AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೋರ್‌ವೆಲ್‌ ಕೊರೆಸುವಾಗ ಬಾನೆತ್ತರಕ್ಕೆ ಚಿಮ್ಮಿದ ನೀರು; ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು ನೋಡಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಕಾಣಸಿಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮ ಮನ ಗೆಲ್ಲುತ್ತವೆ. ಅಂತಹದ್ದೊಂದು ಹೃದಯಸ್ಪರ್ಶಿ ದೃಶ್ಯ ಇದೀಗ ವೈರಲ್‌ ಆಗಿದ್ದು, ರೈತರೊಬ್ಬರು ಬೋರ್‌ವೆಲ್‌ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಹೃದಯ ತುಂಬಿ ಕುಣಿದಿದ್ದಾರೆ. ಕೃಷಿಯ ಸಲುವಾಗಿ ಜಮೀನಿನಲ್ಲಿ ಕೊಳವೆ ಬಾರಿ ಕೊರೆಸಿದ್ದು, ಹೀಗೆ ಬೋರ್‌ವೆಲ್‌ ಕೊರೆಯುವಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ್ದು, ಈ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

Viral: ಬೋರ್‌ವೆಲ್‌ ಕೊರೆಸುವಾಗ ಬಾನೆತ್ತರಕ್ಕೆ ಚಿಮ್ಮಿದ ನೀರು; ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು ನೋಡಿ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 06, 2025 | 5:53 PM

Share

ಹೆಚ್ಚಿನವರು ಕೃಷಿಗಾಗಿ, ಕುಡಿಯುವ ನೀರಿಗಾಗಿ ಬೋರ್‌ವೆಲ್‌ (Borewell) ಕೊರೆಸುತ್ತಾರೆ. ಆದ್ರೆ ಬೋರ್‌ವೆಲ್‌ ಕೊರೆಸುವುದು ಅಷ್ಟು ಸುಲಭದ ಮಾತಲ್ಲ. ಹೌದು ಲಕ್ಷ ಲಕ್ಷ ಖರ್ಚು ಮಾಡಿ ಅದೆಷ್ಟೇ ಆಳ ಕೊಳವೆ ಬಾವಿ ಕೊರೆದರೂ ನೀರು ಸಿಗುವುದಿಲ್ಲ. ನೀರಿನ ಅಂಶವಿರುವ ಪಕ್ಕದಲ್ಲೇ ಕೊಳವೆ ಬಾವಿ ಕೊರೆದರೂ ನೀರು ಸಿಗದೇ ಹೋದ ಉದಾಹರಣೆಗಳಿವೆ. ಈ ಎಲ್ಲಾ ಸಮಸ್ಯೆಗಳಿರುವಾಗ ಬೋರ್‌ವೇಲ್‌ ಕೊರೆಸುವಾಗ ನೀರು ಸಿಕ್ಕಿದ್ರೆ ಅದರ ಖುಷಿಯೇ ಬೇರೆ. ಅದರಲ್ಲೂ ಪ್ರಮುಖವಾಗಿ ರೈತರ ಆನಂದಕ್ಕೆ ಪಾರವೇ ಇರುವುದಿಲ್ಲ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ರೈತರೊಬ್ಬರು ಬೋರ್‌ವೆಲ್‌ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಹೃದಯ ತುಂಬಿ ಕುಣಿದಿದ್ದಾರೆ. ಕೃಷಿಯ ಸಲುವಾಗಿ ಜಮೀನಿನಲ್ಲಿ ಕೊಳವೆ ಬಾರಿ ಕೊರೆಸಿದ್ದು, ಹೀಗೆ ಬೋರ್‌ವೆಲ್‌ ಕೊರೆಯುವಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ್ದು, ಈ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಹೊಲದಲ್ಲಿ ಬೋರ್‌ವೇಲ್‌ ಕೊರೆಸುವಾಗ ನೀರು ಬಾನೆತ್ತರಕ್ಕೆ ಚಿಮ್ಮಿದ್ದು, ಗಂಗೆ ಸಿಕ್ಕ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಜೊತೆಗೆ ಆ ನೀರನ್ನು ತೀರ್ಥದಂತೆ ಒರೆಸಿಕೊಂಡಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ಸಖತ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ
Image
ಮಲಗಿದ್ದ ವೇಳೆ ಸಹ ಪ್ರಯಾಣಿಕನಿಗೆ ಮುತ್ತಿಟ್ಟ ವ್ಯಕ್ತಿ
Image
ಭಾರತೀಯರ ಆತ್ಮೀಯ ಆತಿಥ್ಯಕ್ಕೆ ಮನಸೋತ ರಷ್ಯನ್‌ ಪ್ರವಾಸಿಗ
Image
ಬಾಲಕನನ್ನು ಅಟ್ಟಾಡಿಸಿಕೊಂಡು ಬಂದ ಬೀದಿ ನಾಯಿಗಳು, ಮುಂದೇನಾಯ್ತು ನೋಡಿ
Image
ಸೈಟ್‌ ಸೇಲ್‌ಗಿದೆ, ಓನ್ಲಿ ‌ ಫಾರ್‌ ವೆಜಿಟೇರಿಯನ್ಸ್‌

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

NaaTelanganaa ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, “ಈ ಸಂತೋಷವೇನು ಎಂದು ಎಲ್ಲರಿಗೂ ಅರ್ಥವಾಗಲ್ಲ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರೈತರೊಬ್ಬರು ಕೊಳವೆಬಾವಿ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಕುಣಿದು ಕುಪ್ಪಳಿಸುವಂತಹ ದೃಶ್ಯವನ್ನು ಕಾಣಬಹುದು. ನಂತರ ಅದೇ ನೀರನ್ನು ತೀರ್ಥದಂತೆ ಸ್ವೀಕರಿಸಿ ಅದನ್ನು ತಲೆಗೆ ಒರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಮಲಗಿದ್ದ ವೇಳೆ ಸಹ ಪ್ರಯಾಣಿಕನಿಗೆ ಮುತ್ತಿಟ್ಟ ವ್ಯಕ್ತಿ; ರೈಲಿನಲ್ಲಿ ನಡೆಯಿತು ಹೈಡ್ರಾಮಾ

ಮಾರ್ಚ್‌ 02 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.9 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಸಂತಸ, ಅದಕ್ಕಿಂತ ಮೊದಲಾಗುವ ದಿಗಿಲು ಈ ಎಲ್ಲಾ ಭಾವನೆ ಕೇವಲ ರೈತನಿಗೆ ಮಾತ್ರ ಗೊತ್ತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ಸಂತೋಷ ಏನೆಂದು ನಾನು ಅರ್ಥ ಮಾಡಬಲ್ಲೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ