Video: ಹೊಲದಲ್ಲಿ ಕೆಲ್ಸ ಮಾಡಿ ದಣಿದು ಬಂದ್ರೂ ಕ್ರಿಕೆಟ್ ಆಡೋಕೆ ಅನ್ನದಾತನಿಗೆ ಏನ್ ಖುಷಿ ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಮ್ಮ ಮನಸ್ಸಿಗೆ ತುಂಬಾ ಮುದ ನೀಡುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಇಲ್ಲೊಬ್ರು ರೈತ ಹೊಲದಲ್ಲಿ ಕೆಲಸ ಮಾಡಿ ದಣಿದು ಬಂದ್ರೂ ಕೂಡಾ ಸುಸ್ತಾಗಿ ಕೂರದೆ, ಮನಸ್ಸನ್ನು ಸಂತೋಷಪಡಿಸುವುದು ತುಂಬಾ ಮುಖ್ಯ ಎನ್ನುತ್ತಾ ಮಕ್ಕಳೊಂದಿಗೆ ಮಕ್ಕಳಾಗಿ ಬಹಳ ಉತ್ಸಾಹದಿಂದ ಕ್ರಿಕೆಟ್ ಆಡಿದ್ದಾರೆ. ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

Video: ಹೊಲದಲ್ಲಿ ಕೆಲ್ಸ ಮಾಡಿ ದಣಿದು ಬಂದ್ರೂ ಕ್ರಿಕೆಟ್ ಆಡೋಕೆ ಅನ್ನದಾತನಿಗೆ ಏನ್ ಖುಷಿ ನೋಡಿ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2024 | 3:46 PM

ಕ್ರಿಕೆಟ್ ಆಟ ಹೆಚ್ಚಿನವರ ನೆಚ್ಚಿನ ಕ್ರೀಡೆ ಅಂತಾನೇ ಹೇಳ್ಬಹುದು. ಅದರಲ್ಲೂ ನಮ್ಮ ದೇಶದಲ್ಲಿ ಎಲ್ಲಾ ವಯೋಮಾನದವರು ಕೂಡಾ ಈ ಆಟವನ್ನು ಆಡುತ್ತಾರೆ. ಹುಡುಗರಂತೂ ಸಂಜೆ ಕೆಲಸ ಬಿಟ್ಟು ಬಂದು ಅಥವಾ ಶಾಲೆ ಬಿಟ್ಟ ಬಳಿಕ ಗಲ್ಲಿ ಕ್ರಿಕೆಟ್ ಆಡುತ್ತಾ ಎಂಜಾಯ್ ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ರು ರೈತ ಕೂಡಾ ಹುಡುಗರಿಗಿಂತ ನಾನೇನು ಕಮ್ಮಿಯಿಲ್ಲ ಎನ್ನುತ್ತಾ, ಹೊಲದಲ್ಲಿ ಕೆಲ್ಸ ಮಾಡಿ ದಣಿದು ಬಂದಿದ್ರೂ ಕೂಡಾ, ಮಕ್ಕಳ ಜೊತೆ ಮಕ್ಕಳಾಗಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅನ್ನದಾತನ ಕ್ರಿಕೆಟ್ ಆಟಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಈ ಕುರಿತ ಪೋಸ್ಟ್ ಒಂದನ್ನು ಡಾ. ವಿಠ್ಠಲ್ ರಾವ್ (Dr. Vithal rao MBBS) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಹೊಲದಲ್ಲಿ ದಣಿದು ಬಂದ್ರು ಕ್ರಿಕೆಟ್ ಆಡೋಕೆ ಎನ್ ಖುಷಿ ಅಲ್ವಾ ನಮ್ಮ ಅನ್ನದಾತರಿಗೆ…” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಹೊಲದಲ್ಲಿ ಕೆಲಸ ಮುಗಿಸಿ ಸುಸ್ತಾಗಿ ಸಂಜೆ ಮನೆ ಕಡೆ ಬರುವಾಗ ರೈತರೊಬ್ಬ ಮಕ್ಕಳು ಗಲ್ಲಿ ಕ್ರಿಕೆಟ್ ಆಡುವುದನ್ನು ಕಂಡು ಖುಷಿಯಿಂದ ಸುಸ್ತನ್ನೆಲ್ಲಾ ಮರೆತು ತಾವು ಕೂಡಾ ಮಕ್ಕಳೊಂದಿಗೆ ಮಕ್ಕಳಾಗಿ ಕ್ರಿಕೆಟ್ ಆಡಿದ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಒಂದು ಪ್ಲೇಟ್ ಮ್ಯಾಂಗೋ ಮೊಮೊಸ್ ಬೆಲೆ 200 ರೂ, ಮಾಡುವುದನ್ನು ನೋಡಿದ್ರೆ ತಿನ್ನೋದಿಲ್ಲ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಆಗಸ್ಟ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 12 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಈ ದೃಶ್ಯ ನೋಡೋಕೆ ತುಂಬಾ ಖುಷಿ ಅನಿಸುತ್ತೆ’ ಎಂಬ ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಕ್ರಿಕೆಟ್ ಭಾರತೀಯರಲ್ಲಿ ಬೆರೆತು ಹೋಗಿದೆ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ