43 AM

ರಿಯಲಿಸ್ಟಿಕ್ ಸ್ಕೆಚ್​ಗಳನ್ನು ಪ್ರದರ್ಶಿಸುವ ಸಾಕಷ್ಟು ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಚಿತ್ರಗಳನ್ನು ನೋಡಿದಾಕ್ಷಣ ನಿಜವಾದ ವಸ್ತು ಅನ್ನಿಸುವಷ್ಟು ಸುಂದರವಾಗಿ ಮೂಡಿಬಂದಿರುತ್ತವೆ. ಇವುಗಳೆಲ್ಲವೂ ಕಲಾವಿದನ ಕೈಚಳಕದಿಂದ ಮೂಡಿರುವಂಥದ್ದು, ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಫುಲ್ ವೈರಲ್ ಆದ ವಿಡಿಯೊವೊಂದು ಇಲ್ಲಿವೆ. ಕಣ್ಣಿನಂಚಿನಿಂದ ಕೆನ್ನೆಯ ಮೇಲೆ ನೀರು ಜಾರುವುದರಲ್ಲಿದೆ, ನಿಜವಾದ ಕಣ್ಣು ಅನ್ನಿಸುವಷ್ಟರ ಮಟ್ಟಿಗೆ ಆಕರ್ಷಕವಾಗಿ ಕಾಣಿಸುವ ಚಿತ್ರ ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. ಕಲಾವಿದನನ್ನು ಶ್ಲಾಘಿಸಿದ್ದಾರೆ.

ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಮೊದಲು ಯುಟ್ಯೂಬ್​ನಲ್ಲಿ ವಿಡಿಯೊ ಹಂಚಿಕೊಂಡ ಬಳಿಕ ಇತರ ಸಾಮಾಜಿಕ ಮಾಧ್ಯಗಳಲ್ಲಿ ವಿಡಿಯೊ ಹರಿದಾಡಿತು. ನೆಟ್ಟಿಗರ ಗಮನಸೆಳೆದ ವಿಡಿಯೊ ಇದಾಗಿದ್ದು, ನಿಜವಾಗಿಯೂ ವ್ಯಕ್ತಿ ಅಳುತ್ತಿದ್ದಂತೆಯೇ ಅನಿಸುತ್ತಿದೆ ಎಂದು ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ. ವಿಡಿಯೊ ಪೋಸ್ಟ್ ಮಾಡಿದ ಬಳಿಕ ಸುಮಾರು 30,000 ಕ್ಕೂ ಹೆಚ್ಚಿನ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. ತುಂಬಾ ಅದ್ಭುತವಾದ ವಿಡಿಯೊವಿದು ಎಂದು ಓರ್ವರು ಹೇಳಿದ್ದಾರೆ.

View this post on Instagram

A post shared by YouTube (@youtube)

ವಾವ್! ಅದ್ಭುತ ಎಂದು ಓರ್ವರು ಪ್ರತಿಕ್ರಿಯೆ ನೀಡಿದ್ದಾರೆ. ತುಂಬಾ ಸುಂದರವಾಗಿದೆ ಎಂದು ಮತ್ತೋರ್ವರು ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅದೆಷ್ಟೊ ವಿಡಿಯೊಗಳು ಮನಸ್ಸಿಗೆ ಹೆಚ್ಚು ಇಷ್ಟವಾಗುತ್ತವೆ. ಅವುಗಳಲ್ಲಿ ಕೆಲವನ್ನು ಪದೇ ಪದೇ ನೋಡಬೇಕು ಅನ್ನುವಷ್ಟು ಅಚ್ಚರಿ ಮೂಡಿಸುತ್ತವೆ. ಇದೀಗ ವೈರಲ್ ಆದ ವಿಡಿಯೊ ಕ್ಲಿಪ್ ಕೂಡಾ ಅಂಥದ್ದೇ, ಕಲಾವಿದ ತುಂಬಾ ಸುಂದರವಾಗಿ ಕಣ್ಣಿನ ಚಿತ್ರವನ್ನು ಬಿಡಿಸಿದ್ದಾರೆ.

ಇದನ್ನೂ ಓದಿ:

Viral Video: ಫಾಂಟಾ ಕೋಲ್ಡ್ ಡ್ರಿಂಕ್ಸ್​ ವಿತ್ ನೂಡಲ್ಸ್ ಸವಿದಿದ್ದೀರಾ? ಹೆಸರು ಕೇಳಿಯೇ ಕನ್​ಫ್ಯೂಸ್​ ಆದ ನೆಟ್ಟಿಗರು

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Published On - 11:41 am, Mon, 22 November 21

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು