AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್
ಮೃತ ಜಸ್ಟಿನ್ ವಿಕ್ಕಿ(33) Image Credit source: instagram
ಅಕ್ಷತಾ ವರ್ಕಾಡಿ
|

Updated on:Jul 23, 2023 | 4:50 PM

Share

ಇಂಡೋನೇಷ್ಯಾ: 210 ಕೆಜಿ ತೂಕವನ್ನು ಎತ್ತಲು ಹೋಗಿ ಕುತ್ತಿಗೆ ಮುರಿದು(Neck Broke) ಸಾವನ್ನಪ್ಪಿರುವ ಘಟನೆ ಬಾಲಿ ಜಿಮ್‌ನಲ್ಲಿ ನಡೆದಿದೆ. ಜಿಮ್​​​ ತರಬೇತುದಾರರಾಗಿ(Fitness Trainer)  ಕೆಲಸ ಮಾಡುತ್ತಿದ್ದ ಜಸ್ಟಿನ್ ವಿಕ್ಕಿ(33) , ಇತ್ತೀಚೆಗಷ್ಟೇ 210 ಕೆಜಿ ತೂಕದ ಬಾರ್ಬೆಲ್​​​​ ಎತ್ತುವ ಸಾಹಸಕ್ಕೆ ಇಳಿದಿದ್ದಾರೆ. ಆದರೆ ಈ ಸಾಹಸ ಅವರ ಜೀವವನ್ನೇ ತೆಗೆದಿದೆ. ಈ ಘಟನೆ ಜುಲೈ 15 ರಂದು ನಡೆದಿದೆ ಎಂದು ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ. ವಿಡಿಯೋ ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಟ್ವಿಟರ್​​ ಬಳಕೆದಾರರಾದ ಮಹೇಶ್​​​ ನಾಯರ್​​​​ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ನಿಮ್ಮ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral News: ವಾರಪೂರ್ತಿ ಕಣ್ಣೀರು ಸುರಿಸಿ ಗಿನ್ನಿಸ್​​ ದಾಖಲೆ ಮಾಡಲು ಹೋಗಿ ಕುರುಡನಾದ ಯುವಕ

ವಿಡಿಯೋದಲ್ಲಿ ಜಸ್ಟಿನ್ ವಿಕ್ಕಿ ತನ್ನ ಭುಜದ ಮೇಲೆ ಬಾರ್ಬೆಲ್ ಎತ್ತುತ್ತಿರುವುದನ್ನು ಕಾಣಬಹುದು. ಜೊತೆಗೆ ಸಹಾಯಕ್ಕೆ ಇನ್ನೊಬ್ಬರು ಜೊತೆಗಿರುವುದನ್ನು ಕಾಣಬಹುದು. ಭಾರ ಎತ್ತಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಆದರೆ ಸಾಧ್ಯವಾಗದೇ ಬಾರ್ಬೆಲ್ ಅವನ ಕುತ್ತಿಗೆಯ ಹಿಂಭಾಗಕ್ಕೆ ನೇರವಾಗಿ ಬಿದ್ದಿರುವುದನ್ನು ಕಾಣಬಹುದು. ಅಪಘಾತದ ಪರಿಣಾಮವಾಗಿ ಆತನ ಕುತ್ತಿಗೆ ಮುರಿದು ಹೃದಯ ಮತ್ತು ಶ್ವಾಸಕೋಶಗಳಿಗೆ ಸಂಪರ್ಕ ಹೊಂದಿದ ಪ್ರಮುಖ ನರಗಳ ಹಾನಿಯುಂಟಾಗಿ ತುರ್ತು ಶಸ್ತ್ರ ಚಿಕಿತ್ಸೆ ನಡೆಸಿದರೂ ಕೆಲ ಹೊತ್ತಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ದಿ ಡೈಲಿ ಮೇಲ್ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:48 pm, Sun, 23 July 23

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ