AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅನಾಥ ಕಂದಮ್ಮನ ಹಸಿವು ನೀಗಿಸಿದ ಮಹಿಳಾ ಪೊಲೀಸ್ ಪೇದೆ, ಇದೇ ನೋಡಿ ತಾಯಿ ಪ್ರೀತಿ

ಬುಲ್ಧಾನಾ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಪೊಲೀಸ್ ಪೇದೆಯೊಬ್ಬರು ಒಂದು ದಿನದ ಹಸಿದ ಅಪರಿಚಿತ ಅನಾಥ ಮಗುವಿಗೆ ಹಾಲುಣಿಸಿ ಹಸಿವು ನೀಗಿಸಿದ ಘಟನೆಯೊಂದು ಬುಲ್ಧಾನಾ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ಮಹಿಳಾ ಪೊಲೀಸ್ ಪೇದೆಯ ಹೆಸರು ಯೋಗಿತಾ ಶಿವಾಜಿ ದುಕ್ರೆ ಎನ್ನಲಾಗಿದ್ದು, ಇವರ ಈ ಕೆಲಸಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

Viral: ಅನಾಥ ಕಂದಮ್ಮನ ಹಸಿವು ನೀಗಿಸಿದ ಮಹಿಳಾ ಪೊಲೀಸ್ ಪೇದೆ, ಇದೇ ನೋಡಿ ತಾಯಿ ಪ್ರೀತಿ
ಪೊಲೀಸ್ ಪೇದೆ ಯೋಗಿತಾ ಶಿವಾಜಿ ದುಕ್ರೆ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 14, 2024 | 2:48 PM

Share

ತಾಯಿಯ ಪ್ರೀತಿಯೇ ಹಾಗೆ, ಯಾರದ್ದೇ ಮಗು ಆಗಿರಲಿ, ಮಗುವು ಹಸಿವಿನಿಂದ ಬಳಲುತ್ತಿದೆ ಎಂದರೆ ತಾಯಿ ಕರುಳು ಸುಮ್ಮನೆ ಇರಲ್ಲ. ಅನಾಥ ಮಗುವು ಹಸಿವಿನಿಂದ ಅಳುವುದನ್ನು ಕಂಡು ಮಹಿಳಾ ಪೊಲೀಸ್ ಪೇದೆಯ ಹೃದಯವು ಮಿಡಿದಿದೆ. ಹೌದು, ಮಹಿಳಾ ಪೊಲೀಸ್ ಪೇದೆ ಯೋಗಿತಾ ಶಿವಾಜಿ ದುಕ್ರೆಯವರು ಹಸಿವಿನಿಂದ ಬಳಲುತ್ತಿದ್ದ ಮಗುವಿಗೆ ಹಾಲುಣಿಸಿದ್ದಾರೆ.

ಬುಲ್ಧಾನಾದ ಲೋನಾರ್‌ನಲ್ಲಿರುವ ಅನಾಥಾಶ್ರಮಕ್ಕೆ ಮಹಿಳೆಯೊಬ್ಬರು ಒಂದು ದಿನದ ಮಗುವಿನೊಂದಿಗೆ ಬಂದಿದ್ದರು. ಈ ಹೆಣ್ಣು ಮಗುವನ್ನು ಅನಾಥಶ್ರಮಕ್ಕೆ ಸೇರಿಸುವಂತೆ ಮಹಿಳೆಯು ವಿನಂತಿಸಿದ್ದಾಳೆ. ಆದರೆ ಮೊದಲು ಠಾಣೆಗೆ ತೆರಳಿ ದೂರು ನೀಡಿ, ಬಳಿಕ ಪೊಲೀಸರ ಸೂಚನೆಯಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಅನಾಥಾಶ್ರಮದ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ. ಆ ಬಳಿಕ ಮಹಿಳೆ ಬುಲ್ಧಾನಾ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆಯಲ್ಲಿ ನಾನು ಬೆಳಿಗ್ಗೆಯಿಂದ ಈ ಒಂದು ದಿನದ ಮಗುವಿನಿಂದ ಅಲೆದಾಡುತ್ತಿದ್ದೇನೆ ಎಂದು ಹೇಳಿದ್ದಾಳೆ.

ಆದರೆ ಆ ಮಗುವು ಹಸಿವಿನಿಂದ ಅಳುತ್ತಿದ್ದು, ಇದನ್ನು ಬುಲ್ಧಾನಾ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಪೇದೆ ಯೋಗಿತಾ ದುಕ್ರೆಯವರು ಮಗುವು ಅಳುವುದನ್ನು ಗಮನಿಸಿದ್ದಾರೆ. ಈ ವೇಳೆಯಲ್ಲಿ ಮಹಿಳಾ ಪೊಲೀಸ್ ಪೇದೆ ಯೋಗಿತಾ ದುಕ್ರೆಯವರಿಗೆ ತನ್ನ ಒಂದೂವರೆ ವರ್ಷದ ಮಗನ ನೆನಪಾಗಿದೆ. ಆ ತಕ್ಷಣವೇ ಎಲ್ಲರ ಅನುಮತಿ ಪಡೆದು ಹಸಿವಿನಿಂದ ಅಳುತ್ತಿರುವ ಮಗುವಿಗೆ ಹಾಲುಣಿಸಿ ಸಮಾಧಾನಪಡಿಸಿದ್ದಾರೆ.

ಇದನ್ನೂ ಓದಿ: ಭಿಕ್ಷೆ ಬೇಡುವ ಹುಡುಗಿಯ ಇಂಗ್ಲಿಷ್​​​ಗೆ ವಿದೇಶಿಗ ಫುಲ್ ಫಿದಾ, ವಿಡಿಯೋ ವೈರಲ್

ಮಗುವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಹೆಣ್ಣು ಮಗುವು ಆರೋಗ್ಯವಾಗಿದ್ದಾಳೆ. ತೂಕ ಕಡಿಮೆ ಇರುವ ಕಾರಣ ಮೂರು ವಾರಗಳ ಕಾಲ ಆಸ್ಪತ್ರೆಯಲ್ಲಿ ಇರಿಸಲಾಗುವುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಭಗವತ್ ಭೂಸಾರಿ ಮಾಹಿತಿ ನೀಡಿದ್ದಾರೆ. ಈ ಮಹಿಳಾ ಪೊಲೀಸ್ ಪೇದೆ ಯೋಗಿತಾ ದುಕ್ರೆಯವರ ಈ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!