AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉಡುಪಿ; ಬಾವಿಯಲ್ಲಿ ಬಿದ್ದ ನವಿಲನ್ನು ರಕ್ಷಿಸಿದ ಅಪ್ಪ ಮಗ

Wildlife : ರಾಷ್ಟ್ರಪಕ್ಷಿಯನ್ನು ರಕ್ಷಿಸಿದ್ದೀರಿ ಎಂದು ಒಂದಿಷ್ಟು ಜನ. ನವಿಲನ್ನು ರಕ್ಷಿಸಲು ಹೋಗಿ ಅದರ ಜಾಗದಲ್ಲಿ ನಿಮ್ಮ ಮಗ ಇದ್ದಿದ್ದರೆ? ಎಂದು ಮತ್ತೊಂದಿಷ್ಟು ಜನ. ಆದರೆ ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಇಲಾಖೆಯನ್ನು ಸಂಪರ್ಕಿಸುವುದು ಒಳಿತು.

Viral Video: ಉಡುಪಿ; ಬಾವಿಯಲ್ಲಿ ಬಿದ್ದ ನವಿಲನ್ನು ರಕ್ಷಿಸಿದ ಅಪ್ಪ ಮಗ
ಬಾವಿಯಲ್ಲಿ ಬಿದ್ದ ನವಿಲನ್ನು ರಕ್ಷಿಸುತ್ತಿರುವ ಅಪ್ಪ ಮಗ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 19, 2023 | 6:11 PM

Share

Udupi : ಉಡುಪಿಯ ಉದ್ಯಾವರದ ಕಲಾಯಿಬೈಲ್​ ಎಂಬ ಗ್ರಾಮದಲ್ಲಿ ನವಿಲೊಂದು (Peacock) ಅಕಸ್ಮಾತ್​ ಆಗಿ ಬಾವಿಗೆ ಬಿದ್ದಿದೆ. ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದ ಆ ಪಕ್ಷಿಯು ಗ್ರಾಮಸ್ಥರಾದ ವಿಜಯಕುಮಾರ್​ ಮತ್ತು ಅವರ ಮಗ ವಿಶಾಲ ಅವರ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಅದನ್ನು ರಕ್ಷಿಸುವ ಉಪಾಯಕ್ಕೆ ಅವರಿಬ್ಬರೂ ಮುಂದಾಗಿದ್ದಾರೆ. ವಿಶಾಲ ತನ್ನ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದಾರೆ. ನಂತರ ತಮ್ಮ ಕಾಲುಗಳೊಳಗೆ ಆ ನವಿಲನ್ನು ಹಿಡಿದು ಬಾವಿನೀರಿನಿಂದ ಮೇಲೆಕ್ಕೆತ್ತಿದ್ದಾರೆ.

ತಂದೆ ಮಗ ಸೇರಿ ನವಿಲಿನ ಜೀವ ಉಳಿಸಿದ್ದಕ್ಕಾಗಿ ಹಲವಾರು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಇನ್ನೂ ಕೆಲವರು ಈ ಸಾಹಸಕ್ಕಿಳಿದ ಮಗನ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಉಳಿದವರು ತಮಾಷೆಯನ್ನೂ ಮಾಡಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಟ್ವೀಟ್ ಮಾಡಿದ ಈ ವಿಡಿಯೋ ಅನ್ನು ಈಗಾಗಲೇ 13,300 ಜನರು ನೋಡಿದ್ದಾರೆ. 75 ಜನ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral: ನೀಲಿಕಂಗಳ ಹುಡುಗನ ‘ಕೆಫೆ ಚಾಯ್​ವಾಲಾ ಅರ್ಷದ್​ ಖಾನ್​’ ಇದೀಗ ಲಂಡನ್​ನಲ್ಲಿ

ನೀವಿಬ್ಬರೂ ರಾಷ್ಟ್ರಪಕ್ಷಿಯ ಜೀವ ಉಳಿಸಿದ್ದೀರಿ, ನಿಮಗೆ ದೇವರು ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಸಾಕಷ್ಟು ಜನರು. ಯಾಕೆ ಇಂಥ ಹುಚ್ಚು ಸಾಹಸಕ್ಕೆ ಇಳಿದಿರಿ? ನವಿಲಿನ ಜಾಗದಲ್ಲಿ ಅಕಸ್ಮಾತ್​ ನಿಮ್ಮ ಮಗ ಬಿದ್ದಿದ್ದರೆ ಎಂದಿದ್ದಾರೆ ಕೆಲವರು. ಇಂಥ ಕೆಲಸವನ್ನು ಮಕ್ಕಳಿಂದ ಮಾಡಿಸುವ ಬದಲು ಅರಣ್ಯ ಇಲಾಖೆಗೆ ತಿಳಿಸಿ ಎಂದು ಸಲಹೆ ನೀಡಿದ್ದಾರೆ ಒಬ್ಬರು.

ಇದನ್ನೂ ಓದಿ : Viral Video: ಒಂದೇ ತಟ್ಟೆಯಲ್ಲಿ ಸಿಂಹದೊಂದಿಗೆ ಊಟ ಮಾಡುತ್ತಿರುವ ಯುವತಿ

ವನ್ಯಮೃಗಗಳು ಪಕ್ಷಿಗಳು ಹೀಗೆ ಅಪಾಯದಲ್ಲಿದ್ದಾಗ ಅಥವಾ ನೀವಿದ್ದ ಜಾಗದಲ್ಲಿ ಬಂದಾಗ ತಕ್ಷಣವೇ ಅರಣ್ಯ ಇಲಾಖೆ ಅಥವಾ Wildlife SOS  ತಿಳಿಸುವುದು ಉತ್ತಮ. ವಿನಾಕಾರಣ ಅಪಾಯಕ್ಕೆ ಒಡ್ಡಿಕೊಳ್ಳುವುದು ಸಲ್ಲದು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 6:09 pm, Wed, 19 July 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!