AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮೆ ಹಣ ಪಡೆಯಲು ತನ್ನ ಎರಡೂ ಕಾಲುಗಳನ್ನು ಕತ್ತರಿಸಿ ಬಕೆಟ್ ಒಳಗೆ ಇರಿಸಿದ್ದ ವ್ಯಕ್ತಿ

ಕಳೆದ ವರ್ಷ ನವೆಂಬರ್‌ನಲ್ಲಿ ಈತ ತನ್ನ ಎರಡೂ ಕಾಲುಗಳನ್ನು ಕತ್ತರಿಸಿ, ಕಾಲುಗಳನ್ನು ಸಂಬಂಧಿಕರೊಬ್ಬರ ಸಹಾಯದಿಂದ ಬಕೆಟ್‌ನಲ್ಲಿ ಇರಿಸಿ ಅದರ ಮೇಲೆ ಟೈಯರ್​​​ನಿಂದ ಮುಚ್ಚಿ ಅಡಗಿಸಿಟ್ಟಿದ್ದ. ಬಳಿಕ ವಿಮೆ ಹಣ ಪಡೆಯಲು ಆಕ್ಸಿಡೆಂಟ್​​​​​ ಆಗಿದೆ ಸುಳ್ಳು ಕಥೆ ಕಟ್ಟಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ವಿಮೆ ಹಣ ಪಡೆಯಲು ತನ್ನ ಎರಡೂ ಕಾಲುಗಳನ್ನು ಕತ್ತರಿಸಿ ಬಕೆಟ್ ಒಳಗೆ ಇರಿಸಿದ್ದ ವ್ಯಕ್ತಿ
ವಿಮೆ ಹಣ ಪಡೆಯಲು ತನ್ನ ಎರಡೂ ಕಾಲು ಕತ್ತರಿಸಿದ ವ್ಯಕ್ತಿImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 27, 2024 | 11:11 AM

Share

ಮಿಸೌರಿ: ವಿಮೆ ಹಣವನ್ನು ಪಡೆಯಲು ಸಣ್ಣಪುಟ್ಟ ವಂಚನೆಗಳನ್ನು ಮಾಡುವವರನ್ನು ನೀವು ನೋಡಿರಬಹುದು. ಆದರೆ ಅಮೆರಿಕದ ಮಿಸೌರಿಯಲ್ಲಿ ನೆಲೆಸಿರುವ 60ವರ್ಷದ ವ್ಯಕ್ತಿಯೊಬ್ಬರು ಯಾರೂ ಊಹಿಸಲೂ ಸಾಧ್ಯವಾಗದಂತಹ ಅಪರಾಧ ಎಸಗಿದ್ದಾರೆ. ಆರೋಗ್ಯ ವಿಮೆ ಹಣವನ್ನು ಪಡೆಯಲು ತನ್ನ ಎರಡು ಕಾಲುಗಳನ್ನು ಕತ್ತರಿಸಿದ್ದಾರೆ. ಇತಿಹಾಸದಲ್ಲೇ ಇದೊಂದು ವಿಚಿತ್ರ ಪ್ರಕರಣ ಎಂದು ಪ್ರಕರಣದ ತನಿಖಾಧಿಕಾರಿ ಹೊವೆಲ್ ಕೌಂಟಿ ಶೆರಿಫ್ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಈತ ತನ್ನ ಎರಡೂ ಕಾಲುಗಳನ್ನು ಕತ್ತರಿಸಿದ್ದ. ಇದಲ್ಲದೇ ವಿಮೆ ಹಣ ಪಡೆಯಲು ಟ್ರ್ಯಾಕ್ಟರ್‌ನ ಹಿಂಬದಿಯಲ್ಲಿ ಅಳವಡಿಸಿದ್ದ ಮೊವರ್‌ನಿಂದ ಅವರ ಕಾಲು ತುಂಡಾಗಿದೆ ಎಂದು ಹೇಳಿದ್ದರು. ಆದರೆ, ಈ ಅಪಘಾತದ ನಂತರ ಅವರ ಕಾಲು ಎಲ್ಲಿಯೂ ಪತ್ತೆಯಾಗಿರಲ್ಲಿಲ್ಲ. ಇದಲ್ಲದೇ ಕಾಲಿನ ಗಾಯ ಮೊವರ್‌ನಿಂದ ಕಾಲು ಕತ್ತರಿಸಿದಂತೆ ಕಾಣಿಸುತ್ತಿರಲಿಲ್ಲ. ಇದರಿಂದ ಪೊಲೀಸರಲ್ಲಿ ಅನುಮಾನ ಹುಟ್ಟಿಕೊಂಡಿದೆ.

ತನಿಖೆ ಪ್ರಾರಂಭಿಸಿದಾಗ ವ್ಯಕ್ತಿ ಪಾರ್ಶ್ವವಾಯುವಿನಿಂದ ತನ್ನ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿ ಟ್ರ್ಯಾಕ್ಟರ್ ಹೇಗೆ ಚಲಾಯಿಸಿದ ಎಂಬ ಮತ್ತೊಂದು ಪ್ರಶ್ನೆ ಪೊಲೀಸರಲ್ಲಿ ಹುಟ್ಟಿಕೊಂಡಿದೆ. ಈ ವೇಳೆ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಸತ್ಯಾಂಶ ತಿಳಿದು ಗಾಬರಿಯಾಗಿದೆ. ವಿಮೆ ಹಣ ಪಡೆಯಲು ಈ ವ್ಯಕ್ತಿ ತನ್ನ ಎರಡೂ ಕಾಲುಗಳನ್ನು ಕತ್ತರಿಸಿ ಬಕೆಟ್ ಒಳಗೆ ಅಡಗಿಸಿಟ್ಟಿದ್ದ. ಬಳಿಕ ಆಕ್ಸಿಡೆಂಟ್​​​​​ ಆಗಿದೆ ಸುಳ್ಳು ಕಥೆ ಹೇಳಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ಹಾಟ್ ಆಗಿ ಕಾಣಲು ತನ್ನ ರಕ್ತವನ್ನು ತಾನೇ ಕುಡಿಯುತ್ತಾಳೆ ಈ ಯುವತಿ

ಪಾರ್ಶ್ವವಾಯುವಿಗೆ ಒಳಗಾದ ತನ್ನ ಕಾಲಿನಿಂದ ಯಾವುದೇ ಪ್ರಯೋಜನವಾಗದ ಕಾರಣ, ಅದನ್ನು ಕತ್ತರಿಸುವ ಮೂಲಕ ಹಣ ಪಡೆಯಲು ಬಯಸಿದ್ದರು. ಬಳಿಕ ಕತ್ತರಿಸಿದ ಕಾಲುಗಳನ್ನು ಸಂಬಂಧಿಕರೊಬ್ಬರ ಸಹಾಯದಿಂದ ಬಕೆಟ್‌ನಲ್ಲಿ ಇರಿಸಿ ಅದರ ಮೇಲೆ ಟೈಯರ್​​​ನಿಂದ ಮುಚ್ಚಿ ಅಡಗಿಸಿಟ್ಟಿದ್ದರು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 27 February 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ