AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post; ಮಗಳ ತಲೆಯ ಮೇಲಿನ ಹೊಲಿಗೆಯ ಆಕಾರದಲ್ಲಿ ಹೇರ್​ಕಟ್​ ಮಾಡಿಸಿಕೊಂಡ ತಂದೆ

ಪುಟ್ಟ ಮಗಳು ಮೆದುಳು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಕಾರಣ ತಲೆಯ ಮೇಲೆ ಹೊಲಿಗೆ ಹಾಕಿದ್ದರು. ಅದೇ ರೀತಿ ತಂದೆಯೂ ಹೇರ್​ ಕಟ್​ ಮಾಡಿಸಿಕೊಂಡು ಮಗಳಿಗೆ ಮುಜುಗರ ಉಂಟಾಗಬಾರದು ಎಂಬ ಪ್ರಯತ್ನ ಮಾಡಿದ್ದಾರೆ.

Viral Post; ಮಗಳ ತಲೆಯ ಮೇಲಿನ ಹೊಲಿಗೆಯ ಆಕಾರದಲ್ಲಿ ಹೇರ್​ಕಟ್​ ಮಾಡಿಸಿಕೊಂಡ ತಂದೆ
ತಂದೆ ಮಗಳು
TV9 Web
| Edited By: |

Updated on:Jan 27, 2022 | 11:08 AM

Share

ತಂದೆ (Father) ಮಗಳ(Daughter) ಬಾಂಧವ್ಯ ಎಂದಿಗೂ ಪದಗಳಿಗೂ ನಿಲುಕದ್ದು. ಜಗತ್ತಿನಲ್ಲಿ ಕಲ್ಮಶವಿಲ್ಲದ ಅನುಬಂಧ. ಮಗಳ ಸಂತೋಷಕ್ಕಾಗಿ, ಆಕೆಯ ಒಳಿತಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ ಜೀವ. ಯಾವ ಕೆಲಸಕ್ಕೂ ಹಿಂಜರಿಯದೆ ಮಗಳಿಗಾಗಿ ಸರ್ವಸ್ವವನ್ನೂ ಮುಡಿಪಿಡುವ ವ್ಯಕ್ತಿ ಎಂದರೆ ಅದು ತಂದೆ ಮಾತ್ರ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ತಂದೆ ಮಗಳ ಅನುಬಂಧ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪುಟ್ಟ ಮಗಳು ಮೆದುಳು ಶಸ್ತ್ರ ಚಿಕಿತ್ಸೆ ( Brain Surgery) ಮಾಡಿಸಿಕೊಂಡ ಕಾರಣ ತಲೆಯ ಮೇಲೆ ಹೊಲಿಗೆ ಹಾಕಿದ್ದರು. ಅದೇ ರೀತಿ ತಂದೆಯೂ ಹೇರ್​ ಕಟ್​ ಮಾಡಿಸಿಕೊಂಡು ಮಗಳಿಗೆ ಮುಜುಗರ ಉಂಟಾಗಬಾರದು ಎಂಬ ಪ್ರಯತ್ನ ಮಾಡಿದ್ದಾರೆ. ಇದರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ

Figen ಎನ್ನುವ ಟ್ವಿಟರ್​ ಬಳಕೆದಾರರು ತಂದೆ ಮಗಳ ಪೋಟೋವನ್ನು ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಪುಟ್ಟ ಬಾಲಕಿಯ ತಲೆಯ ಮೇಲೆ ಶಸ್ತ್ರ ಚಿಕಿತ್ಸೆ ಮಾಡಿದ ಮೇಲೆ ಹೊಲಿಗೆ ಹಾಕಿರುವುದನ್ನು ಕಾಣಬಹುದು. ಅದೇ ರೀತಿ ಆಕೆಯ ತಂದೆ ಕೂಡ ಮಗಳ ತಲೆಗೆ ಹೊಲಿಗೆ ಹಾಕಿದ ರೀತಿಯಲ್ಲಿಯೇ ಹೇರ್​ ಕಟ್​ ಮಾಡಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡ ಬಳಿಕ 7 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ. ಸಾವಿರಾರು ರೀ ಶೇರ್​ ಕೂಡ ಆಗಿದೆ. ಫೋಟೋ ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಂದೆ ಮಗಳ ಬಾಂಧವ್ಯ ಎಲ್ಲದಕ್ಕಿಂತ ದೊಡ್ಡದು ಎಂದು ಕಾಮೆಂಟ್​ ಮಾಡಿದ್ದಾರೆ. ಪುಟ್ಟ ಮಗು ಆರೋಗ್ಯ ಸಮಸ್ಯೆಯಿಂದ ಬೇಗ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ;

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

Published On - 9:49 am, Thu, 27 January 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!