AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರಿವಾಳಗಳಿಗೆ ಆಹಾರ ನೀಡಿದಕ್ಕೆ 97 ವರ್ಷದ ವೃದ್ಧೆಯ ಮೇಲೆ 2.5 ಲಕ್ಷ ರೂ ದಂಡ

ಸಾಕಷ್ಟು ಪಾರಿವಾಳ, ಬೆಳ್ಳಕ್ಕಿಗಳು ಬರುತ್ತಿದ್ದು, ಇಡೀ ಪ್ರದೇಶ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ದೂರಿದ್ದಾರೆ. ಪ್ರಾರಂಭದಲ್ಲಿ ನಗರಸಭೆ ಈ ವೃದ್ಧೆಗೆ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು, ಆದರೆ ಈ ನೋಟಿಸನ್ನು ನಿರ್ಲಕ್ಷ್ಯಿಸಿದ್ದರಿಂದ ಇತ್ತೀಚಿಗಷ್ಟೇ 2,500 ಪೌಂಡ್‌ಗಳಿಗೆ ಅಂದರೆ 2.5 ಲಕ್ಷ ರೂ.ದಂಡ ವಿಧಿಸಿದೆ. ಇದಲ್ಲದೆ ಮುಂದೆ ಹೀಗೆ ಮುಂದುವರಿದರೆ ಸ್ವಂತ ಮನೆಯಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಪಾರಿವಾಳಗಳಿಗೆ ಆಹಾರ ನೀಡಿದಕ್ಕೆ 97 ವರ್ಷದ  ವೃದ್ಧೆಯ ಮೇಲೆ 2.5 ಲಕ್ಷ ರೂ ದಂಡ
Feeding pigeons Image Credit source: Pinterest
ಅಕ್ಷತಾ ವರ್ಕಾಡಿ
|

Updated on:Apr 02, 2024 | 2:17 PM

Share

ಯುನೈಟೆಡ್ ಕಿಂಗ್‌ಡಮ್​​​ನ  97 ವರ್ಷದ ವೃದ್ಧೆಯೊಬ್ಬರು ಪ್ರತೀ ದಿನ ತನ್ನ ಮನೆಯ ಅಂಗಳದಲ್ಲಿ ಪಾರಿವಾಳಗಳಿಗೆ ಆಹಾರ ನೀಡುತ್ತಿರುವುದನ್ನು ಕಂಡು ಸ್ಥಳೀಯರು ನಗರಸಭೆಗೆ ದೂರು ನೀಡಿದ್ದಾರೆ. ಪರಿಣಾಮ ಪಾರಿವಾಳಗಳಿಗೆ ಆಹಾರ ನೀಡದಂತೆ ನೋಟಿಸ್​​ ಬಂದಿದೆ. 2.5 ಲಕ್ಷ ರೂ. ದಂಡ, ಅಷ್ಟೇ ಅಲ್ಲದೆ, ಮುಂದೆ ಹೀಗೆ ಮುಂದುವರಿದರೆ ಸ್ವಂತ ಮನೆಯಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆ ಕೂಡ ನೀಡಲಾಗಿದೆ.

ಮಿರರ್ ವರದಿಯ ಪ್ರಕಾರ, ಸಂಗೀತ ಶಿಕ್ಷಕರಾಗಿರುವ ಅನ್ನೆ ಸಿಗೋ(97) ಅವರಿಗೆ ಪಕ್ಷಿಗಳೆಂದರೆ ತುಂಬಾ ಇಷ್ಟ. ಅವರು ತಮ್ಮ ಮನೆಯಲ್ಲಿ ಕೆಲವು ಪಕ್ಷಿಗಳನ್ನು ಸಹ ಸಾಕಿದ್ದಾರೆ. ಆದರೆ ಕಳೆದ ಹಲವು ತಿಂಗಳುಗಳಿಂದ ಇವರ ಅಂಗಳಕ್ಕೆ ಗುಬ್ಬಚ್ಚಿ, ಪಾರಿವಾಳ ಬರಲಾರಂಭಿಸಿದ್ದವು. ಅನ್ನಿ ಅವುಗಳಿಗೆ ಕೂಡ ಆಹಾರ ನೀಡುತ್ತಿದ್ದರು. ಇದರಿಂದಾಗಿ ಅನೇಕ ಪಕ್ಷಿಗಳು ಪ್ರತೀ ದಿನ ಮನೆಗೆ ಬರಲಾರಂಭಿಸಿದವು. ಇದರಿಂದಾಗಿ ನಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶ ಕೊಳಕಾಗಿದೆ ಎಂದು ಸ್ಥಳೀಯರು ಅನ್ನೆ ಮೇಲೆ ನಗರಸಭೆಯಲ್ಲಿ ದೂರು ನೀಡಿದ್ದಾರೆ.

ಕಾನೂನು ಕ್ರಮದ ಎಚ್ಚರಿಕೆ:

ಆಹಾರ ಧಾನ್ಯ ವಿತರಣೆಯಿಂದ ಸಾಕಷ್ಟು ಪಾರಿವಾಳ, ಬೆಳ್ಳಕ್ಕಿಗಳು ಬರುತ್ತಿದ್ದು, ಇಡೀ ಪ್ರದೇಶ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ದೂರಿದ್ದಾರೆ. ಪ್ರಾರಂಭದಲ್ಲಿ ನಗರಸಭೆ ಈ ವೃದ್ಧೆಗೆ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು, ಆದರೆ ಈ ನೋಟಿಸನ್ನು ನಿರ್ಲಕ್ಷ್ಯಿಸಿದ್ದರಿಂದ ಇತ್ತೀಚಿಗಷ್ಟೇ 2,500 ಪೌಂಡ್‌ಗಳಿಗೆ ಅಂದರೆ 2.5 ಲಕ್ಷ ರೂ.ದಂಡ ವಿಧಿಸಿದೆ. ಇದಲ್ಲದೆ ಮುಂದೆ ಹೀಗೆ ಮುಂದುವರಿದರೆ ಸ್ವಂತ ಮನೆಯಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಪಾರಿವಾಳಗಳಿಗೆ ಆಹಾರ ನೀಡುವುದು ಹಲವು ದೇಶಗಳಲ್ಲಿ ಅಪರಾಧ:

ಇಂಗ್ಲೆಂಡ್, ಥೈಲ್ಯಾಂಡ್, ಕೊಲಂಬಿಯಾ, ಕೆನಡಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದು ಅಪರಾಧವಾಗಿದೆ. ಹೆಚ್ಚು ಪಾರಿವಾಳಗಳು ಬರುವುದರಿಂದ ಪ್ರದೇಶಗಳಲ್ಲಿ ಕೊಳಕು ಉಂಟಾಗುತ್ತದೆ. ಇದರಿಂದಾಗಿ ಸೋಂಕು ಹರಡುವ ಅಪಾಯವಿದೆ. ಇದು ಸ್ವಚ್ಛತೆಯ ಮೇಲೂ ಪರಿಣಾಮ ಬೀರುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Tue, 2 April 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ