AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ರಜೆ ಕಳೆಯಲು ಹಿಂದೆಂದೂ ನೋಡದ ಊರಿಗೆ ಹೋಗಿದ್ದ ಕುಟುಂಬ ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ವಾಪಸಾಗಿದ್ದೇಕೆ?
ಬಾಲಕ
ನಯನಾ ರಾಜೀವ್
|

Updated on: Apr 10, 2024 | 12:27 PM

Share

ದಿನನಿತ್ಯದ ಜಂಜಾಟದಿಂದ ಸ್ವಲ್ಪ ದೂರ ಇರಲು ಪ್ರತಿಯೊಬ್ಬರೂ ಪ್ರವಾಸಕ್ಕೆ ತೆರಳುವುದು ಸಾಮಾನ್ಯ. ಹಾಗೆಯೇ ಉತ್ತಮವಾಗಿ ರಜೆ ಕಳೆಯಬೇಕೆಂದು ಜೆನ್ನಿ ಸ್ಟೀವನ್ಸ್​ ಎಂಬ ಮಹಿಳೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯ ಜತೆಗೆ ಹಿಂದೆಂದೂ ಹೋಗದ ಊರಿಗೆ ಹೋಗಿದ್ದರು.

ಅವರು ಎರಡು ವರ್ಷಗಳ ಹಿಂದಷ್ಟೇ ಯುಕೆಯಿಂದ ಸ್ವೀಡನ್​ಗೆ ಸ್ಥಳಾಂತರಗೊಂಡಿದ್ದರು. ಅಲ್ಲಿಯ ಸ್ಥಳಗಳನ್ನು ನೋಡಬೇಕೆನ್ನುವ ಬಯಕೆಯಿಂದ ಹೊರಟಿದ್ದರು. ಸ್ವಲ್ಪ ದಿನಗಳವರೆಗೆ ನಿರ್ಜನವಾಗಿದ್ದ ಸ್ಥಳದಲ್ಲಿ ಉಳಿದುಕೊಂಡಿದ್ದರು, ಇಲ್ಲಿಯೇ ಸ್ವಲ್ಪ ದಿನ ಆರಾಮವಾಗಿರೋಣ ಎಂದುಕೊಂಡಿದ್ದರು. ಆದರೆ ಗೋಡೆಯ ಮೇಲಿನ ಆ ಒಂದು ಚಿತ್ರವನ್ನು ಕಂಡು ಕೂಡಲೇ ಗಂಟು-ಮೂಟೆ ಕಟ್ಟಿಕೊಂಡು ವಾಪಸಾಗಿದ್ದಾರೆ.

ಜೆನ್ನಿಯ ಮಗಳು ಹಾಗೆಯೇ ಬಂಗಲೆಯೆಲ್ಲಾ ಒಂದು ಸುತ್ತು ಹಾಕಿಕೊಂಡು ಬರಬೇಕೆಂದು ಹೊರಟಿದ್ದಳು, ಆ ಬಂಗಲೆಯ ಗೋಡೆಯ ಮೇಲೆ ಆಕೆಯ ಸಹೋದರ ಅಂದರೆ ಜೆನ್ನಿಯ ಕಿರಿಯ ಮಗನ ಚಿತ್ರವು ಹೆಣ್ಣಿನ ರೂಪದಲ್ಲಿದ್ದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.

ಮತ್ತಷ್ಟು ಓದಿ: 20 ವರ್ಷಗಳ ಹಿಂದೆ ಮಾವೋವಾದಿಗಳ ಬೆದರಿಕೆಯಿಂದ ಮುಚ್ಚಿದ್ದ ರಾಮಮಂದಿರ, ಇದೀಗ ಮತ್ತೆ ರೀಓಪನ್

ಕೂಡಲೇ ಆಕೆ ತಾಯಿಗೆ ವಿಷಯ ತಿಳಿಸಿದಾಗ ಜೆನ್ನಿ ಬಂದು ನೋಡಿದ್ದಾರೆ, ಹೌದು ಅಲ್ಲಿದ್ದಿದ್ದು ತನ್ನ ಮಗನ ಫೋಟೋ ಆದರೆ ಅಲ್ಲಿದ್ದಿದ್ದು ಹುಡುಗಿ ಎಂಬುದಷ್ಟೇ ವ್ಯತ್ಯಾಸ.

ಹಿಂದೆಂದೂ ಆ ಊರನ್ನು ನೋಡಿಯೇ ಇರದ ಕುಟುಂಬವು ಈ ಚಿತ್ರ ಕಂಡು ಹೌಹಾರಿದೆ. ತಕ್ಷಣವೇ ವಸ್ತುಗಳನ್ನು ಪ್ಯಾಕ್​ ಮಾಡಿ ಅಲ್ಲಿಂದ ಹೊರಟರು. ಈ ಘಟನೆ ಕುರಿತು ಜೆನ್ನಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ಜನರು ಕೂಡಲೇ ಅಲ್ಲಿಂದ ಹೊರಡುವಂತೆ ಸಲಹೆ ನೀಡಿದ್ದಾರೆ, ಇನ್ನೂ ಕೆಲವರು ಪುನರ್ಜನ್ಮದ ಕಥೆಯಿದ್ದಂತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ