AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ

ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ಅಪ್ಪನೇ ಪ್ರಪಂಚವಾಗಿರುತ್ತಾನೆ. ಮಗಳು ತನ್ನ ಖುಷಿಯ ಘಳಿಗೆಯಲ್ಲಿ ತಂದೆ ಜತೆಗೆ ಇರಬೇಕು ಎಂದು ಬಯಸುವುದು ಸಹಜ. ಆದರೆ ಇಲ್ಲೊಬ್ಬಳು ಮಗಳು ಅಗಲಿದ ತಂದೆಯ ಮಾತು ಹಾಗೂ ಆಗಮನವನ್ನು ನೆನೆದು ಕಣ್ಣೀರು ಹಾಕಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಮಗಳನ್ನು ಆಶೀರ್ವದಿಸಲು ಚಿಟ್ಟೆಯ ರೂಪದಲ್ಲಿ ಬಂದ ತಂದೆ, ಮುಂದೇನಾಯ್ತು ನೋಡಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Feb 11, 2026 | 11:14 AM

Share

ತಾಯಿಯು ತನ್ನ ಮಗುವನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಅಪ್ಪ ಅಂದ್ರೆನೇ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ತಂದೆ ಇಲ್ಲದ ಮಗಳು ತನ್ನ ಮದುವೆಯ ದಿನ ಅಪ್ಪನು ಹೇಳಿದ ಮಾತಿನಂತೆ ನಡೆದದ್ದನ್ನು ಕಂಡು ಭಾವುಕಳಾಗಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಿಮ್ಮನ್ನು ಹಾರೈಸಲು ಬಂದಿದ್ದಾರೆ ಎಂದು ಕಾಮೆಂಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಸೈನ್ಸ್ ಗರ್ಲ್’ (@sciencegirl) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್‌ಗೆ ‘ಪ್ರೀತಿ ಎಂಬುದು ಕಣ್ಣಿಗೆ ಕಾಣದ ರೂಪದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಶೀರ್ಷಿಕೆ ನೀಡಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ ಹೊಸದಾಗಿ ಮದುವೆಯಾದ ಜೋಡಿ ವೇದಿಕೆಯ ಮೇಲೆ ನಿಂತಿರುವುದನ್ನು ಕಾಣಬಹುದು. ಹಾರಿಬಂದ ಚಿಟ್ಟೆಯೊಂದು ವಧುವಿನ ಸುತ್ತಲೂ ಸುಳಿದು, ಆಕೆಯ ಕೈಯಲ್ಲಿದ್ದ ಹೂವಿನ ಬೊಕ್ಕೆಯ ಮೇಲೆ ಕುಳಿತಿದೆ.. ಆ ಬಳಿಕ ತಲೆಯ ಮೇಲೆ ಧರಿಸಿದ್ದ ದುಪಟ್ಟಾದ ಮೇಲೆ ಕುಳಿತು ಆಶೀರ್ವಾದ ಮಾಡಿದ್ದಂತೆ ಕಾಣಿಸುತ್ತಿದೆ. ಇದೇ ವೇಳೆ ಚಿಟ್ಟೆಯ ರೂಪದಲ್ಲಿ ತಂದೆ ಬಂದಿದ್ದಾರೆ ಎಂದು ನೆನೆದು ವಧು ಭಾವುಕಳಾಗಿದ್ದಾಳೆ. ಆಕೆಯ ಪತಿಯೂ ಚಿಟ್ಟೆಯನ್ನು ಓಡಿಸುತ್ತಿರುವ ದೃಶ್ಯವನ್ನು ಕಾಣಬಹುದು

ಇದನ್ನೂ ಓದಿ: ಮಗಳ ಭವಿಷ್ಯಕ್ಕಾಗಿ ತಂದೆಯ ಹೋರಾಟ; ತನ್ನ ಆಟೋದಲ್ಲಿ ಮಗಳನ್ನು ಮಲಗಿಸಿ ಆಟೋ ಓಡಿಸುವ ವ್ಯಕ್ತಿ

ಈ ವಿಡಿಯೋ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದ್ದು, ಒಬ್ಬ ಬಳಕೆದಾರ, ದೈಹಿಕವಾಗಿ ಅಪ್ಪ ಇಲ್ಲದಿದ್ದರೂ ಮಾನಸಿಕವಾಗಿ ಅಪ್ಪ ಜೀವಂತ ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಪ್ಪನ ಆಗಮನ ಮಗಳಿಗೆ ಎಷ್ಟು ಖುಷಿ ತಂದಿದ್ದೆ ಎನ್ನುವುದನ್ನು ಆಕೆಯ ಕಣ್ಣೀರೇ ಹೇಳುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅಪ್ಪನ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್