AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೇಕ್​ಆಫ್​ನಲ್ಲಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ ಲಂಡನ್ ಭೂಪ

Flight Door : ಇದ್ದಕ್ಕಿದ್ದಂತೆ ಎದ್ದು ಬಂದು ತನ್ನ ಸನ್​ ಗ್ಲಾಸ್​ ತೆಗೆದು ಬಾಗಿಲು ತೆರೆಯಿರಿ ಎಂದು ಕೂಗುತ್ತ ಮತ್ತು ಏನನ್ನೋ ಸನ್ನೇ ಮಾಡುತ್ತ ಇಡೀ ವಿಮಾನವನ್ನು ಅಲ್ಲೋಲ ಕಲ್ಲೋಲ ಮಾಡತೊಡಗಿದ ಈ ವ್ಯಕ್ತಿ. ಮುಂದೇನಾಯಿತು ನೋಡಿ.

Viral Video: ಟೇಕ್​ಆಫ್​ನಲ್ಲಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ ಲಂಡನ್ ಭೂಪ
ಲಂಡನ್​ನ ವ್ಯಕ್ತಿ ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸುವುದನ್ನು ತಡೆದ ಪ್ರಯಾಣಿಕ.
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 05, 2023 | 10:28 AM

Share

Flight Take off : ವಿಮಾನವು ಅಮೆರಿಕದಿಂದ ಲಂಡನ್​​ಗೆ ಹಾರಲೆಂದು ರನ್​​ವೇನಲ್ಲಿ (Run Way) ಚಲಿಸುತ್ತಿರುವಾಗ ಲಂಡನ್​​ನ (UK)​ 27 ವರ್ಷದ ವ್ಯಕ್ತಿ ವಿಮಾನದ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಆಗ ಪ್ರಯಾಣಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕೆಲ ಪ್ರಯಾಣಿಕರು ಈ ವ್ಯಕ್ತಿಯನ್ನು ಬಾಗಿಲು ತೆರೆಯದಂತೆ ತಡೆದಿದ್ದಾರೆ. ಆನಂತರ ಈ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಘಟನೆ ಕುರಿತಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಈ ವಿಮಾನದಲ್ಲಿದ್ದ ಬಹುಪಾಲು ಪ್ರಯಾಣಿಕರು ಅಮೆರಿಕದ ಪಾಗ್​ ದ್ವೀಪದಲ್ಲಿ ನಡೆದ ಹೈಡ್​ ಔಟ್​ ಕ್ರೊಯೇಷಿಯಾದ ಸಂಗೀತ ಉತ್ಸವದಿಂದ ಲಂಡನ್​ಗೆ ಮರಳುತ್ತಿದ್ದರು. ವಿಮಾನವು ರನ್​ವೇನಲ್ಲಿ ಚಲಿಸುತ್ತಿದ್ದಂತೆ ಈ ವ್ಯಕ್ತಿ ಇದ್ದಕ್ಕಿದ್ದಂತೆ ಸೀಟು ಬಿಟ್ಟು ಬಂದು ಬಾಗಿಲು ತೆರೆಯಿರಿ ಎಂದು ಕೂಗಲಾರಂಭಿಸಿದ. ಜೊತೆಗೆ ಏನೋ ಸನ್ನೆ ಮಾಡತೊಡಗಿದ. ಅಲ್ಲಿದ್ದ ಪ್ರಯಾಣಿಕರು ಅವನನ್ನು ತಡೆಯಲು ಹರಸಾಹಸಪಟ್ಟರು. ಅವನ ಆರ್ಭಟ ಜೋರಾಗುತ್ತಿದ್ದಂತೆ ಇಬ್ಬರು ಗಂಡಸರು ಅವನನ್ನು ಕೆಳಕ್ಕೆ ಬೀಳಿಸಿ ಗಟ್ಟಿಯಾಗಿ ಹಿಡಿದು ಬಾಗಿಲು ತೆರೆಯುವುದನ್ನು ತಪ್ಪಿಸಿದರು.

ಇದನ್ನೂ ಓದಿ : Viral: ”ಚಿಕ್ಕವಳಿದ್ದಾಗ ಬಾರ್ಬಿಯನ್ನು ಕಳೆದುಕೊಂಡೆ”; ಹೆಂಡತಿ ಗಂಡನಿಗೆ ಹೇಳಿದಾಗ… 

ನಂತರ ಈತನನ್ನು ವಿಮಾನದಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಉಳಿದ ಪ್ರಯಾಣಿಕರು ಅದೇ  ವಿಮಾನದಲ್ಲಿ ತಮ್ಮ ದೇಶ ತಲುಪಿದರು. ”ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸದ್ಯ ಈತ ಬಂಧನದಲ್ಲಿದ್ದಾನೆ. ಅಲ್ಲದೆ ಈ ವ್ಯಕ್ತಿಯಿಂದ ಉಂಟಾದ ಅನಾನುಕೂಲತೆಗೆ ಪ್ರಯಾಣಿಕರಲ್ಲಿ ಕ್ಷಮೆ ಕೇಳುತ್ತೇವೆ” ಎಂದು ವಿಮಾನಸಂಸ್ಥೆಯು (Ryanair Airlines) ತಿಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:25 am, Wed, 5 July 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!