AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಇಂಡೋನೇಷ್ಯಾ ಬಾಲಿಯಲ್ಲಿ ನೀರೊಳಗೆ ವಿಷ್ಣುವಿನ ದೇವಾಲಯ ಪತ್ತೆ?: ಸುಳ್ಳು, ಇದು AI ವಿಡಿಯೋ

Vishnu Temple Bali Fact Check: ಇಂಡೋನೇಷ್ಯಾದ ಬಾಲಿ ದ್ವೀಪದ ಬಳಿಯ ಸಮುದ್ರದಲ್ಲಿ ವಿಜ್ಞಾನಿಗಳ ಜಂಟಿ ಪರಿಶೋಧನಾ ತಂಡವು ಈ ಪ್ರತಿಮೆಯನ್ನು ಕಂಡುಹಿಡಿದಿದೆ ಮತ್ತು ಈ ಪ್ರತಿಮೆ 5,000 ವರ್ಷಗಳಿಗಿಂತ ಹೆಚ್ಚು ಹಳೆಯದು ಎಂದು ಕೂಡ ಕೆಲ ಬಳಕೆದಾರರು ಹೇಳಿಕೊಳ್ಳುತ್ತಿದ್ದಾರೆ. ಆದಾಗ್ಯೂ, ವಾಸ್ತವ ಪರಿಶೀಲನೆಯ ಸಮಯದಲ್ಲಿ, ಈ ವೈರಲ್ ಹಕ್ಕು ಸಂಪೂರ್ಣವಾಗಿ ನಕಲಿ ಎಂದು ಸಾಬೀತಾಗಿದೆ.

Fact Check: ಇಂಡೋನೇಷ್ಯಾ ಬಾಲಿಯಲ್ಲಿ ನೀರೊಳಗೆ ವಿಷ್ಣುವಿನ ದೇವಾಲಯ ಪತ್ತೆ?: ಸುಳ್ಳು, ಇದು AI ವಿಡಿಯೋ
Bali Vishnu Idol Fact Check
Vinay Bhat
|

Updated on: Jun 02, 2025 | 4:58 PM

Share

ಬೆಂಗಳೂರು (ಜೂ. 02): ಸಾಮಾಜಿಕ ಮಾಧ್ಯಮ (Social Media) ಮತ್ತು ಕೃತಕ ಬುದ್ಧಿಮತ್ತೆಯ ಯುಗದಲ್ಲಿ, ಪ್ರತಿದಿನ ಅನೇಕ ನಕಲಿ ಸುದ್ದಿಗಳು ಮತ್ತು ನಕಲಿ ವಿಡಿಯೋಗಳು ವೈರಲ್ ಆಗುತ್ತವೆ. ಈ ಸುಳ್ಳು ಸುದ್ದಿಗಳ ವಿರುದ್ಧ ನಿಮ್ಮನ್ನು ಎಚ್ಚರಿಸಲು, ನಾವು ನಿಮಗೆ ಸತ್ಯ ಪರಿಶೀಲನೆಗಳನ್ನು ತರುತ್ತೇವೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಯೊಂದು ಹರಿದಾಡುತ್ತಿದ್ದು ಇದು ವಿಷ್ಣುವಿನ ವಿಗ್ರಹಕ್ಕೆ ಸಂಬಂಧಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಸ್ಕೂಬ ಡ್ರೈವರ್​ಗಳು ಸಮುದ್ರದೊಳಗೆ ಧುಮುಕಿ ಚಿತ್ರೀಕರಿಸಿದ್ದಾರೆ. ಇವರು ಒಂದು ಪ್ರತಿಮೆಯನ್ನು ಕೂಡ ತೋರಿಸುತ್ತಾರೆ. ಇದು ಹಿಂದೂ ಧರ್ಮದ ಭಗವಾನ್ ವಿಷ್ಣುವಿನ ಪ್ರತಿಮೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಇಂಡೋನೇಷ್ಯಾದ ಬಾಲಿ ದ್ವೀಪದ ಬಳಿಯ ಸಮುದ್ರದಲ್ಲಿ ವಿಜ್ಞಾನಿಗಳ ಜಂಟಿ ಪರಿಶೋಧನಾ ತಂಡವು ಈ ಪ್ರತಿಮೆಯನ್ನು ಕಂಡುಹಿಡಿದಿದೆ ಮತ್ತು ಈ ಪ್ರತಿಮೆ 5,000 ವರ್ಷಗಳಿಗಿಂತ ಹೆಚ್ಚು ಹಳೆಯದು ಎಂದು ಕೂಡ ಕೆಲ ಬಳಕೆದಾರರು ಹೇಳಿಕೊಳ್ಳುತ್ತಿದ್ದಾರೆ. ಆದಾಗ್ಯೂ, ವಾಸ್ತವ ಪರಿಶೀಲನೆಯ ಸಮಯದಲ್ಲಿ, ಈ ವೈರಲ್ ಹಕ್ಕು ಸಂಪೂರ್ಣವಾಗಿ ನಕಲಿ ಎಂದು ಸಾಬೀತಾಗಿದೆ. ನಮ್ಮ ತನಿಖೆಯಿಂದ ವೈರಲ್ ಆಗಿರುವ ವಿಡಿಯೋ ನಿಜವಲ್ಲ, ಬದಲಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ರಚಿಸಲಾಗಿದೆ ಎಂದು ತಿಳಿದುಬಂದಿದೆ. ಬಳಕೆದಾರರು ಈ AI ರಚಿತ ವಿಡಿಯೋವನ್ನು ದಾರಿತಪ್ಪಿಸುವ ಹಕ್ಕುಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
ಕೇವಲ 14 ಸಾವಿರಕ್ಕೆ ಪತಂಜಲಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ?
Image
ಬಂಗೀ ಜಂಪಿಂಗ್ ಪ್ಲಾಟ್‌ಫಾರ್ಮ್ ಮುರಿದು ಹೋಗುವ ವಿಡಿಯೋದ ಸತ್ಯಾಂಶ ಏನು?
Image
ಭಾರತೀಯ ಯುದ್ಧ ವಿಮಾನ ಪಾಕಿಸ್ತಾನದಲ್ಲಿ ಪತನ?: ವೈರಲ್ ವಿಡಿಯೋದ ನಿಜಾಂಶ ಏನು?
Image
ಜಮ್ಮುವಿನ ಜನರು ಪಾಕಿಸ್ತಾನಿ ರೈಲನ್ನು ಸುಟ್ಟುಹಾಕಿದ್ದು ನಿಜವೇ?

ನಿಜಾಂಶವನ್ನು ತಿಳಿಯಲು ನಾವು ವೈರಲ್ ವಿಡಿಯೋದ ಪ್ರಮುಖ ಚೌಕಟ್ಟುಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದ್ದೇವೆ. ಈ ತನಿಖೆಯ ಸಮಯದಲ್ಲಿ, ಏಪ್ರಿಲ್ 09, 2025 ರಂದು ಪೋಸ್ಟ್ ಮಾಡಲಾದ @mbaiarts ಎಂಬ ಬಳಕೆದಾರರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ನಮಗೆ ಕಂಡುಬಂದಿದೆ. ಅವರೇ ಶೀರ್ಷಿಕೆಯಲ್ಲಿ ವಿವರಿಸಿದಂತೆ, ಕಲಾತ್ಮಕ ಮತ್ತು ಸಾಂಸ್ಕೃತಿಕ ಕಥೆ ಹೇಳುವ ಉದ್ದೇಶಕ್ಕಾಗಿ ಈ ದೃಶ್ಯಗಳನ್ನು AI ನಿಂದ ರಚಿಸಲಾಗಿದೆ.

View this post on Instagram

A post shared by Mb Ai Arts (@mbaiarts)

ತನಿಖೆಯ ಮುಂದಿನ ಹಂತದಲ್ಲಿ, ವೈರಲ್ ವಿಡಿಯೋವನ್ನು ಪರಿಶೀಲಿಸಲು ಎಐ ವಿಡಿಯೋವನ್ನು ಪತ್ತೆ ಹಚ್ಚುವ ಹೈವ್ ಮಾಡರೇಶನ್ ವೆಬ್​ಸೈಟ್​ನಲ್ಲಿ ಪರೀಕ್ಷೆ ನಡೆಸಿದ್ದೇವೆ. ಈ ಉಪಕರಣದ ವರದಿಯು ಈ ವಿಡಿಯೋವನ್ನು ಕೃತಕ ಬುದ್ಧಿಮತ್ತೆ ಅಂದರೆ AI ಸಹಾಯದಿಂದ ಮಾಡಲಾಗಿದೆ ಎಂದು ಬಹಿರಂಗಪಡಿಸಿದೆ. ವರದಿಯ ಪ್ರಕಾರ, ಈ ಫೋಟೋ ಶೆ. 96 ರಷ್ಟು AI ಯಿಂದ ಕೂಡಿದೆ.

Patanjali EV Fact Check: ಕೇವಲ 14 ಸಾವಿರಕ್ಕೆ ಪತಂಜಲಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ?

ಇನ್ನು ವೈರಲ್ ಹೇಳಿಕೆಗೆ ಸಂಬಂಧಿಸಿದಂತೆ ನಾವು ಗೂಗಲ್​ನಲ್ಲಿ ಗೂಗಲ್ ಸರ್ಚ್ ನಡೆಸಿದ್ದೇವೆ. ಇಂಡೋನೇಷ್ಯಾದ ಬಾಲಿ ಸಮುದ್ರದಲ್ಲಿ ಶ್ರೀ ಮಹಾ ವಿಷ್ಣು ದೇವಾಲಯದ ಅಸ್ತಿತ್ವದ ಕುರಿತು ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಿದೆವು. ಆದರೆ, ಯಾಔಉದೇ ಪ್ರಸಿದ್ಧ ಸುದ್ದಿ ಮಾಧ್ಯಮ ಈ ಹಕ್ಕನ್ನು ಬೆಂಬಲಿಸುವ ವಿಶ್ವಾಸಾರ್ಹ ಸುದ್ದಿ ವರದಿಗಳು ಅಥವಾ ಪುರಾವೆಗಳನ್ನು ಪ್ರಕಟಿಸಿಲ್ಲ.

ಹೀಗಾಗಿ ವೈರಲ್ ಆಗಿರುವ ವಿಡಿಯೋ ನಿಜವಲ್ಲ, ಇದನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ರಚಿಸಲಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ. ಬಳಕೆದಾರರು ಈ AI ರಚಿತ ವಿಡಿಯೋವನ್ನು ದಾರಿತಪ್ಪಿಸುವ ಹಕ್ಕುಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಅಂತಹ ಯಾವುದೇ ಪೋಸ್ಟ್‌ಗಳ ಬಗ್ಗೆ ಜನರು ಜಾಗರೂಕರಾಗಿರಬೇಕು.

ಸಮುದ್ರದ ಆಳದಲ್ಲಿ ಹಿಂದೂ ದೇವಾಲಯ ಎಂದು ಈ ರೀತಿ ಕೃತಕ ಬುದ್ದಿಮತ್ತೆಯಿಂದ ರಚಿಸಿದ ವಿಡಿಯೋ ವೈರಲ್ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ರಾಮಸೇತು ಎಂದು ನೀರಿನ ಅಡಿಯ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಈ ಬಗ್ಗೆ ಆಗ ಟಿವಿ9 ಕನ್ನಡ ಫ್ಯಾಕ್ಟ್ ಚೆಕ್ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ಸುದ್ದಿಯನ್ನು ನೀವು ಇಲ್ಲಿ ಓದಬಹುದು.

ಅಟೋಮೊಬೈಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ