AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ

ಈ ವಿಡಿಯೋವನ್ನು ಇನ್ಸ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದು, ಈ ರೀತಿಯಾ ತುಂಟಾಟಗಳು ಇರದ ಹೊರತು ಮದುವೆ ಪೂರ್ಣವಾಗುವುದಿಲ್ಲ ಎಂಬ ಶೀರ್ಷಿಕೆಯನ್ನು ಇದಕ್ಕೆ ನೀಡಿದ್ದಾರೆ. ವಿವಾಹ ಮಹೋತ್ಸವದಲ್ಲಿ ಹೇಗೆಲ್ಲಾ ಸಂಬಂಧಿಕರು ಮತ್ತು ಸ್ನೇಹಿತರು ವಧು-ವರರನ್ನು ಕಿಚಾಯಿಸುತ್ತಾರೆ ಎನ್ನುವುದರ ಮೇಲೆ ಈ ವಿಡಿಯೋ ಬೆಳಕು ಚೆಲ್ಲಿದೆ.

Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ
ವರನ ಶೂ ತೆಗೆಯುತ್ತಿರುವ ದೃಶ್ಯ
TV9 Web
| Edited By: |

Updated on: Dec 18, 2021 | 1:18 PM

Share

ಈಗ ಮದುವೆ ಅತಿ ಹೆಚ್ಚಾಗಿ ನಡೆಯುವ ಸಂದರ್ಭ. ಹೀಗಾಗಿಯೇ ಮದುವೆಯ (Wedding) ಸೀಜನ್ ಎಂದು ಕರೆಯಲಾಗುತ್ತದೆ. ಮದುವೆ ಸಂಭ್ರಮ ಎಂದರೆ ಸುಮ್ಮನೆನಾ ಪ್ರತಿಯೊಂದು ತಯಾರಿ ಕೂಡ ಮುಖ್ಯ. ಅದರಲ್ಲೂ ಸ್ನೇಹಿತರು ತಮ್ಮದೇ ರೀತಿಯಲ್ಲಿ ವಿವಾಹಮಹೋತ್ಸವಕ್ಕೆ ಸಿದ್ಧವಾಗುತ್ತಾರೆ. ವಧು- ವರರನ್ನು ಮೆಚ್ಚಿಸಲು ಅಥವಾ ಅವರ ಕಾಲೆಳೆಯಲು ಸ್ನೇಹಿತರ ಗುಂಪು ಸದಾ ಮುಂದೆ ಇರುತ್ತದೆ. ಇಂತಹದ್ದೇ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ. ಜೂತ ಚುರೈ ಎಂಬ ಆಚರಣೆ ಸಾಮಾನ್ಯವಾಗಿ ಇತ್ತೀಚೆಗೆ ಎಲ್ಲಾ ಮದುವೆಗಳಲ್ಲೂ ಇದೆ. ಸ್ನೇಹಿತರು ಮತ್ತು ಸಂಬಂಧಿಕರು ವರನ ಚಪ್ಪಲಿ ಕದ್ದು, ಹಣಕ್ಕೆ ಬೇಡಿಕೆ ಇಡುತ್ತಾರೆ. ಈ ರೀತಿಯಲ್ಲಿಯೇ ಮದುವೆ ಮಂಟಪದಲ್ಲಿ ವರನ ಕಾಲಿನಲ್ಲಿನ ಶೂ ಕಿತ್ತು ಸ್ನೇಹಿತರು ತುಂಟಾಟವಾಡಿದ್ದಾರೆ. ಈ ತಮಾಷೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಾಸ್ಯಲೋಕದಲ್ಲಿ ತೇಲಾಡಿದ್ದಾರೆ.

ವೈರಲ್​ ಆದ ಈ ವಿಡಿಯೋದಲ್ಲಿ ಮದುವೆ ಮಂಟಪದ ವೇದಿಕೆಯಲ್ಲಿ ಫ್ಯಾಮಿಲಿ ಫೋಟೋ ಸೆಷನ್ ನಡೆಯುತ್ತಿರುವುದು ಕಂಡು ಬರುತ್ತದೆ. ಅದರಂತೆ ಸಂಬಂಧಿಕರು ಮತ್ತು ಸ್ನೇಹಿತರು ಮೊದಲು ನವಜೋಡಿಯ ಜತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ. ಬಳಿಕ ವರನ ಕಾಲಿಗೆ ಕೈ ಹಾಕಿ ಶೂ ಕಿತ್ತುಕೊಂಡಿದ್ದಾರೆ. ಈ ವೇಳೆ ಬಿಡಿಸಲು ಪ್ರಯತ್ನಪಟ್ಟ ವಧುವನ್ನು ಗಟ್ಟಿಯಾಗಿ ಹಿಡಿದುಕೊಳ್ಳಲಾಗಿದೆ. ಈ ವಿಡಿಯೋ ಸದ್ಯ ವೈರಲ್​ ಆಗಿದೆ.

ಈ ವಿಡಿಯೋವನ್ನು ಇನ್ಸ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದು, ಈ ರೀತಿಯಾ ತುಂಟಾಟಗಳು ಇರದ ಹೊರತು ಮದುವೆ ಪೂರ್ಣವಾಗುವುದಿಲ್ಲ ಎಂಬ ಶೀರ್ಷಿಕೆಯನ್ನು ಇದಕ್ಕೆ ನೀಡಿದ್ದಾರೆ. ವಿವಾಹ ಮಹೋತ್ಸವದಲ್ಲಿ ಹೇಗೆಲ್ಲಾ ಸಂಬಂಧಿಕರು ಮತ್ತು ಸ್ನೇಹಿತರು ವಧು-ವರರನ್ನು ಕಿಚಾಯಿಸುತ್ತಾರೆ ಎನ್ನುವುದರ ಮೇಲೆ ಈ ವಿಡಿಯೋ ಬೆಳಕು ಚೆಲ್ಲಿದೆ. ನೆಟ್ಟಿಗರು ಕೂಡ ಈ ವಿಡಿಯೋವನ್ನು ತುಂಬಾ ಇಷ್ಟಪಟ್ಟಿದ್ದಾರೆ. ಅವರು ತಮ್ಮ ಲೈಕ್‌ ಮತ್ತು ಕಾಮೆಂಟ್‌ಗಳ ಮೂಲಕ ಈ ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಅನೇಕರು ಈ ವಿಡಿಯೋವನ್ನು ರಿಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಸೇಬುವನ್ನು ಎಣ್ಣೆಯಲ್ಲಿ ಬೇಯಿಸಿ ತಿಂದ ವ್ಯಕ್ತಿ: ವಿಚಿತ್ರ ಖಾದ್ಯದ ವೀಡಿಯೋ ವೈರಲ್​

Viral video: ಗಂಭೀರ ಸ್ಥಿತಿಯಲ್ಲಿದ್ದ ಕೋತಿಗೆ ಉಸಿರು ನೀಡಿ ಪ್ರಾಣ ಉಳಿಸಿದ ಕಾರು ಚಾಲಕ; ವಿಡಿಯೋ ವೈರಲ್​

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!