AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ

ಲತಾ ಮಂಗೇಶ್ಕರ್​ ಮತ್ತು ಕಿಶೋರ್​ ಕುಮಾರ್​ ಅವರು ಹಾಡಿದ Tere Mere Milan Ki Yeh Raine ಹಾಡನ್ನು ತಂದೆ ಮಗಳ ಜೋಡಿಯೊಂದು ಹಾಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಲತಾ ಮಂಗೇಶ್ಕರ್​ ಹಾಡನ್ನು ಹಾಡಿ ನೆಟ್ಟಿಗರ ಮನಗೆದ್ದ ತಂದೆ ಮಗಳ ಜೋಡಿ
ತಂದೆ ಮಗಳು
TV9 Web
| Edited By: |

Updated on:Mar 09, 2022 | 10:17 AM

Share

ಹಾಡುಗಾರರು ಭೌತಿಕವಾಗಿ ಪ್ರಪಂಚವನ್ನು ತೊರೆದರೂ ಅವರ ಕಂಠದಲ್ಲಿ ಮೂಡಿ ಬಂದ ಒಂದಷ್ಟು ಹಾಡುಗಳು ಕೇಳುಗರಿಗೆ ಮುದ ನೀಡುತ್ತಲೇ ಇರುತ್ತವೆ.  ಅದೆಷ್ಟೂ ಮರೆಯಲಾಗದ ಹಾಡುಗಳನ್ನು ನೀಡಿ ಕಲಾವಿದರು ಮರೆಯಾಗಿದ್ದಾರೆ. ಅವರಲ್ಲಿ ಇತ್ತೀಚೆಗೆ ಮರೆಯಾದ ಭಾರತ ರತ್ನ ಲತಾ ಮಂಗೇಶ್ಕರ್​ ಕೂಡ ಒಬ್ಬರು. ಗಾನ ಕೋಗಿಲೆ ಎಂದೇ ಖ್ಯಾತಿಗಳಿಸಿದ್ದ ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹಾಡುಗಳು ಮಾತ್ರ ಎಲ್ಲರನ್ನೂ ಖುಷಿಗೊಳಿಸುತ್ತವೆ. ಇದೀಗ ಲತಾ ಮಂಗೇಶ್ಕರ್​ ಮತ್ತು ಕಿಶೋರ್​ ಕುಮಾರ್​ ಅವರು ಹಾಡಿದ Tere Mere Milan Ki Yeh Raine ಹಾಡನ್ನು ತಂದೆ ಮಗಳ ಜೋಡಿಯೊಂದು ಹಾಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ತಂದೆ ಮಗಳ ಹಾಡನ್ನು ಕೇಳಿ ಕಿವಿಗಳು ಪಾವನವಾಯಿತು ಎಂದು ಕಾಮೆಂಟ್​ ಮಾಡಿದ್ದಾರೆ. ವಿಡಿಯೋದಲ್ಲಿ ಮೊದಲು ಯುವತಿ ಹಾಡನ್ನು ಆರಂಭ ಮಾಡಿದ್ದು, ನಂತರ ಆಕೆಯ ತಂದೆ ಜತೆಯಾಗಿದ್ದಾರೆ. 1973ರಲ್ಲಿ ಬಿಡುಗಡೆಯಾದ ಅಭಿಮಾನ್​ ಚಿತ್ರದ ಹಾಡು ಇದಾಗಿದೆ. ಗಿಟಾರ್​ ನುಡಿಸುತ್ತಾ ತಂದೆ ಮಗಳು ಹಾಡನ್ನು ಹಾಡಿದ್ದಾರೆ.

ಜೂಹಿ ಸಿಂಗ್​ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಈ ಹಾಡಿನ ವಿಡಿಯೋ ಹಂಚಿಕೊಂಡಿದ್ದು, 25 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಸದ್ಯ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚಿಕೊಂಡು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಮಿಲಿಟರಿ ಚೆಕ್​ಪಾಯಿಂಟ್​ನಲ್ಲಿ ಮಂಡಿಯೂರಿ ಯುವತಿಗೆ ಪ್ರಪೋಸ್​ ಮಾಡಿದ ಉಕ್ರೇನ್​ ಸೈನಿಕ: ವಿಡಿಯೋ ವೈರಲ್​

Published On - 10:14 am, Wed, 9 March 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!