AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತಾಳಿ ಕಟ್ಟುವಾಗ ವಧುವಿಗೆ ಮುತ್ತಿಟ್ಟ ವರ; ರಣರಂಗವಾದ ಕಲ್ಯಾಣ ಮಂಟಪ

ವರನ ಕೃತ್ಯದಿಂದ ಕುಪಿತಗೊಂಡ ವಧುವಿನ ಕುಟುಂಬ ಜಗಳಕ್ಕೆ ಇಳಿದ್ದಿದ್ದಾರೆ. ಬಳಿಕ ವಧುವಿನ ಕುಟುಂಬಸ್ಥರು ದೊಣ್ಣೆ ಹಿಡಿದು ವೇದಿಕೆ ಮೇಲೆ ಏರಿ ವರನ ಮನೆಯವರಿಗೆ ಥಳಿಸಿದ್ದಾರೆ. ಘರ್ಷಣೆಯಲ್ಲಿ ವಧುವಿನ ತಂದೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.

Viral News: ತಾಳಿ ಕಟ್ಟುವಾಗ ವಧುವಿಗೆ ಮುತ್ತಿಟ್ಟ ವರ; ರಣರಂಗವಾದ ಕಲ್ಯಾಣ ಮಂಟಪ
ಅಕ್ಷತಾ ವರ್ಕಾಡಿ
|

Updated on: May 23, 2024 | 5:12 PM

Share

ಉತ್ತರ ಪ್ರದೇಶದಲ್ಲಿ ಸೋಮವಾರ ನಡೆದ ವಿವಾಹದ ಸಂದರ್ಭದಲ್ಲಿ ವರನೊಬ್ಬ ತನ್ನ ವಧುವಿನ ಮೇಲಿನ ಪ್ರೀತಿಯನ್ನು ಸಾರ್ವಜನಿಕವಾಗಿ ತೋರಿಸಲು ತಾಳಿ ಕಟ್ಟುವ ವೇಳೆಯಲ್ಲಿ ಆಕೆಗೆ ಚುಂಬಿಸಿದ್ದಾನೆ. ವರ ಚುಂಬಿಸುತ್ತಿದ್ದಂತೆ ಸಿಟ್ಟಿಗೆದ್ದ ವಧುವಿನ ಕುಟುಂಬ ವರನ ಸಂಬಂಧಿಕರೊಂದಿಗೆ ಜಗಳಕ್ಕೆ ಇಳಿದ್ದಿದ್ದಾರೆ. ವಾಗ್ವಾದ ತೀವ್ರ ಸ್ವರೂಪ ಪಡೆದಿತ್ತು. ಶುಭ ಕಾರ್ಯದ ಮದುವೆ ಮಂಟಪ ಒಂದೇ ಒಂದು ಕ್ಷಣದಲ್ಲಿ ರಣರಂಗವಾಗಿ ಮಾರ್ಪಟ್ಟಿದೆ. ಈ ಘಟನೆ ಉತ್ತರ ಪ್ರದೇಶದ ಹಾಪುರದ ಅಶೋಕ್ ನಗರದಲ್ಲಿ ನಡೆದಿದೆ.

ವರನ ಕೃತ್ಯದಿಂದ ಕುಪಿತಗೊಂಡ ವಧುವಿನ ಕುಟುಂಬ ಜಗಳಕ್ಕೆ ಇಳಿದ್ದಿದ್ದಾರೆ. ಇದಾದ ಬಳಿಕ ವಧುವಿನ ಕುಟುಂಬಸ್ಥರು ದೊಣ್ಣೆ ಹಿಡಿದು ವೇದಿಕೆ ಮೇಲೆ ಏರಿ ವರನ ಮನೆಯವರಿಗೆ ಥಳಿಸಿದ್ದಾರೆ. ಘರ್ಷಣೆಯಲ್ಲಿ ವಧುವಿನ ತಂದೆ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರನ್ನು ಕರೆಸಲಾಗಿದ್ದು, ಎರಡೂ ಕುಟುಂಬಗಳ ಏಳು ಜನರನ್ನು ಬಂಧಿಸಲಾಯಿತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರ ಪ್ರಕಾರ, ಸೋಮವಾರ ರಾತ್ರಿ ವಧುವಿನ ತಂದೆ ತನ್ನ ಇಬ್ಬರು ಹೆಣ್ಣುಮಕ್ಕಳ ಮದುವೆಯನ್ನು ಏರ್ಪಡಿಸಿದ್ದರು. ಮೊದಲ ಮದುವೆ ಯಾವುದೇ ತೊಂದರೆಯಿಲ್ಲದೆ ಮುಕ್ತಾಯಗೊಂಡರೆ, ಎರಡನೇ ಸಮಾರಂಭವು ಕೆಟ್ಟದ್ದಕ್ಕೆ ತಿರುವು ಪಡೆಯಿತು. ವಧುವಿನ ಕುಟುಂಬ, ವರನು ವೇದಿಕೆಯ ಮೇಲೆ ಬಲವಂತವಾಗಿ ಚುಂಬಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: Viral Video: ಕಸ ಎಸೆದಿಲ್ಲ ಏಕೆ? ಕೆಲಸದಿಂದ ಮನೆಗೆ ಬರುತ್ತಿದ್ದಂತೆ ಪತಿರಾಯನಿಗೆ ಜಾಡಿಸಿ ಒದ್ದ ಪತ್ನಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಲಿಖಿತ ದೂರು ಬಂದಿಲ್ಲ ಮತ್ತು ದೂರಿನ ಸ್ವೀಕೃತಿಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಹಿರಿಯ ಪೊಲೀಸ್ ಅಧಿಕಾರಿ ರಾಜ್‌ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 151 ರ ಅಡಿಯಲ್ಲಿ ಸಾರ್ವಜನಿಕ ಶಾಂತಿ ಕದಡುವ ಆರೋಪದಡಿ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!