AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್​ ಯುದ್ಧ: ದೇಶದ ಪರವಾಗಿ ನಿಂತು ಮಗಳಿಗೆ ಕಣ್ಣೀರಿನ ವಿದಾಯ ಹೇಳಿದ ತಂದೆ: ವಿಡಿಯೋ ವೈರಲ್​

ತಂದೆಯೊಬ್ಬ ತನ್ನ ಮಗಳನ್ನು ಸುರಕ್ಷಿತ ಜಾಗಕ್ಕೆ ಕಳುಹಿಸಿ ತಾನು  ದೇಶಕ್ಕಾಗಿ ಯುದ್ಧದಲ್ಲಿ ತೊಡಗಿಗೊಳ್ಳಲು ತಯಾರಿ ನಡೆಸಿದ್ದಾರೆ. ಮಗಳಿಗೆ ಬಿಳಿ ಟೋಪಿ ತೊಡಿಸಿ ಪ್ರೀತಿಯಿಂದ, ಆತಂಕದಿಂದಲೇ ಕಳುಹಿಸಿಕೊಡುತ್ತಿರುವ ವಿಡಿಯೋ ವೈರಲ್​ ಆಗಿದೆ.

ರಷ್ಯಾ-ಉಕ್ರೇನ್​ ಯುದ್ಧ: ದೇಶದ ಪರವಾಗಿ ನಿಂತು ಮಗಳಿಗೆ ಕಣ್ಣೀರಿನ ವಿದಾಯ ಹೇಳಿದ ತಂದೆ: ವಿಡಿಯೋ ವೈರಲ್​
ತಂದೆ-ಮಗಳು
TV9 Web
| Updated By: Pavitra Bhat Jigalemane|

Updated on:Feb 25, 2022 | 9:49 AM

Share

ಉಕ್ರೇನ್ (Ukraine) ರಷ್ಯಾ (Russia) ನಡುವೆ ಯುದ್ಧ ಆರಂಭವಾಗಿದೆ. ಈಗಾಗಲೆ ರಷ್ಯಾಕ್ಕೆ ಸಮವಾಗಿ ದಾಳಿ ನೀಡುತ್ತಿರುವ ಉಕ್ರೇನ್​ನ  ನಾಗರಿಕರ ಪರಿಸ್ಥಿತಿ ಹದಗೆಟ್ಟಿದೆ. ಜನ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಬಾಂಬ್​, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್​ ಗ್ರೌಂಡ್​ನಲ್ಲಿ ಜನ ಅಡಗಿಕುಳಿತುಕೊಳ್ಳುತ್ತಿದ್ದಾರೆ.  ಉಕ್ರೇನ್​ನಲ್ಲಿ ಈಗಾಗಲೇ 137 ಜನರ ದುರ್ಮರಣವಾಗಿದೆ. ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ ಛಿದ್ರ ಛಿದ್ರವಾಗಿ ಸಾವನ್ನಪ್ಪುತ್ತಿದ್ದಾರೆ. ಈ ರೀತಿಯ ಭಯ ಹುಟ್ಟಿಸುವ ದೃಶ್ಯಗಳು ಉಕ್ರೇನ್​ನಲ್ಲಿ ಕಾಣಿಸಿಕೊಳ್ಳುತ್ತಿವೆ. ಈ ನಡುವೆ ಜೀವ ಉಳಸಿಕೊಳ್ಳಲು ಮಗಳನ್ನು ಸುರಕ್ಷಿತ ತಾಣಕ್ಕೆ ಕಳುಹಿಸುವ ತಂದೆ ಮಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕ್ಷಣ ಕ್ಷಣಕ್ಕೂ ಬಿಗಡಾಯಿಸುತ್ತಿರುವ ಉಕ್ರೇನ್​ ಪರಿಸ್ಥತಿಯಿಂದ ನಾಗರಿಕರಿಗೂ ಶಸ್ತ್ರಾಸ್ತ್ರ ನೀಡಿ ಯುದ್ಧಕ್ಕೆ ಕಳುಹಿಸಲಾಗುತ್ತಿದೆ. ಈ ಸಂದರ್ಭದ ಕೆಲವು ದೃಶ್ಯಗಳು ನಿಜಕ್ಕೂ ಮನಕರಗುವಂತಿದೆ.

ಸದ್ಯ ವೈರಲ್​ ಆದ ವಿಡಿಯೋದಲ್ಲಿ ತಂದೆಯೊಬ್ಬ ತನ್ನ ಮಗಳನ್ನು ಸುರಕ್ಷಿತ ಜಾಗಕ್ಕೆ ಕಳುಹಿಸಿ ತಾನು  ದೇಶಕ್ಕಾಗಿ ಯುದ್ಧದಲ್ಲಿ ತೊಡಗಿಗೊಳ್ಳಲು ತಯಾರಿ ನಡೆಸಿದ್ದಾರೆ. ಮಗಳಿಗೆ ಬಿಳಿ ಟೋಪಿ ತೊಡಿಸಿ ಪ್ರೀತಿಯಿಂದ, ಕಣ್ಣೀರಿಡುತ್ತಾ ಕಳುಹಿಸಿಕೊಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಈ ಭಾವುಕ ವಿಡಿಯೋ ನೋಡಿ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಉಕ್ರೇನ್​ ಸ್ಥಿತಿ ಕಂಡು ಮರುಗಿದ್ದಾರೆ.

ವರದಿಯ ಪ್ರಕಾರ ಯುದ್ಧದಿಂದ ತತ್ತರಿಸಿದ ಉಕ್ರೇನ್​ ಜನತೆ ಹಣ, ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಉಕ್ರೇನ್​ ಸರ್ಕಾರ ಕೂಡ ದೇಶದ ಪರವಾಗಿ ಹೋರಾಡಲು ಸಿದ್ಧರಿರುವ ನಾಗರಿಕರಿಗೆ ಶಸ್ತ್ರಾಸ್ತ್ರ ನೀಡುವುದಾಗಿ ಹೇಳಿದೆ. ಹೀಗಾಗಿ ಉಕ್ರೇನ್​ನ ನೂರಾರು ನಾಗರಿಕರು ದೇಶಕ್ಕಾಗಿ ಮಡದಿ, ಮಕ್ಕಳು, ಕುಟುಂಬವನ್ನು ತೊರೆದು ಯುದ್ಧಕ್ಕೆ ತಯಾರಾಗಿದ್ದಾರೆ.

ಇದನ್ನೂ ಓದಿ:

Ukraine Crisis: ರಷ್ಯಾ ನಡೆಸಿದ ದಾಳಿಯಲ್ಲಿ ಉಕ್ರೇನ್​ನ 137 ಜನರ ಮರಣ; ರಷ್ಯಾ- ಉಕ್ರೇನ್ ಬೆಳವಣಿಗೆಯ ಮುಖ್ಯಾಂಶಗಳು ಇಲ್ಲಿವೆ

Published On - 9:45 am, Fri, 25 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?