AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶವದ ವಾಹನ ಬರದಿದ್ದಕ್ಕೆ 7 ವರ್ಷದ ಮಗಳ ಶವವನ್ನು ತನ್ನ ಹೆಗಲ ಮೇಲೆ ಹೊತ್ತು 10 ಕಿಮೀ ನಡೆದ ತಂದೆ

ನಾನು ವಿಡಿಯೋವನ್ನು ನೋಡಿದೆ, ಇದು ಗೊಂದಲದ ಸಂಗತಿಯಾಗಿದೆ. ತಮ್ಮ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯವಾಗದವರನ್ನು ತೆಗೆದುಹಾಕಲು ನಾನು ಆದೇಶಿಸಿದ್ದೇನೆ ಎಂದು ಸಿಂಗ್‌ಡಿಯೊ ಹೇಳಿದ್ದಾರೆ.

ಶವದ ವಾಹನ ಬರದಿದ್ದಕ್ಕೆ 7 ವರ್ಷದ ಮಗಳ ಶವವನ್ನು ತನ್ನ ಹೆಗಲ ಮೇಲೆ ಹೊತ್ತು 10 ಕಿಮೀ ನಡೆದ ತಂದೆ
ಮಗಳ ಶವವನ್ನು ಹೆಗಲ ಮೇಲೆ ಹೊತ್ತು ನಡೆಯುತ್ತಿರುವ ತಂದೆ
TV9 Web
| Edited By: |

Updated on: Mar 26, 2022 | 1:14 PM

Share

ಛತ್ತೀಸ್‌ಗಢ: ವ್ಯಕ್ತಿಯೊಬ್ಬ ತನ್ನ ಏಳು ವರ್ಷದ ಮಗಳ ಶವ ( 7-year-old daughter’s deadbody) ವನ್ನು ಭುಜದ ಮೇಲೆ ಹೊತ್ತೊಯ್ಯುತ್ತಿರುವ ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ಕುರಿತು ತನಿಖೆಗೆ ಆದೇಶಿಸುವಂತೆ ಆರೋಗ್ಯ ಸಚಿವ ಟಿಎಸ್ ಸಿಂಗ್ ಡಿಯೋ ಒತ್ತಾಯಿಸಿದ್ದಾರೆ. ಲಖನ್‌ಪುರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ (ಸಿಎಚ್‌ಸಿ) ವ್ಯಕ್ತಿಗೆ ಶವ ವಾಹನವನ್ನು ನಿರಾಕರಿಸಲಾಗಿದೆ. ಆರೋಗ್ಯ ಸಚಿವರು ತನಿಖೆಗೆ ಆದೇಶಿಸಿದ ನಂತರ ವೈದ್ಯಾಧಿಕಾರಿಯನ್ನು ವಜಾಗೊಳಿಸಲಾಯಿತು. ನಾನು ವಿಡಿಯೋವನ್ನು ನೋಡಿದೆ, ಇದು ಗೊಂದಲದ ಸಂಗತಿಯಾಗಿದೆ. ತಮ್ಮ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯವಾಗದವರನ್ನು ತೆಗೆದುಹಾಕಲು ನಾನು ಆದೇಶಿಸಿದ್ದೇನೆ ಎಂದು ಸಿಂಗ್‌ಡಿಯೊ ಹೇಳಿದ್ದಾರೆ. ಬಾಲಕಿಯ ತಂದೆ ಈಶ್ವರ್ ದಾಸ್ ಶುಕ್ರವಾರ ಮುಂಜಾನೆ ಲಖನ್‌ಪುರದಿಂದ ಅಮ್ಡಾಲಾ ಗ್ರಾಮಕ್ಕೆ 10 ಕಿಮೀ ನಡೆದುಕೊಂಡು ಹೋಗಿದ್ದಾರೆ. ಅವರ ಮಗಳು ಸುರೇಖಾ ಅನಾರೋಗ್ಯದಿಂದ ಬಳಲುತ್ತಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಆರೋಗ್ಯ ಕೇಂದ್ರದ ವೈದ್ಯ ಡಾ ವಿನೋದ್ ಭಾರ್ಗವ್ ಮಾತನಾಡಿ, ಬಾಲಕಿ ತೀವ್ರ ಜ್ವರದಿಂದ ಬಳಲುತ್ತಿದ್ದಳು ಮತ್ತು ಆಕೆ ಬಂದ ಕೂಡಲೇ ಅಗತ್ಯ ಚಿಕಿತ್ಸೆ ಪ್ರಾರಂಭಿಸಲಾಯಿತು. ಆದರೆ ಆಮ್ಲಜನಕದ ಮಟ್ಟವು ತುಂಬಾ ಕಡಿಮೆಯಾದ ಕಾರಣ ಆಕೆಯ ಸ್ಥಿತಿಯು ಹದಗೆಟ್ಟಿದ್ದು, ಬೆಳಿಗ್ಗೆ 7.30 ರ ಸುಮಾರಿಗೆ ಬಾಲಕಿ ನಿಧನರಾದರು ಎಂದು ಅವರು ಹೇಳಿದರು. ನಂತರ ತಂದೆ ಶವವನ್ನು ತಮ್ಮ ಸ್ಥಳಕ್ಕೆ ಸಾಗಿಸಲು ಶವ ವಾಹನಕ್ಕಾಗಿ ಪ್ರಯತ್ನಿಸಿದರು. ಆದರೆ ವಾಹನವು ಬರಲು ತುಂಬಾ ಸಮಯ ತೆಗೆದುಕೊಂಡಿದ್ದರಿಂದ ಶವವನ್ನು ಹೆಗಲ ಮೇಲೆ ಹೊತ್ತು ಮನೆಗೆ ಸಾಗಿಸಲು ನಿರ್ಧರಿಸಿದರು. ಸುಮಾರು 9.20ರ ಗಂಟೆಗೆ ಶವ ವಾಹನ ಬಂದಿದೆ. ಆದರೆ ಅದು ಬರುವ ಮೊದಲು ಆ ವ್ಯಕ್ತಿ ಶವವನ್ನು ತೆಗೆದುಕೊಂಡು ಹೋಗಿದ್ದರು ಎಂದು ವೈದ್ಯರು ಸಮರ್ಥಿಸಿಕೊಂಡರು. ಕಳೆದ ಹದಿನೈದು ದಿನಗಳಿಂದ ಬಾಲಕಿ ಜ್ವರದಿಂದ ಬಳಲುತ್ತಿದ್ದಳು. ಬಾಲಕಿಗೆ ಖಾಲಿ ಹೊಟ್ಟೆಯಲ್ಲಿ ಚುಚ್ಚುಮದ್ದು ನೀಡಲಾಗಿದ್ದು, ಅದು ಅವಳ ದೇಹದ ಮೇಲೆ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ತಂದೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಂಬಿಕಾಪುರ ಕ್ಷೇತ್ರವನ್ನು ಪ್ರತಿನಿಧಿಸುವ ಆರೋಗ್ಯ ಸಚಿವರಿಗೆ ವಿಡಿಯೋ ತಲುಪಿದ ನಂತರ ತಕ್ಷಣವೇ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ವೈದ್ಯಕೀಯ ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದರು. ಬಾಲಕಿಯ ಸ್ಥಿತಿ ಹದಗೆಟ್ಟಿದ್ದು, ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಮೂಗಿನಿಂದ ರಕ್ತಸ್ರಾವವೂ ಆಗಿತ್ತು. ವಾಹನದ ಅನುಪಸ್ಥಿತಿಯಲ್ಲಿ ದುಃಖತಪ್ತ ತಂದೆಗೆ ಸಹಾಯ ಮಾಡಲು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕಾಗಿತ್ತು. ಮೇಲಾಗಿ, ಶವ ವಾಹನವು ಬರುವವರೆಗೆ ಕಾಯುವಂತೆ ತಂದೆಯ ಮನವೊಲಿಸುವ ಪ್ರಯತ್ನ ಮಾಡಬೇಕಿತ್ತು ಎಂದಿದ್ದಾರೆ. ಸದ್ಯ ಓರ್ವ ಡಾಕ್ಟರ್​ನನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಮತ್ತು ನಿರ್ಲಕ್ಷ್ಯದ ಬಗ್ಗೆ ಸ್ಪಷ್ಟೀಕರಣಕ್ಕಾಗಿ CMHO ಮುಂದೆ ದೈಹಿಕವಾಗಿ ಹಾಜರಾಗುವಂತೆ ಕೇಳಲಾಗಿದೆ. ಜಿಲ್ಲೆಯಲ್ಲಿ ಐದು ಶವ ವಾಹನಗಳಿದ್ದು ಅವುಗಳಲ್ಲಿ ಮೂರು ವೈದ್ಯಕೀಯ ಕಾಲೇಜಿನಲ್ಲಿವೆ ಎನ್ನಲಾಗುತ್ತಿದೆ.
ಇದನ್ನೂ ಓದಿ:

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ