AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರಿವಾಳಗಳಿಗೆ ಆಹಾರ ನೀಡಿದಕ್ಕೆ 97 ವರ್ಷದ ವೃದ್ಧೆಯ ಮೇಲೆ 2.5 ಲಕ್ಷ ರೂ ದಂಡ

ಸಾಕಷ್ಟು ಪಾರಿವಾಳ, ಬೆಳ್ಳಕ್ಕಿಗಳು ಬರುತ್ತಿದ್ದು, ಇಡೀ ಪ್ರದೇಶ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ದೂರಿದ್ದಾರೆ. ಪ್ರಾರಂಭದಲ್ಲಿ ನಗರಸಭೆ ಈ ವೃದ್ಧೆಗೆ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು, ಆದರೆ ಈ ನೋಟಿಸನ್ನು ನಿರ್ಲಕ್ಷ್ಯಿಸಿದ್ದರಿಂದ ಇತ್ತೀಚಿಗಷ್ಟೇ 2,500 ಪೌಂಡ್‌ಗಳಿಗೆ ಅಂದರೆ 2.5 ಲಕ್ಷ ರೂ.ದಂಡ ವಿಧಿಸಿದೆ. ಇದಲ್ಲದೆ ಮುಂದೆ ಹೀಗೆ ಮುಂದುವರಿದರೆ ಸ್ವಂತ ಮನೆಯಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಪಾರಿವಾಳಗಳಿಗೆ ಆಹಾರ ನೀಡಿದಕ್ಕೆ 97 ವರ್ಷದ  ವೃದ್ಧೆಯ ಮೇಲೆ 2.5 ಲಕ್ಷ ರೂ ದಂಡ
Feeding pigeons Image Credit source: Pinterest
ಅಕ್ಷತಾ ವರ್ಕಾಡಿ
|

Updated on:Apr 02, 2024 | 2:17 PM

Share

ಯುನೈಟೆಡ್ ಕಿಂಗ್‌ಡಮ್​​​ನ  97 ವರ್ಷದ ವೃದ್ಧೆಯೊಬ್ಬರು ಪ್ರತೀ ದಿನ ತನ್ನ ಮನೆಯ ಅಂಗಳದಲ್ಲಿ ಪಾರಿವಾಳಗಳಿಗೆ ಆಹಾರ ನೀಡುತ್ತಿರುವುದನ್ನು ಕಂಡು ಸ್ಥಳೀಯರು ನಗರಸಭೆಗೆ ದೂರು ನೀಡಿದ್ದಾರೆ. ಪರಿಣಾಮ ಪಾರಿವಾಳಗಳಿಗೆ ಆಹಾರ ನೀಡದಂತೆ ನೋಟಿಸ್​​ ಬಂದಿದೆ. 2.5 ಲಕ್ಷ ರೂ. ದಂಡ, ಅಷ್ಟೇ ಅಲ್ಲದೆ, ಮುಂದೆ ಹೀಗೆ ಮುಂದುವರಿದರೆ ಸ್ವಂತ ಮನೆಯಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆ ಕೂಡ ನೀಡಲಾಗಿದೆ.

ಮಿರರ್ ವರದಿಯ ಪ್ರಕಾರ, ಸಂಗೀತ ಶಿಕ್ಷಕರಾಗಿರುವ ಅನ್ನೆ ಸಿಗೋ(97) ಅವರಿಗೆ ಪಕ್ಷಿಗಳೆಂದರೆ ತುಂಬಾ ಇಷ್ಟ. ಅವರು ತಮ್ಮ ಮನೆಯಲ್ಲಿ ಕೆಲವು ಪಕ್ಷಿಗಳನ್ನು ಸಹ ಸಾಕಿದ್ದಾರೆ. ಆದರೆ ಕಳೆದ ಹಲವು ತಿಂಗಳುಗಳಿಂದ ಇವರ ಅಂಗಳಕ್ಕೆ ಗುಬ್ಬಚ್ಚಿ, ಪಾರಿವಾಳ ಬರಲಾರಂಭಿಸಿದ್ದವು. ಅನ್ನಿ ಅವುಗಳಿಗೆ ಕೂಡ ಆಹಾರ ನೀಡುತ್ತಿದ್ದರು. ಇದರಿಂದಾಗಿ ಅನೇಕ ಪಕ್ಷಿಗಳು ಪ್ರತೀ ದಿನ ಮನೆಗೆ ಬರಲಾರಂಭಿಸಿದವು. ಇದರಿಂದಾಗಿ ನಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶ ಕೊಳಕಾಗಿದೆ ಎಂದು ಸ್ಥಳೀಯರು ಅನ್ನೆ ಮೇಲೆ ನಗರಸಭೆಯಲ್ಲಿ ದೂರು ನೀಡಿದ್ದಾರೆ.

ಕಾನೂನು ಕ್ರಮದ ಎಚ್ಚರಿಕೆ:

ಆಹಾರ ಧಾನ್ಯ ವಿತರಣೆಯಿಂದ ಸಾಕಷ್ಟು ಪಾರಿವಾಳ, ಬೆಳ್ಳಕ್ಕಿಗಳು ಬರುತ್ತಿದ್ದು, ಇಡೀ ಪ್ರದೇಶ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ದೂರಿದ್ದಾರೆ. ಪ್ರಾರಂಭದಲ್ಲಿ ನಗರಸಭೆ ಈ ವೃದ್ಧೆಗೆ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು, ಆದರೆ ಈ ನೋಟಿಸನ್ನು ನಿರ್ಲಕ್ಷ್ಯಿಸಿದ್ದರಿಂದ ಇತ್ತೀಚಿಗಷ್ಟೇ 2,500 ಪೌಂಡ್‌ಗಳಿಗೆ ಅಂದರೆ 2.5 ಲಕ್ಷ ರೂ.ದಂಡ ವಿಧಿಸಿದೆ. ಇದಲ್ಲದೆ ಮುಂದೆ ಹೀಗೆ ಮುಂದುವರಿದರೆ ಸ್ವಂತ ಮನೆಯಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಪಾರಿವಾಳಗಳಿಗೆ ಆಹಾರ ನೀಡುವುದು ಹಲವು ದೇಶಗಳಲ್ಲಿ ಅಪರಾಧ:

ಇಂಗ್ಲೆಂಡ್, ಥೈಲ್ಯಾಂಡ್, ಕೊಲಂಬಿಯಾ, ಕೆನಡಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದು ಅಪರಾಧವಾಗಿದೆ. ಹೆಚ್ಚು ಪಾರಿವಾಳಗಳು ಬರುವುದರಿಂದ ಪ್ರದೇಶಗಳಲ್ಲಿ ಕೊಳಕು ಉಂಟಾಗುತ್ತದೆ. ಇದರಿಂದಾಗಿ ಸೋಂಕು ಹರಡುವ ಅಪಾಯವಿದೆ. ಇದು ಸ್ವಚ್ಛತೆಯ ಮೇಲೂ ಪರಿಣಾಮ ಬೀರುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Tue, 2 April 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?