AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮೆ ಹಣ ಪಡೆಯಲು ತನ್ನ ಎರಡೂ ಕಾಲುಗಳನ್ನು ಕತ್ತರಿಸಿ ಬಕೆಟ್ ಒಳಗೆ ಇರಿಸಿದ್ದ ವ್ಯಕ್ತಿ

ಕಳೆದ ವರ್ಷ ನವೆಂಬರ್‌ನಲ್ಲಿ ಈತ ತನ್ನ ಎರಡೂ ಕಾಲುಗಳನ್ನು ಕತ್ತರಿಸಿ, ಕಾಲುಗಳನ್ನು ಸಂಬಂಧಿಕರೊಬ್ಬರ ಸಹಾಯದಿಂದ ಬಕೆಟ್‌ನಲ್ಲಿ ಇರಿಸಿ ಅದರ ಮೇಲೆ ಟೈಯರ್​​​ನಿಂದ ಮುಚ್ಚಿ ಅಡಗಿಸಿಟ್ಟಿದ್ದ. ಬಳಿಕ ವಿಮೆ ಹಣ ಪಡೆಯಲು ಆಕ್ಸಿಡೆಂಟ್​​​​​ ಆಗಿದೆ ಸುಳ್ಳು ಕಥೆ ಕಟ್ಟಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ವಿಮೆ ಹಣ ಪಡೆಯಲು ತನ್ನ ಎರಡೂ ಕಾಲುಗಳನ್ನು ಕತ್ತರಿಸಿ ಬಕೆಟ್ ಒಳಗೆ ಇರಿಸಿದ್ದ ವ್ಯಕ್ತಿ
ವಿಮೆ ಹಣ ಪಡೆಯಲು ತನ್ನ ಎರಡೂ ಕಾಲು ಕತ್ತರಿಸಿದ ವ್ಯಕ್ತಿImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Feb 27, 2024 | 11:11 AM

ಮಿಸೌರಿ: ವಿಮೆ ಹಣವನ್ನು ಪಡೆಯಲು ಸಣ್ಣಪುಟ್ಟ ವಂಚನೆಗಳನ್ನು ಮಾಡುವವರನ್ನು ನೀವು ನೋಡಿರಬಹುದು. ಆದರೆ ಅಮೆರಿಕದ ಮಿಸೌರಿಯಲ್ಲಿ ನೆಲೆಸಿರುವ 60ವರ್ಷದ ವ್ಯಕ್ತಿಯೊಬ್ಬರು ಯಾರೂ ಊಹಿಸಲೂ ಸಾಧ್ಯವಾಗದಂತಹ ಅಪರಾಧ ಎಸಗಿದ್ದಾರೆ. ಆರೋಗ್ಯ ವಿಮೆ ಹಣವನ್ನು ಪಡೆಯಲು ತನ್ನ ಎರಡು ಕಾಲುಗಳನ್ನು ಕತ್ತರಿಸಿದ್ದಾರೆ. ಇತಿಹಾಸದಲ್ಲೇ ಇದೊಂದು ವಿಚಿತ್ರ ಪ್ರಕರಣ ಎಂದು ಪ್ರಕರಣದ ತನಿಖಾಧಿಕಾರಿ ಹೊವೆಲ್ ಕೌಂಟಿ ಶೆರಿಫ್ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಈತ ತನ್ನ ಎರಡೂ ಕಾಲುಗಳನ್ನು ಕತ್ತರಿಸಿದ್ದ. ಇದಲ್ಲದೇ ವಿಮೆ ಹಣ ಪಡೆಯಲು ಟ್ರ್ಯಾಕ್ಟರ್‌ನ ಹಿಂಬದಿಯಲ್ಲಿ ಅಳವಡಿಸಿದ್ದ ಮೊವರ್‌ನಿಂದ ಅವರ ಕಾಲು ತುಂಡಾಗಿದೆ ಎಂದು ಹೇಳಿದ್ದರು. ಆದರೆ, ಈ ಅಪಘಾತದ ನಂತರ ಅವರ ಕಾಲು ಎಲ್ಲಿಯೂ ಪತ್ತೆಯಾಗಿರಲ್ಲಿಲ್ಲ. ಇದಲ್ಲದೇ ಕಾಲಿನ ಗಾಯ ಮೊವರ್‌ನಿಂದ ಕಾಲು ಕತ್ತರಿಸಿದಂತೆ ಕಾಣಿಸುತ್ತಿರಲಿಲ್ಲ. ಇದರಿಂದ ಪೊಲೀಸರಲ್ಲಿ ಅನುಮಾನ ಹುಟ್ಟಿಕೊಂಡಿದೆ.

ತನಿಖೆ ಪ್ರಾರಂಭಿಸಿದಾಗ ವ್ಯಕ್ತಿ ಪಾರ್ಶ್ವವಾಯುವಿನಿಂದ ತನ್ನ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿ ಟ್ರ್ಯಾಕ್ಟರ್ ಹೇಗೆ ಚಲಾಯಿಸಿದ ಎಂಬ ಮತ್ತೊಂದು ಪ್ರಶ್ನೆ ಪೊಲೀಸರಲ್ಲಿ ಹುಟ್ಟಿಕೊಂಡಿದೆ. ಈ ವೇಳೆ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಸತ್ಯಾಂಶ ತಿಳಿದು ಗಾಬರಿಯಾಗಿದೆ. ವಿಮೆ ಹಣ ಪಡೆಯಲು ಈ ವ್ಯಕ್ತಿ ತನ್ನ ಎರಡೂ ಕಾಲುಗಳನ್ನು ಕತ್ತರಿಸಿ ಬಕೆಟ್ ಒಳಗೆ ಅಡಗಿಸಿಟ್ಟಿದ್ದ. ಬಳಿಕ ಆಕ್ಸಿಡೆಂಟ್​​​​​ ಆಗಿದೆ ಸುಳ್ಳು ಕಥೆ ಹೇಳಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ಹಾಟ್ ಆಗಿ ಕಾಣಲು ತನ್ನ ರಕ್ತವನ್ನು ತಾನೇ ಕುಡಿಯುತ್ತಾಳೆ ಈ ಯುವತಿ

ಪಾರ್ಶ್ವವಾಯುವಿಗೆ ಒಳಗಾದ ತನ್ನ ಕಾಲಿನಿಂದ ಯಾವುದೇ ಪ್ರಯೋಜನವಾಗದ ಕಾರಣ, ಅದನ್ನು ಕತ್ತರಿಸುವ ಮೂಲಕ ಹಣ ಪಡೆಯಲು ಬಯಸಿದ್ದರು. ಬಳಿಕ ಕತ್ತರಿಸಿದ ಕಾಲುಗಳನ್ನು ಸಂಬಂಧಿಕರೊಬ್ಬರ ಸಹಾಯದಿಂದ ಬಕೆಟ್‌ನಲ್ಲಿ ಇರಿಸಿ ಅದರ ಮೇಲೆ ಟೈಯರ್​​​ನಿಂದ ಮುಚ್ಚಿ ಅಡಗಿಸಿಟ್ಟಿದ್ದರು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 27 February 24

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?