Viral Video: ಟೇಕ್​ಆಫ್​ನಲ್ಲಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ ಲಂಡನ್ ಭೂಪ

Flight Door : ಇದ್ದಕ್ಕಿದ್ದಂತೆ ಎದ್ದು ಬಂದು ತನ್ನ ಸನ್​ ಗ್ಲಾಸ್​ ತೆಗೆದು ಬಾಗಿಲು ತೆರೆಯಿರಿ ಎಂದು ಕೂಗುತ್ತ ಮತ್ತು ಏನನ್ನೋ ಸನ್ನೇ ಮಾಡುತ್ತ ಇಡೀ ವಿಮಾನವನ್ನು ಅಲ್ಲೋಲ ಕಲ್ಲೋಲ ಮಾಡತೊಡಗಿದ ಈ ವ್ಯಕ್ತಿ. ಮುಂದೇನಾಯಿತು ನೋಡಿ.

Viral Video: ಟೇಕ್​ಆಫ್​ನಲ್ಲಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ ಲಂಡನ್ ಭೂಪ
ಲಂಡನ್​ನ ವ್ಯಕ್ತಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸುವುದನ್ನು ತಡೆದ ಪ್ರಯಾಣಿಕ.
Follow us
|

Updated on:Jul 05, 2023 | 10:28 AM

Flight Take off : ವಿಮಾನವು ಅಮೆರಿಕದಿಂದ ಲಂಡನ್​​ಗೆ ಹಾರಲೆಂದು ರನ್​​ವೇನಲ್ಲಿ (Run Way) ಚಲಿಸುತ್ತಿರುವಾಗ ಲಂಡನ್​​ನ (UK)​ 27 ವರ್ಷದ ವ್ಯಕ್ತಿ ವಿಮಾನದ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಆಗ ಪ್ರಯಾಣಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕೆಲ ಪ್ರಯಾಣಿಕರು ಈ ವ್ಯಕ್ತಿಯನ್ನು ಬಾಗಿಲು ತೆರೆಯದಂತೆ ತಡೆದಿದ್ದಾರೆ. ಆನಂತರ ಈ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಘಟನೆ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಈ ವಿಮಾನದಲ್ಲಿದ್ದ ಬಹುಪಾಲು ಪ್ರಯಾಣಿಕರು ಅಮೆರಿಕದ ಪಾಗ್​ ದ್ವೀಪದಲ್ಲಿ ನಡೆದ ಹೈಡ್​ ಔಟ್​ ಕ್ರೊಯೇಷಿಯಾದ ಸಂಗೀತ ಉತ್ಸವದಿಂದ ಲಂಡನ್​ಗೆ ಮರಳುತ್ತಿದ್ದರು. ವಿಮಾನವು ರನ್​ವೇನಲ್ಲಿ ಚಲಿಸುತ್ತಿದ್ದಂತೆ ಈ ವ್ಯಕ್ತಿ ಇದ್ದಕ್ಕಿದ್ದಂತೆ ಸೀಟು ಬಿಟ್ಟು ಬಂದು ಬಾಗಿಲು ತೆರೆಯಿರಿ ಎಂದು ಕೂಗಲಾರಂಭಿಸಿದ. ಜೊತೆಗೆ ಏನೋ ಸನ್ನೆ ಮಾಡತೊಡಗಿದ. ಅಲ್ಲಿದ್ದ ಪ್ರಯಾಣಿಕರು ಅವನನ್ನು ತಡೆಯಲು ಹರಸಾಹಸಪಟ್ಟರು. ಅವನ ಆರ್ಭಟ ಜೋರಾಗುತ್ತಿದ್ದಂತೆ ಇಬ್ಬರು ಗಂಡಸರು ಅವನನ್ನು ಕೆಳಕ್ಕೆ ಬೀಳಿಸಿ ಗಟ್ಟಿಯಾಗಿ ಹಿಡಿದು ಬಾಗಿಲು ತೆರೆಯುವುದನ್ನು ತಪ್ಪಿಸಿದರು.

ಇದನ್ನೂ ಓದಿ : Viral: ”ಚಿಕ್ಕವಳಿದ್ದಾಗ ಬಾರ್ಬಿಯನ್ನು ಕಳೆದುಕೊಂಡೆ”; ಹೆಂಡತಿ ಗಂಡನಿಗೆ ಹೇಳಿದಾಗ… 

ನಂತರ ಈತನನ್ನು ವಿಮಾನದಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಉಳಿದ ಪ್ರಯಾಣಿಕರು ಅದೇ  ವಿಮಾನದಲ್ಲಿ ತಮ್ಮ ದೇಶ ತಲುಪಿದರು. ”ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸದ್ಯ ಈತ ಬಂಧನದಲ್ಲಿದ್ದಾನೆ. ಅಲ್ಲದೆ ಈ ವ್ಯಕ್ತಿಯಿಂದ ಉಂಟಾದ ಅನಾನುಕೂಲತೆಗೆ ಪ್ರಯಾಣಿಕರಲ್ಲಿ ಕ್ಷಮೆ ಕೇಳುತ್ತೇವೆ” ಎಂದು ವಿಮಾನಸಂಸ್ಥೆಯು (Ryanair Airlines) ತಿಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:25 am, Wed, 5 July 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ