AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ನೈಜೀರಿಯಾದ ಮಕ್ಕಳಿಗೆ ಕನ್ನಡ ಭಾಷೆ ಹೇಳಿ ಕೊಟ್ಟ ಡಾ. ಬ್ರೋ

ಖ್ಯಾತ ಯೂಟ್ಯೂಬರ್ ಡಾ. ಬ್ರೋ ಅಥವಾ ಗಗನ್‌ ಶ್ರೀನಿವಾಸ್‌ ಆಗಾಗ ತಮ್ಮ ವಿಡಿಯೋಗಳ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಆದರೆ ಇದೀಗ ನೈಜೀರಿಯಾದ ಪ್ರವಾಸದಲ್ಲಿದ್ದು, ಅಲ್ಲಿನ ಮಕ್ಕಳಿಗೆ ಕನ್ನಡ ಭಾಷೆಯನ್ನು ಹೇಳಿಕೊಟ್ಟು, ಕನ್ನಡಿಗರ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಇದೀಗ ಡಿ ಬಾಸ್ ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋವು ನೆಟ್ಟಿಗರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಸಾಯಿನಂದಾ
| Edited By: |

Updated on: Oct 26, 2024 | 3:48 PM

Share

ಕನ್ನಡದ ಖ್ಯಾತ ಯೂಟ್ಯೂಬರ್ ಡಾ. ಬ್ರೋ ಇದೀಗ ನೈಜೀರಿಯಾ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದಲ್ಲಿ ಡಾ. ಬ್ರೋ ನೈಜಿರಿಯಾದ ಸ್ಲಂ ಮಕ್ಕಳಿಗೆ ಕನ್ನಡ ಹೇಳಿಕೊಡುವ ಮೂಲಕ ಸುದ್ದಿಯಾಗಿದ್ದಾರೆ. ಪ್ರವಾಸದ ತುಣುಕುಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಇವರು ವಿದೇಶದಲ್ಲಿ ಪುಟ್ಟ ಸ್ಕೂಲಿನ ತರಗತಿಯೊಂದರ ಮಕ್ಕಳಿಗೆ ಕನ್ನಡದಲ್ಲಿ ಪಾಠ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

ಹೌದು, ಡಾ. ಬ್ರೋ ನೈಜೀರಿಯಾದ ಅತಿ ದೊಡ್ಡ ಸ್ಲಂ ಪ್ರದೇಶಕ್ಕೆ ತೆರಳಿದ್ದು ಅಲ್ಲಿನ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆಯಲ್ಲಿ ಅಲ್ಲಿನ ಮಕ್ಕಳಿಗೆ ನಮ್ಮ ದೇಶ ಹಾಗೂ ರಾಜ್ಯದ ಬಗ್ಗೆ ಹೇಳಿದ್ದಾರೆ. ಬಳಿಕ ನಮ್ಮ ಕನ್ನಡ ಭಾಷೆಯನ್ನು ಭಾರತದ ರಾಷ್ಟ್ರ ಭಾಷೆ ಎಂದು ಹೇಳಿದ್ದು ಕನ್ನಡ ಭಾಷೆಯಲ್ಲೇ ಪಾಠ ಮಾಡಿದ್ದಾರೆ. ಡಿ ಬಾಸ್ ಹೆಸರಿನ ಖಾತೆ ಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದೊಂದಿಗೆ ‘ಒಂದು ನಿಮಿಷ ಶಾಕ್ ಕೊಟ್ರಲ್ಲ ದೇವ್ರು’ ಎಂದು ಶೀರ್ಷಿಕೆ ಬರೆಯಲಾಗಿದೆ.

ಈ ವಿಡಿಯೋದಲ್ಲಿ ಗಗನ್‌ ಶ್ರೀನಿವಾಸ್‌ ಅವರು ನೈಜೀರಿಯಾದ ಶಾಲೆಗೆ ಭೇಟಿ ನೀಡಿರುವುದನ್ನು ನೋಡಿರಬಹುದು. ನೈಜೀರಿಯಾದ ಈ ಶಾಲೆಯನ್ನು ನೋಡಿದರೆ ಕಳಪೆ ಕಟ್ಟಡದಲ್ಲಿ ಇರುವಂತಿದೆ. ಈ ವಿಡಿಯೋದ ಪ್ರಾರಂಭದಲ್ಲಿ, ನಮ್ಮ ದೇಶ ಹಾಗ ರಾಜ್ಯದ ಬಗ್ಗೆ ಮಾತನಾಡಿದ್ದು, ಆ ಬಳಿಕ ನಮ್ಮ ಕನ್ನಡ ಭಾಷೆಯನ್ನು ಭಾರತದ ರಾಷ್ಟ್ರ ಭಾಷೆ ಎಂದು ಹೇಳುವುದನ್ನು ನೋಡಬಹುದು. ಅದಲ್ಲದೇ, ʼನಾನೀಗ ನಿಮಗೆ ಇಂಡಿಯಾದ ನ್ಯಾಷನಲ್‌ ಲ್ಯಾಂಗ್ವೇಜ್‌ ಹೇಳಿಕೊಡ್ತೀನಿʼ ಎಂದಿದ್ದಾರೆ. ತದನಂತರದಲ್ಲಿ ʼಅ, ಆ, ಇ, ಈʼ ಎಂದು ಕನ್ನಡದ ಅಕ್ಷರಮಾಲೆಯನ್ನು ಅಂ, ಅಃ ವರೆಗೆ ಹೇಳಿಕೊಟ್ಟಿದ್ದಾರೆ.

ಇದನ್ನೂ ಓದಿ: 24 ಕ್ಯಾರೆಟ್ ಚಿನ್ನ ಲೇಪಿತ ಆಮ್ಲೆಟ್ ತಿಂದಿದ್ದೀರಾ? ಇಲ್ಲಿದೆ ನೋಡಿ

ಕನ್ನಡ ರಾಜ್ಯೋತ್ಸವದ ಹತ್ತಿರ ಬರುತ್ತಿರುವ ಹೊತ್ತಲ್ಲಿಯೇ ವಿದೇಶಿ ಮಕ್ಕಳಿಗೆ ಕನ್ನಡ ಭಾಷೆ ಹೇಳಿಕೊಟ್ಟು ಕನ್ನಡಿಗರ ಹೃದಯ ಗೆದ್ದಿದ್ದಾರೆ. ನೆಟ್ಟಿಗರೊಬ್ಬರು, ʼʼನೈಜೀರಿಯಾಗೆ ಹೋಗಿ ಕನ್ನಡ ಬಾವುಟ ಹಾರಿಸಿದ್ದೀಯಲ್ಲ ಗುರು” ಎಂದಿದ್ದಾರೆ. ಮತ್ತೊಬ್ಬರು, “ಕನ್ನಡವನ್ನು ಭಾರತದ ರಾಷ್ಟ್ರಭಾಷೆ ಅಂತ ಕರೆದಿದ್ದಕ್ಕೆ ಥ್ಯಾಂಕ್‌ ಬ್ರೋ” ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ