AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಡುಪಿ; ಬಾವಿಯಲ್ಲಿ ಬಿದ್ದ ನವಿಲನ್ನು ರಕ್ಷಿಸಿದ ಅಪ್ಪ ಮಗ

Wildlife : ರಾಷ್ಟ್ರಪಕ್ಷಿಯನ್ನು ರಕ್ಷಿಸಿದ್ದೀರಿ ಎಂದು ಒಂದಿಷ್ಟು ಜನ. ನವಿಲನ್ನು ರಕ್ಷಿಸಲು ಹೋಗಿ ಅದರ ಜಾಗದಲ್ಲಿ ನಿಮ್ಮ ಮಗ ಇದ್ದಿದ್ದರೆ? ಎಂದು ಮತ್ತೊಂದಿಷ್ಟು ಜನ. ಆದರೆ ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಇಲಾಖೆಯನ್ನು ಸಂಪರ್ಕಿಸುವುದು ಒಳಿತು.

Viral Video: ಉಡುಪಿ; ಬಾವಿಯಲ್ಲಿ ಬಿದ್ದ ನವಿಲನ್ನು ರಕ್ಷಿಸಿದ ಅಪ್ಪ ಮಗ
ಬಾವಿಯಲ್ಲಿ ಬಿದ್ದ ನವಿಲನ್ನು ರಕ್ಷಿಸುತ್ತಿರುವ ಅಪ್ಪ ಮಗ
ಶ್ರೀದೇವಿ ಕಳಸದ
|

Updated on:Jul 19, 2023 | 6:11 PM

Share

Udupi : ಉಡುಪಿಯ ಉದ್ಯಾವರದ ಕಲಾಯಿಬೈಲ್​ ಎಂಬ ಗ್ರಾಮದಲ್ಲಿ ನವಿಲೊಂದು (Peacock) ಅಕಸ್ಮಾತ್​ ಆಗಿ ಬಾವಿಗೆ ಬಿದ್ದಿದೆ. ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದ ಆ ಪಕ್ಷಿಯು ಗ್ರಾಮಸ್ಥರಾದ ವಿಜಯಕುಮಾರ್​ ಮತ್ತು ಅವರ ಮಗ ವಿಶಾಲ ಅವರ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಅದನ್ನು ರಕ್ಷಿಸುವ ಉಪಾಯಕ್ಕೆ ಅವರಿಬ್ಬರೂ ಮುಂದಾಗಿದ್ದಾರೆ. ವಿಶಾಲ ತನ್ನ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದಾರೆ. ನಂತರ ತಮ್ಮ ಕಾಲುಗಳೊಳಗೆ ಆ ನವಿಲನ್ನು ಹಿಡಿದು ಬಾವಿನೀರಿನಿಂದ ಮೇಲೆಕ್ಕೆತ್ತಿದ್ದಾರೆ.

ತಂದೆ ಮಗ ಸೇರಿ ನವಿಲಿನ ಜೀವ ಉಳಿಸಿದ್ದಕ್ಕಾಗಿ ಹಲವಾರು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಇನ್ನೂ ಕೆಲವರು ಈ ಸಾಹಸಕ್ಕಿಳಿದ ಮಗನ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಉಳಿದವರು ತಮಾಷೆಯನ್ನೂ ಮಾಡಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ವೀಟ್ ಮಾಡಿದ ಈ ವಿಡಿಯೋ ಅನ್ನು ಈಗಾಗಲೇ 13,300 ಜನರು ನೋಡಿದ್ದಾರೆ. 75 ಜನ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral: ನೀಲಿಕಂಗಳ ಹುಡುಗನ ‘ಕೆಫೆ ಚಾಯ್​ವಾಲಾ ಅರ್ಷದ್​ ಖಾನ್​’ ಇದೀಗ ಲಂಡನ್​ನಲ್ಲಿ

ನೀವಿಬ್ಬರೂ ರಾಷ್ಟ್ರಪಕ್ಷಿಯ ಜೀವ ಉಳಿಸಿದ್ದೀರಿ, ನಿಮಗೆ ದೇವರು ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಸಾಕಷ್ಟು ಜನರು. ಯಾಕೆ ಇಂಥ ಹುಚ್ಚು ಸಾಹಸಕ್ಕೆ ಇಳಿದಿರಿ? ನವಿಲಿನ ಜಾಗದಲ್ಲಿ ಅಕಸ್ಮಾತ್​ ನಿಮ್ಮ ಮಗ ಬಿದ್ದಿದ್ದರೆ ಎಂದಿದ್ದಾರೆ ಕೆಲವರು. ಇಂಥ ಕೆಲಸವನ್ನು ಮಕ್ಕಳಿಂದ ಮಾಡಿಸುವ ಬದಲು ಅರಣ್ಯ ಇಲಾಖೆಗೆ ತಿಳಿಸಿ ಎಂದು ಸಲಹೆ ನೀಡಿದ್ದಾರೆ ಒಬ್ಬರು.

ಇದನ್ನೂ ಓದಿ : Viral Video: ಒಂದೇ ತಟ್ಟೆಯಲ್ಲಿ ಸಿಂಹದೊಂದಿಗೆ ಊಟ ಮಾಡುತ್ತಿರುವ ಯುವತಿ

ವನ್ಯಮೃಗಗಳು ಪಕ್ಷಿಗಳು ಹೀಗೆ ಅಪಾಯದಲ್ಲಿದ್ದಾಗ ಅಥವಾ ನೀವಿದ್ದ ಜಾಗದಲ್ಲಿ ಬಂದಾಗ ತಕ್ಷಣವೇ ಅರಣ್ಯ ಇಲಾಖೆ ಅಥವಾ Wildlife SOS  ತಿಳಿಸುವುದು ಉತ್ತಮ. ವಿನಾಕಾರಣ ಅಪಾಯಕ್ಕೆ ಒಡ್ಡಿಕೊಳ್ಳುವುದು ಸಲ್ಲದು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:09 pm, Wed, 19 July 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್