AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅನಾಥ ಕಂದಮ್ಮನ ಹಸಿವು ನೀಗಿಸಿದ ಮಹಿಳಾ ಪೊಲೀಸ್ ಪೇದೆ, ಇದೇ ನೋಡಿ ತಾಯಿ ಪ್ರೀತಿ

ಬುಲ್ಧಾನಾ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಪೊಲೀಸ್ ಪೇದೆಯೊಬ್ಬರು ಒಂದು ದಿನದ ಹಸಿದ ಅಪರಿಚಿತ ಅನಾಥ ಮಗುವಿಗೆ ಹಾಲುಣಿಸಿ ಹಸಿವು ನೀಗಿಸಿದ ಘಟನೆಯೊಂದು ಬುಲ್ಧಾನಾ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ಮಹಿಳಾ ಪೊಲೀಸ್ ಪೇದೆಯ ಹೆಸರು ಯೋಗಿತಾ ಶಿವಾಜಿ ದುಕ್ರೆ ಎನ್ನಲಾಗಿದ್ದು, ಇವರ ಈ ಕೆಲಸಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

Viral: ಅನಾಥ ಕಂದಮ್ಮನ ಹಸಿವು ನೀಗಿಸಿದ ಮಹಿಳಾ ಪೊಲೀಸ್ ಪೇದೆ, ಇದೇ ನೋಡಿ ತಾಯಿ ಪ್ರೀತಿ
ಪೊಲೀಸ್ ಪೇದೆ ಯೋಗಿತಾ ಶಿವಾಜಿ ದುಕ್ರೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 14, 2024 | 2:48 PM

ತಾಯಿಯ ಪ್ರೀತಿಯೇ ಹಾಗೆ, ಯಾರದ್ದೇ ಮಗು ಆಗಿರಲಿ, ಮಗುವು ಹಸಿವಿನಿಂದ ಬಳಲುತ್ತಿದೆ ಎಂದರೆ ತಾಯಿ ಕರುಳು ಸುಮ್ಮನೆ ಇರಲ್ಲ. ಅನಾಥ ಮಗುವು ಹಸಿವಿನಿಂದ ಅಳುವುದನ್ನು ಕಂಡು ಮಹಿಳಾ ಪೊಲೀಸ್ ಪೇದೆಯ ಹೃದಯವು ಮಿಡಿದಿದೆ. ಹೌದು, ಮಹಿಳಾ ಪೊಲೀಸ್ ಪೇದೆ ಯೋಗಿತಾ ಶಿವಾಜಿ ದುಕ್ರೆಯವರು ಹಸಿವಿನಿಂದ ಬಳಲುತ್ತಿದ್ದ ಮಗುವಿಗೆ ಹಾಲುಣಿಸಿದ್ದಾರೆ.

ಬುಲ್ಧಾನಾದ ಲೋನಾರ್‌ನಲ್ಲಿರುವ ಅನಾಥಾಶ್ರಮಕ್ಕೆ ಮಹಿಳೆಯೊಬ್ಬರು ಒಂದು ದಿನದ ಮಗುವಿನೊಂದಿಗೆ ಬಂದಿದ್ದರು. ಈ ಹೆಣ್ಣು ಮಗುವನ್ನು ಅನಾಥಶ್ರಮಕ್ಕೆ ಸೇರಿಸುವಂತೆ ಮಹಿಳೆಯು ವಿನಂತಿಸಿದ್ದಾಳೆ. ಆದರೆ ಮೊದಲು ಠಾಣೆಗೆ ತೆರಳಿ ದೂರು ನೀಡಿ, ಬಳಿಕ ಪೊಲೀಸರ ಸೂಚನೆಯಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಅನಾಥಾಶ್ರಮದ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ. ಆ ಬಳಿಕ ಮಹಿಳೆ ಬುಲ್ಧಾನಾ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆಯಲ್ಲಿ ನಾನು ಬೆಳಿಗ್ಗೆಯಿಂದ ಈ ಒಂದು ದಿನದ ಮಗುವಿನಿಂದ ಅಲೆದಾಡುತ್ತಿದ್ದೇನೆ ಎಂದು ಹೇಳಿದ್ದಾಳೆ.

ಆದರೆ ಆ ಮಗುವು ಹಸಿವಿನಿಂದ ಅಳುತ್ತಿದ್ದು, ಇದನ್ನು ಬುಲ್ಧಾನಾ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಪೇದೆ ಯೋಗಿತಾ ದುಕ್ರೆಯವರು ಮಗುವು ಅಳುವುದನ್ನು ಗಮನಿಸಿದ್ದಾರೆ. ಈ ವೇಳೆಯಲ್ಲಿ ಮಹಿಳಾ ಪೊಲೀಸ್ ಪೇದೆ ಯೋಗಿತಾ ದುಕ್ರೆಯವರಿಗೆ ತನ್ನ ಒಂದೂವರೆ ವರ್ಷದ ಮಗನ ನೆನಪಾಗಿದೆ. ಆ ತಕ್ಷಣವೇ ಎಲ್ಲರ ಅನುಮತಿ ಪಡೆದು ಹಸಿವಿನಿಂದ ಅಳುತ್ತಿರುವ ಮಗುವಿಗೆ ಹಾಲುಣಿಸಿ ಸಮಾಧಾನಪಡಿಸಿದ್ದಾರೆ.

ಇದನ್ನೂ ಓದಿ: ಭಿಕ್ಷೆ ಬೇಡುವ ಹುಡುಗಿಯ ಇಂಗ್ಲಿಷ್​​​ಗೆ ವಿದೇಶಿಗ ಫುಲ್ ಫಿದಾ, ವಿಡಿಯೋ ವೈರಲ್

ಮಗುವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಹೆಣ್ಣು ಮಗುವು ಆರೋಗ್ಯವಾಗಿದ್ದಾಳೆ. ತೂಕ ಕಡಿಮೆ ಇರುವ ಕಾರಣ ಮೂರು ವಾರಗಳ ಕಾಲ ಆಸ್ಪತ್ರೆಯಲ್ಲಿ ಇರಿಸಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಭಗವತ್ ಭೂಸಾರಿ ಮಾಹಿತಿ ನೀಡಿದ್ದಾರೆ. ಈ ಮಹಿಳಾ ಪೊಲೀಸ್ ಪೇದೆ ಯೋಗಿತಾ ದುಕ್ರೆಯವರ ಈ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ