Viral Post: ನರೇಂದ್ರ ಮೋದಿ ಗೆಲುವನ್ನು ಸಂಭ್ರಮಿಸಲು ಪಟಾಕಿ, 10 ಸಾವಿರ ಲಡ್ಡು ಸಿದ್ಧಗೊಳಿಸಿದ ಅಭಿಮಾನಿಗಳು

ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಇದೀಗ ಇಡೀ ದೇಶದ ಚಿತ್ತ ನಾಳಿನ ಚುನಾವಣಾ ಫಲಿತಾಂಶದ ಮೇಲಿದ್ದು, ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವವರು ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಈ ನಡುವೆ ಮೋದಿ ಜೀ ಸರ್ಕಾರ ಮತ್ತೊಮ್ಮೆ  ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಮೀಕ್ಷಾ ವದರಿಗಳು ಹೇಳುತ್ತಿವೆ. ಈ ಖುಷಿಯನ್ನು ಸಂಭ್ರಮಿಸಲು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದಾಗಲೇ ಭರ್ಜರಿ ತಯಾರಿ ನಡೆಸಿದ್ದು, ಈ ಕುರಿತ ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ. 

Viral Post: ನರೇಂದ್ರ ಮೋದಿ ಗೆಲುವನ್ನು ಸಂಭ್ರಮಿಸಲು ಪಟಾಕಿ, 10 ಸಾವಿರ ಲಡ್ಡು ಸಿದ್ಧಗೊಳಿಸಿದ ಅಭಿಮಾನಿಗಳು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 03, 2024 | 4:01 PM

2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲು ಕ್ಷಣಗಣನೆ ಶುರುವಾಗಿದ್ದು, ಇದೀಗ ಇಡೀ ದೇಶದ ಚಿತ್ತ ನಾಳೆ ನಡೆಯಲಿರುವ ಚುನಾವಣಾ ಫಲಿತಾಂಶದ ಮೇಲಿದೆ. ಜೊತೆಜೊತೆಗೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವವರು ಯಾರು ಎನ್ನುವ ಕುತೂಹಲ ಕೂಡಾ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಗಳು ತಿಳಿಸಿವೆ. ಇದೇ ಖುಷಿಯಲ್ಲಿ ಮೋದಿ ಗೆಲುವನ್ನು ಸಂಭ್ರಮಿಸಲು ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಭರ್ಜರಿ ತಯಾರಿಯನ್ನು ನಡೆಸಿದ್ದಾರೆ. ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಪ್ರಧಾನಿ ಮೋದಿಯವರ ಗೆಲುವನ್ನು ಸಂಭ್ರಮಿಸಲು ಇದಾಗಲೇ ತಯಾರಿ ಆರಂಭವಾಗಿದ್ದು, ಗುಜರಾತ್‌ನಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ  ಹಲವಾರು ಚಿತ್ರಮಂದಿರಗಳಲ್ಲಿ  ಚುನಾವಣಾ ಫಲಿತಾಂಶಗಳನ್ನು ಪ್ರಸಾರ ಮಾಡಲು ಸಿದ್ಧತೆ ನಡೆಯುತ್ತಿದೆ. ಇನ್ನೊಂದೆಡೆ ಪಟಾಕಿಗಳನ್ನು ಸಿಡಿಸಿ ಹಬ್ಬವನ್ನು ಸಂಭ್ರಮಿಸಲು ಕಾರ್ಯಕರ್ತರು ತಯಾರಿ ನಡೆಸಿದ್ದಾರೆ. ಮತ್ತೊಂದೆಡೆ ನಾಳೆಯ ಸಂಭ್ರಮಾಚರಣೆಗೆ ಮುಂಬೈನ ಶ್ರೀ ಗಣೇಶ್‌ ಭಂಡಾರ್‌ ಸ್ವೀಟ್‌ ಅಂಗಡಿಯಲ್ಲಿ 10 ಸಾವಿರ ಲಡ್ಡುಗಳನ್ನು ಸಿದ್ಧಪಡಿಸಲಾಗುತ್ತಿದೆ.

ಇದನ್ನೂ ಓದಿ: ಮೊಬೈಲ್‌ ಫೋನ್ ಕಸಿದುಕೊಂಡಿದಕ್ಕೆ ತನ್ನ ಪತಿಗೆ ಕರೆಂಟ್‌ ಶಾಕ್‌ ಕೊಟ್ಟ ಪತ್ನಿ

ವೈರಲ್​​ ಪೋಸ್ಟ್​ ಇಲ್ಲಿದೆ:

TimesAlebraIND ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಶೇಷ ಪೋಸ್ಟ್‌ 95 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಾವುಗಳು ಕೂಡಾ ಮೋದಿ ಜೀ ಗೆಲುವಿನ ಹಬ್ಬವನ್ನು ಸಂಭ್ರಮಿಸಲು ಕಾತುರದಿಂದ ಕಾಯುತ್ತಿದ್ದೇವೆ ಎಂದು ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು