AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕ ಗಂಡಂದಿರ ಕಾಟ ತಾಳಲಾರದೆ ಮನೆ ಬಿಟ್ಟು ಪರಸ್ಪರ ಮದುವೆಯಾದ ಇಬ್ಬರು ಮಹಿಳೆಯರು!

ಮದ್ಯವ್ಯಸನಿಗಳಾಗಿದ್ದ ಗಂಡಂದಿರು ಮತ್ತು ಕೌಟುಂಬಿಕ ಹಿಂಸಾಚಾರದಿಂದ ಬೇಸತ್ತ ಇಬ್ಬರು ಮಹಿಳೆಯರು ತಾವೇ ಪರಸ್ಪರ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ದೌರ್ಜನ್ಯಕ್ಕೊಳಗಾದ ಗಂಡಂದಿರಿಂದ ಬೇಸತ್ತು, ಗೋರಖ್‌ಪುರದಲ್ಲಿ ಇಬ್ಬರು ನೊಂದ ಮಹಿಳೆಯರು ಮದುವೆಯಾಗಿದ್ದಾರೆ. ತನ್ನ ಕುಡುಕ ಪತಿಯರು ಪ್ರತಿದಿನ ತಮ್ಮ ಮೇಲೆ ಹಲ್ಲೆ ಮಾಡುತ್ತಿದ್ದರು. ಆ ಕಾಟ ತಾಳಲಾರದೆ ತವರಿಗೆ ಹೋಗಿದ್ದೆವು ಎಂದು ಅವರು ಹೇಳಿಕೊಂಡಿದ್ದಾರೆ.

ಕುಡುಕ ಗಂಡಂದಿರ ಕಾಟ ತಾಳಲಾರದೆ ಮನೆ ಬಿಟ್ಟು ಪರಸ್ಪರ ಮದುವೆಯಾದ ಇಬ್ಬರು ಮಹಿಳೆಯರು!
Gorakhpur Women
ಸುಷ್ಮಾ ಚಕ್ರೆ
|

Updated on: Jan 25, 2025 | 7:17 PM

Share

ಗೋರಖ್​ಪುರ: ಉತ್ತರ ಪ್ರದೇಶದ ಗೋರಖ್‌ಪುರದ ಇಬ್ಬರು ಮಹಿಳೆಯರು ತಮ್ಮ ಕುಡುಕ ಗಂಡಂದಿರ ದೌರ್ಜನ್ಯದಿಂದ ಬೇಸತ್ತು, ಮನೆ ಬಿಟ್ಟು ಬಂದಿದ್ದರು. ಇದೀಗ ಶಿವನ ದೇವಾಲಯದಲ್ಲಿ ಪರಸ್ಪರ ವಿವಾಹವಾಗಿದ್ದಾರೆ. ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದು, 6 ವರ್ಷಗಳ ಕಾಲ ಸ್ನೇಹಿತರಾಗಿದ್ದರು. ಗಂಡಂದಿರ ಹಿಂಸೆಯ ವಿಚಾರವನ್ನು ಹೇಳಿಕೊಳ್ಳುತ್ತಿದ್ದ ಅವರು ತಾವೇ ಇಬ್ಬರು ಯಾಕೆ ಮದುವೆಯಾಗಬಾರದು ಎಂದು ಚರ್ಚಿಸಿ, ಈ ನಿರ್ಧಾರಕ್ಕೆ ಬಂದಿದ್ದಾರೆ.

ತಮ್ಮ ಸಂಗಾತಿಗಳಿಂದ ಬೇಸತ್ತ ಉತ್ತರ ಪ್ರದೇಶದ ಗೋರಖ್‌ಪುರದ ಇಬ್ಬರು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಪರಸ್ಪರ ವಿವಾಹವಾಗಿರುವುದು ಇದೀಗ ಚರ್ಚೆಯ ಸಂಗತಿಯಾಗಿದೆ. ಕವಿತಾ ಮತ್ತು ಗುಂಜಾ ಅಲಿಯಾಸ್ ಬಬ್ಲು ಗುರುವಾರ ಸಂಜೆ ದಿಯೋರಿಯಾದ ಚೋಟಿ ಕಾಶಿ ಎಂದು ಪ್ರಸಿದ್ಧವಾದ ಶಿವನ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಅವರು ಮೊದಲು ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಸಂಪರ್ಕ ಹೋದಮಿದ್ದು, ಬೇಗನೆ ಸ್ನೇಹಿತರಾದರು. ಮದುವೆಯಾಗಲು ನಿರ್ಧರಿಸುವ ಮೊದಲು ಅವರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಇಬ್ಬರೂ ಮಹಿಳೆಯರು ತಮ್ಮ ಗಂಡಂದಿರಿಂದ ಕೌಟುಂಬಿಕ ಹಿಂಸೆಯನ್ನು ಅನುಭವಿಸಿದ್ದರು.

ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು ಮಾಡಿದ್ದಲ್ಲದೆ ಪ್ರಶ್ನಿಸಿದ ಶಿಕ್ಷಕನ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ; ಆಘಾತಕಾರಿ ವಿಡಿಯೋ ವೈರಲ್‌

ಒಬ್ಬ ಮಹಿಳೆಗೆ ಆಕೆಯ ಪತಿ ಕುಡಿದು ಬಂದು ಪ್ರತಿದಿನ ಹಲ್ಲೆ ನಡೆಸುತ್ತಿದ್ದ. ಆಕೆಗೆ ನಾಲ್ಕು ಮಕ್ಕಳಿದ್ದಾರೆ. ಇನ್ನೊಬ್ಬ ಮಹಿಳೆ ತನ್ನ ಪತಿ ಕೂಡ ಅತಿಯಾಗಿ ಮದ್ಯಪಾನ ಮಾಡುತ್ತಿದ್ದ , ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ