AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೋರ್‌ವೆಲ್‌ ಕೊರೆಸುವಾಗ ಬಾನೆತ್ತರಕ್ಕೆ ಚಿಮ್ಮಿದ ನೀರು; ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು ನೋಡಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಕಾಣಸಿಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮ ಮನ ಗೆಲ್ಲುತ್ತವೆ. ಅಂತಹದ್ದೊಂದು ಹೃದಯಸ್ಪರ್ಶಿ ದೃಶ್ಯ ಇದೀಗ ವೈರಲ್‌ ಆಗಿದ್ದು, ರೈತರೊಬ್ಬರು ಬೋರ್‌ವೆಲ್‌ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಹೃದಯ ತುಂಬಿ ಕುಣಿದಿದ್ದಾರೆ. ಕೃಷಿಯ ಸಲುವಾಗಿ ಜಮೀನಿನಲ್ಲಿ ಕೊಳವೆ ಬಾರಿ ಕೊರೆಸಿದ್ದು, ಹೀಗೆ ಬೋರ್‌ವೆಲ್‌ ಕೊರೆಯುವಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ್ದು, ಈ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

Viral: ಬೋರ್‌ವೆಲ್‌ ಕೊರೆಸುವಾಗ ಬಾನೆತ್ತರಕ್ಕೆ ಚಿಮ್ಮಿದ ನೀರು; ರೈತನಿಗೆ ಹರ್ಷ ತಂದ ಕ್ಷಣ ಹೇಗಿತ್ತು ನೋಡಿ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 06, 2025 | 5:53 PM

Share

ಹೆಚ್ಚಿನವರು ಕೃಷಿಗಾಗಿ, ಕುಡಿಯುವ ನೀರಿಗಾಗಿ ಬೋರ್‌ವೆಲ್‌ (Borewell) ಕೊರೆಸುತ್ತಾರೆ. ಆದ್ರೆ ಬೋರ್‌ವೆಲ್‌ ಕೊರೆಸುವುದು ಅಷ್ಟು ಸುಲಭದ ಮಾತಲ್ಲ. ಹೌದು ಲಕ್ಷ ಲಕ್ಷ ಖರ್ಚು ಮಾಡಿ ಅದೆಷ್ಟೇ ಆಳ ಕೊಳವೆ ಬಾವಿ ಕೊರೆದರೂ ನೀರು ಸಿಗುವುದಿಲ್ಲ. ನೀರಿನ ಅಂಶವಿರುವ ಪಕ್ಕದಲ್ಲೇ ಕೊಳವೆ ಬಾವಿ ಕೊರೆದರೂ ನೀರು ಸಿಗದೇ ಹೋದ ಉದಾಹರಣೆಗಳಿವೆ. ಈ ಎಲ್ಲಾ ಸಮಸ್ಯೆಗಳಿರುವಾಗ ಬೋರ್‌ವೇಲ್‌ ಕೊರೆಸುವಾಗ ನೀರು ಸಿಕ್ಕಿದ್ರೆ ಅದರ ಖುಷಿಯೇ ಬೇರೆ. ಅದರಲ್ಲೂ ಪ್ರಮುಖವಾಗಿ ರೈತರ ಆನಂದಕ್ಕೆ ಪಾರವೇ ಇರುವುದಿಲ್ಲ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ರೈತರೊಬ್ಬರು ಬೋರ್‌ವೆಲ್‌ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಹೃದಯ ತುಂಬಿ ಕುಣಿದಿದ್ದಾರೆ. ಕೃಷಿಯ ಸಲುವಾಗಿ ಜಮೀನಿನಲ್ಲಿ ಕೊಳವೆ ಬಾರಿ ಕೊರೆಸಿದ್ದು, ಹೀಗೆ ಬೋರ್‌ವೆಲ್‌ ಕೊರೆಯುವಾಗ ಮುಗಿಲೆತ್ತರಕ್ಕೆ ನೀರು ಚಿಮ್ಮಿದ್ದು, ಈ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಹೊಲದಲ್ಲಿ ಬೋರ್‌ವೇಲ್‌ ಕೊರೆಸುವಾಗ ನೀರು ಬಾನೆತ್ತರಕ್ಕೆ ಚಿಮ್ಮಿದ್ದು, ಗಂಗೆ ಸಿಕ್ಕ ಖುಷಿಗೆ ರೈತ ಕುಣಿದು ಕುಪ್ಪಳಿಸಿದ್ದಾರೆ. ಜೊತೆಗೆ ಆ ನೀರನ್ನು ತೀರ್ಥದಂತೆ ಒರೆಸಿಕೊಂಡಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ಸಖತ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ
Image
ಮಲಗಿದ್ದ ವೇಳೆ ಸಹ ಪ್ರಯಾಣಿಕನಿಗೆ ಮುತ್ತಿಟ್ಟ ವ್ಯಕ್ತಿ
Image
ಭಾರತೀಯರ ಆತ್ಮೀಯ ಆತಿಥ್ಯಕ್ಕೆ ಮನಸೋತ ರಷ್ಯನ್‌ ಪ್ರವಾಸಿಗ
Image
ಬಾಲಕನನ್ನು ಅಟ್ಟಾಡಿಸಿಕೊಂಡು ಬಂದ ಬೀದಿ ನಾಯಿಗಳು, ಮುಂದೇನಾಯ್ತು ನೋಡಿ
Image
ಸೈಟ್‌ ಸೇಲ್‌ಗಿದೆ, ಓನ್ಲಿ ‌ ಫಾರ್‌ ವೆಜಿಟೇರಿಯನ್ಸ್‌

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

NaaTelanganaa ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, “ಈ ಸಂತೋಷವೇನು ಎಂದು ಎಲ್ಲರಿಗೂ ಅರ್ಥವಾಗಲ್ಲ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರೈತರೊಬ್ಬರು ಕೊಳವೆಬಾವಿ ಕೊರೆಸುವಾಗ ನೀರು ಸಿಕ್ಕ ಖುಷಿಗೆ ಕುಣಿದು ಕುಪ್ಪಳಿಸುವಂತಹ ದೃಶ್ಯವನ್ನು ಕಾಣಬಹುದು. ನಂತರ ಅದೇ ನೀರನ್ನು ತೀರ್ಥದಂತೆ ಸ್ವೀಕರಿಸಿ ಅದನ್ನು ತಲೆಗೆ ಒರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಮಲಗಿದ್ದ ವೇಳೆ ಸಹ ಪ್ರಯಾಣಿಕನಿಗೆ ಮುತ್ತಿಟ್ಟ ವ್ಯಕ್ತಿ; ರೈಲಿನಲ್ಲಿ ನಡೆಯಿತು ಹೈಡ್ರಾಮಾ

ಮಾರ್ಚ್‌ 02 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.9 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಸಂತಸ, ಅದಕ್ಕಿಂತ ಮೊದಲಾಗುವ ದಿಗಿಲು ಈ ಎಲ್ಲಾ ಭಾವನೆ ಕೇವಲ ರೈತನಿಗೆ ಮಾತ್ರ ಗೊತ್ತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ಸಂತೋಷ ಏನೆಂದು ನಾನು ಅರ್ಥ ಮಾಡಬಲ್ಲೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?