AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಾಡಿಸಿಕೊಂಡು ಬಂದು ಜನರಿಂದ ಕಲ್ಲೇಟು; ಕಣ್ಣನ್ನೇ ಕಳೆದುಕೊಂಡ ಹೆಣ್ಣು ಹುಲಿ

ಅಸ್ಸಾಂನಲ್ಲಿ ಹೆಣ್ಣು ಹುಲಿಯ ಮೇಲೆ ಜನರ ಗುಂಪೊಂದು ದಾಳಿ ನಡೆಸಿದ್ದು, ಹುಲಿಗೆ ಕಲ್ಲು ಮತ್ತು ಇಟ್ಟಿಗೆಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಹುಲಿ ತನ್ನ ಒಂದು ಕಣ್ಣನ್ನು ಕಳೆದುಕೊಂಡಿದೆ. ಜನರು ಹುಲಿಯತ್ತ ಇಟ್ಟಿಗೆ, ಕಲ್ಲುಗಳನ್ನು ಎಸೆಯುತ್ತಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಅಟ್ಟಾಡಿಸಿಕೊಂಡು ಬಂದು ಜನರಿಂದ ಕಲ್ಲೇಟು; ಕಣ್ಣನ್ನೇ ಕಳೆದುಕೊಂಡ ಹೆಣ್ಣು ಹುಲಿ
ಕಣ್ಣನ್ನೇ ಕಳೆದುಕೊಂಡ ಹೆಣ್ಣು ಹುಲಿ
ಸುಷ್ಮಾ ಚಕ್ರೆ
|

Updated on: Nov 22, 2024 | 5:07 PM

Share

ನವದೆಹಲಿ: ಕಾಡಿನಿಂದ ಬಂದ ಹುಲಿಯನ್ನು ಕಂಡು ಭಯಭೀತರಾದ ಜನರು ಅದರ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದು ತೀವ್ರವಾಗಿ ಗಾಯಗೊಳಿಸಿದ್ದಾರೆ. ಹುಲಿ-ಮನುಷ್ಯರ ಮುಖಾಮುಖಿಯ ಸಮಯದಲ್ಲಿ ಹುಲಿಯ ಮೆದುಳಿಗೆ ಗಾಯವಾಯಿತು. ಈ ವೇಳೆ ಹುಲಿ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿತು. ಅದರ ಮೂಗಿನಿಂದ ರಕ್ತಸ್ರಾವವಾಗುತ್ತಿತ್ತು. ಚೂಪಾದ ವಸ್ತುಗಳನ್ನು ಬಳಸಿ ಹುಲಿಯ ಮೇಲೆ ದಾಳಿ ನಡೆಸಿದ್ದು, ಅದರ ಸ್ಥಿತಿ ಗಂಭೀರವಾಗಿದೆ. ಅಸ್ಸಾಂನ ಕಲಿಯಾಬೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಅಸ್ಸಾಂನ ವಸತಿ ಪ್ರದೇಶದ ಬಳಿಯ ಪೊದೆಗಳಲ್ಲಿ ತಿರುಗಾಡುತ್ತಿದ್ದ ಹುಲಿಯ ಮೇಲೆ ಸ್ಥಳೀಯರು ದಾಳಿ ನಡೆಸಿದ್ದಾರೆ. ಹೆಣ್ಣು ಹುಲಿಯನ್ನು ಕಂಡು ಭಯಭೀತರಾದ ಜನರು ಅದರ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದಿದ್ದಾರೆ. ಹುಲಿಯನ್ನು ಕಂಡು ಸ್ಥಳೀಯರು ಭಯದಿಂದ ಹುಲಿಯ ಮೇಲೆ ತೀವ್ರವಾಗಿ ದಾಳಿ ಮಾಡಿದ್ದಾರೆ ಎಂದು ಕೆಲವು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: ಗುಜರಾತ್​ನ ಖಾನ್​ಪುರ ಅರಣ್ಯದಲ್ಲಿ ಹುಲಿಯ ವಾಕಿಂಗ್; ವಿಡಿಯೋ ವೈರಲ್

ಇತ್ತೀಚೆಗೆ ಅಸ್ಸಾಂನ ಕಲಿಯಾಬೋರ್‌ನಲ್ಲಿ ಜನರು ವಾಸಿಸುವ ಸ್ಥಳಕ್ಕೆ ನುಗ್ಗಿದ ಹುಲಿಯನ್ನು ಓಡಿಸಲು ಶಸ್ತ್ರಸಜ್ಜಿತ ಅರಣ್ಯ ಅಧಿಕಾರಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ರಕ್ಷಿಸಿಕೊಳ್ಳಲು ಹುಲಿ ಓಡುತ್ತಿರುವ ದೃಶ್ಯಗಳನ್ನು ಹಂಚಿಕೊಳ್ಳಲಾಗಿದೆ. ಆ ಹುಲಿ ತಪ್ಪಿಸಿಕೊಳ್ಳುವಷ್ಟರಲ್ಲಿ ಕೆರೆಗೆ ಬಿದ್ದಿತು.

ದಾಳಿ ಪ್ರಾರಂಭವಾದ ನಂತರ ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಮನುಷ್ಯ ರೂಪದ ರಾಕ್ಷಸರು ನಡೆಸಿದ ದಾಳಿ ಹಾಗೂ ಕಲ್ಲು ತೂರಾಟದಿಂದ ಹುಲಿ ಒಂದು ಕಣ್ಣಿನ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಎಕ್ಸ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ