AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 100 ವರ್ಷದ ದೈತ್ಯಾಕಾರದ ಕಡಲೇಡಿ ಹಿಡಿದ ಮೀನುಗಾರ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮೀನುಗಾರರೊಬ್ಬರು ಇತ್ತೀಚೆಗೆ 100 ವರ್ಷದ ದೈತ್ಯಾಕಾರದ ಕಡಲೇಡಿಯನ್ನು ಹಿಡಿದಿದ್ದಾರೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: 100 ವರ್ಷದ ದೈತ್ಯಾಕಾರದ ಕಡಲೇಡಿ ಹಿಡಿದ ಮೀನುಗಾರ!
ಕಡಲೇಡಿ ಹಿಡಿದ ಮೀನುಗಾರImage Credit source: Instagram
TV9 Web
| Edited By: |

Updated on: Jun 07, 2022 | 4:05 PM

Share

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮೀನುಗಾರರೊಬ್ಬರು ಇತ್ತೀಚೆಗೆ 100 ವರ್ಷದ ದೈತ್ಯಾಕಾರದ ಕಡಲೇಡಿ (Lobster)ಯನ್ನು ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ. ಮೀನುಗಾರ ಜಾಕೋಬ್ ನೋಲ್ಸ್ ಅವರು ಈ ಕಡಲೇಡಿಯನ್ನು ಹಿಡಿದಿದ್ದು, ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಇದರ ವಿಡಿಯೋ ಹಂಚಿಕೊಂಡಿದ್ದಾರೆ. ಅಲ್ಲದೆ ”ಇದು ನಾವು ಹಿಡಿದಿರುವ ಅತಿ ದೊಡ್ಡ ಗಾತ್ರದ ಕಡಲೇಡಿ” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Trending: ವಿಜಯದ ಸಂಭ್ರಮದ ವೇಳೆ ತನ್ನ ಪತ್ನಿಗೆ ಗುದ್ದಿದ ಸೈಕ್ಲಿಸ್ಟ್

ವಿಡಿಯೋದಲ್ಲಿ ಜಾಕೋಬ್ ವಿವರಿಸಿದಂತೆ, ಕಡಲೇಡಿಯಲ್ಲಿ ಸಣ್ಣ ಉಗುರುಗಳು ಇದ್ದ ಕಾರಣ ಅದನ್ನು ಸುಲಭವಾಗಿ ಹಿಡಿಯಲು ಸಾಧ್ಯವಾಯಿತು. ತನ್ನ ಜೀವನದ ಒಂದು ಹಂತದಲ್ಲಿ ಉಗುರುಗಳನ್ನು ಕಳೆದುಕೊಂಡಿದೆ. ಅದಾಗ್ಯೂ ಕೆಲವು ಹೊಸ ಉಗುರುಗಳು ಬೆಳೆದಿವೆ. ಆದರೆ ಈ ಉಗುರುಗಳು ಅದರ ದೇಹಕ್ಕೆ ಹೊಂದಿಕೆಯಾಗುವುದಿಲ್ಲ. ದೇಹವು ಬಲಶಾಲಿಯಾಗಿದೆ ಎಂದು ಹೇಳಿದ್ದಾರೆ.

ತಾನು ನಾಲ್ಕನೇ ತಲೆಮಾರಿನ ಮೀನುಗಾರ ಎಂದು ಬಹಿರಂಗಪಡಿಸಿದ ಜಾಕೋಬ್, ನಾವು ಹಿಡಿದಿರುವ ಕಡಲೇಡಿಗೆ ಸುಮಾರು 100 ವರ್ಷ ಆಗಿರಬಹುದು. ತನಗಿಂತ ಮೊದಲು ಮೀನುಗಾರರಾಗಿದ್ದ ತನ್ನ ಕುಟುಂಬವು ಈ ಕಡಲೇಡಿಯನ್ನು ಹಿಡಿದಿರುವ ಸಾಧ್ಯತೆಯಿದೆ ಎಂದಿದ್ದಾರೆ.

ವಿಡಿಯೋ ವೀಕ್ಷಿಸಿ:

View this post on Instagram

A post shared by Jacob Knowles (@jknowles831)

ಜಾಕೋಬ್ ಪ್ರಕಾರ, ಕಡಲೇಡಿ ವರ್ಷದಿಂದ ವರ್ಷಕ್ಕೆ ಅದೇ ಪ್ರದೇಶದ ಮೂಲಕ ವಲಸೆ ಹೋಗುವ ಸಾಧ್ಯತೆಯಿದೆ. ಈ ಕಡಲೇಡಿಗೆ ವಯಸ್ಸಾದ ಕಾರಣ ಉಗುರುಗಳ ಮೇಲೆ ಯಾವುದೇ ಹಲ್ಲುಗಳಿಲ್ಲ. ಆದಾಗ್ಯೂ ಕಠಿಣಚರ್ಮ ಹೊಂದಿದ್ದು, ಆರೋಗ್ಯಕರವಾಗಿದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಇದು ಉತ್ತಮ ಸ್ಥಿತಿಯಲ್ಲಿದೆ. ಅದರ ಬಾಲದ ಗಾತ್ರ ನನ್ನ ಎರಡೂ ಕೈಗಳ ಗಾತ್ರದಷ್ಟಿದೆ ಎಂದು ವಿವರಿಸಿದರು.

ಇದನ್ನೂ ಓದಿ: Trending: ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ವಿಡಿಯೋ ವೈರಲ್

ಕಡಲೇಡಿಯನ್ನು ಮತ್ತೆ ನೀರಿಗೆ ಬಿಡುವ ಮೊದಲು ಜಾಕೋಬ್, ಕಡಲೇಡಿಯ ಉಗುರುಗಳ ಸಂಧಿಯಲ್ಲಿ ಮೀನನ್ನು ಇಟ್ಟು ನೀರಿಗೆ ಬಿಟ್ಟಿದ್ದಾರೆ. ಈ ವೇಳೆ ಅವರು “ನೀನು ಹೋಗು, ಹೋಗು ಕೆಲವು ಮರಿಗಳನ್ನು ಮಾಡು” ಎಂದು ಹೇಳಿದ್ದಾರೆ. ನ್ಯೂಸ್‌ವೀಕ್ ಪ್ರಕಾರ, ಮೈನೆಯಲ್ಲಿ, ಕಡಲೇಡಿಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಇಂಥ ಗಾತ್ರದ ಕಡಲೇಡಿಗಳನ್ನು ಸಂತಾನೋತ್ಪತ್ತಿಯ ಉದ್ದೇಶಗಳಿಗಾಗಿ ರಕ್ಷಿಸಲಾಗುತ್ತಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ