AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೇಕ್​ಆಫ್​ನಲ್ಲಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ ಲಂಡನ್ ಭೂಪ

Flight Door : ಇದ್ದಕ್ಕಿದ್ದಂತೆ ಎದ್ದು ಬಂದು ತನ್ನ ಸನ್​ ಗ್ಲಾಸ್​ ತೆಗೆದು ಬಾಗಿಲು ತೆರೆಯಿರಿ ಎಂದು ಕೂಗುತ್ತ ಮತ್ತು ಏನನ್ನೋ ಸನ್ನೇ ಮಾಡುತ್ತ ಇಡೀ ವಿಮಾನವನ್ನು ಅಲ್ಲೋಲ ಕಲ್ಲೋಲ ಮಾಡತೊಡಗಿದ ಈ ವ್ಯಕ್ತಿ. ಮುಂದೇನಾಯಿತು ನೋಡಿ.

Viral Video: ಟೇಕ್​ಆಫ್​ನಲ್ಲಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ ಲಂಡನ್ ಭೂಪ
ಲಂಡನ್​ನ ವ್ಯಕ್ತಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸುವುದನ್ನು ತಡೆದ ಪ್ರಯಾಣಿಕ.
Follow us
ಶ್ರೀದೇವಿ ಕಳಸದ
|

Updated on:Jul 05, 2023 | 10:28 AM

Flight Take off : ವಿಮಾನವು ಅಮೆರಿಕದಿಂದ ಲಂಡನ್​​ಗೆ ಹಾರಲೆಂದು ರನ್​​ವೇನಲ್ಲಿ (Run Way) ಚಲಿಸುತ್ತಿರುವಾಗ ಲಂಡನ್​​ನ (UK)​ 27 ವರ್ಷದ ವ್ಯಕ್ತಿ ವಿಮಾನದ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಆಗ ಪ್ರಯಾಣಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕೆಲ ಪ್ರಯಾಣಿಕರು ಈ ವ್ಯಕ್ತಿಯನ್ನು ಬಾಗಿಲು ತೆರೆಯದಂತೆ ತಡೆದಿದ್ದಾರೆ. ಆನಂತರ ಈ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಘಟನೆ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಈ ವಿಮಾನದಲ್ಲಿದ್ದ ಬಹುಪಾಲು ಪ್ರಯಾಣಿಕರು ಅಮೆರಿಕದ ಪಾಗ್​ ದ್ವೀಪದಲ್ಲಿ ನಡೆದ ಹೈಡ್​ ಔಟ್​ ಕ್ರೊಯೇಷಿಯಾದ ಸಂಗೀತ ಉತ್ಸವದಿಂದ ಲಂಡನ್​ಗೆ ಮರಳುತ್ತಿದ್ದರು. ವಿಮಾನವು ರನ್​ವೇನಲ್ಲಿ ಚಲಿಸುತ್ತಿದ್ದಂತೆ ಈ ವ್ಯಕ್ತಿ ಇದ್ದಕ್ಕಿದ್ದಂತೆ ಸೀಟು ಬಿಟ್ಟು ಬಂದು ಬಾಗಿಲು ತೆರೆಯಿರಿ ಎಂದು ಕೂಗಲಾರಂಭಿಸಿದ. ಜೊತೆಗೆ ಏನೋ ಸನ್ನೆ ಮಾಡತೊಡಗಿದ. ಅಲ್ಲಿದ್ದ ಪ್ರಯಾಣಿಕರು ಅವನನ್ನು ತಡೆಯಲು ಹರಸಾಹಸಪಟ್ಟರು. ಅವನ ಆರ್ಭಟ ಜೋರಾಗುತ್ತಿದ್ದಂತೆ ಇಬ್ಬರು ಗಂಡಸರು ಅವನನ್ನು ಕೆಳಕ್ಕೆ ಬೀಳಿಸಿ ಗಟ್ಟಿಯಾಗಿ ಹಿಡಿದು ಬಾಗಿಲು ತೆರೆಯುವುದನ್ನು ತಪ್ಪಿಸಿದರು.

ಇದನ್ನೂ ಓದಿ : Viral: ”ಚಿಕ್ಕವಳಿದ್ದಾಗ ಬಾರ್ಬಿಯನ್ನು ಕಳೆದುಕೊಂಡೆ”; ಹೆಂಡತಿ ಗಂಡನಿಗೆ ಹೇಳಿದಾಗ… 

ನಂತರ ಈತನನ್ನು ವಿಮಾನದಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಉಳಿದ ಪ್ರಯಾಣಿಕರು ಅದೇ  ವಿಮಾನದಲ್ಲಿ ತಮ್ಮ ದೇಶ ತಲುಪಿದರು. ”ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸದ್ಯ ಈತ ಬಂಧನದಲ್ಲಿದ್ದಾನೆ. ಅಲ್ಲದೆ ಈ ವ್ಯಕ್ತಿಯಿಂದ ಉಂಟಾದ ಅನಾನುಕೂಲತೆಗೆ ಪ್ರಯಾಣಿಕರಲ್ಲಿ ಕ್ಷಮೆ ಕೇಳುತ್ತೇವೆ” ಎಂದು ವಿಮಾನಸಂಸ್ಥೆಯು (Ryanair Airlines) ತಿಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:25 am, Wed, 5 July 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್