AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರ ಬಂಧನ!

Viral News: ಚೀಟಿಂಗ್ ಮಾಡಲು ಬಳಕೆ ಮಾಡಲಾಗುತ್ತಿದ್ದ ಚಪ್ಪಲಿಗಳನ್ನು ಬರೋಬ್ಬರಿ 2 ರಿಂದ 6 ಲಕ್ಷದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರ ಬಂಧನ!
ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರ ಬಂಧನ!
TV9 Web
| Updated By: shruti hegde|

Updated on:Sep 28, 2021 | 3:43 PM

Share

ರಾಜಸ್ಥಾನ ಶಿಕ್ಷಕರ ನೇಮಕಾತಿ ಪರೀಕ್ಷೆಯ (REET) ವೇಳೆ ಅಭ್ಯರ್ಥಿಗಳು ಚಪ್ಪಲಿಯೊಳಗೆ ಬ್ಲೂಟೂತ್ ಹಾಗೂ ಮೊಬೈಲ್ ಫೋನ್ ಅಡಗಿಸಿಟ್ಟುಕೊಂಡು ಚೀಟ್ ಮಾಡುತ್ತಿದ್ದ ವಿಷಯವೊಂದು ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಮೋಸ ಮಾಡಲು ಮುಂದಾದ ಅಭ್ಯರ್ಥಿಗಳಿಂದ ಒಟ್ಟು 6 ಲಕ್ಷ ಮೌಲ್ಯದ ಚಪ್ಪಲಿಯನ್ನು ವಶಪಡಿಸಿಕೊಳ್ಳಲಾಗಿದೆ. ಚಪ್ಪಲಿಯೊಳಗೆ ಬ್ಲ್ಯೂಟೂತ್ ಮತ್ತು ಮೊಬೈಲ್ ಫೊನ್​ಗಳನ್ನು ಇರಿಸಿಕೊಳ್ಳಲಾಗಿತ್ತು. ಜತೆಗೆ ಅಭ್ಯರ್ಥಿಗಳು ಬ್ಲ್ಯೂಟೂತ್ ಸಹಾಯದಿಂದ ಉತ್ತರವನ್ನು ಹೊರಗಡೆ ನಿಂತಿದ್ದ ವ್ಯಕ್ತಿಯಿಂದ ಕೇಳಿ ತಿಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದರು.

ರಾಜಸ್ಥಾನ ಶಿಕ್ಷಕರ ಅರ್ಹತಾ ನೇಮಕಾತಿ ಪರೀಕ್ಷೆಯು ಭಾನುವಾರ ನಡೆಯಿತು. ರಾಜಸ್ಥಾನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಲು REET ಉತ್ತೀರ್ಣರಾಗಬೇಕು. ಐವರು ಅಭ್ಯರ್ಥಿಗಳು ಬ್ಲ್ಯೂಟೂತ್ ಇದ್ದ ಚಪ್ಪಲಿಯನ್ನು ಧರಿಸಿ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವ ಮೊದಲೇ ಅವರನ್ನು ತಡೆಯಲಾಗಿದೆ. ಜತೆಗೆ ಈ ದಂಧೆಯಲ್ಲಿ ಪಾಲ್ಗೊಂಡಿದ್ದ ಇತರರನ್ನೂ ಸಹ ಬಂಧಿಸಲಾಗಿದೆ. ಚೀಟಿಂಗ್ ಮಾಡಲು ಬಳಕೆ ಮಾಡಲಾಗುತ್ತಿದ್ದ ಚಪ್ಪಲಿಗಳನ್ನು ಬರೋಬ್ಬರಿ 2 ರಿಂದ 6 ಲಕ್ಷದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಕಾರಲ್ಲಿ ಬಂದು ಲೂಟಿ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಕಳ್​ ಮಂಜ ಅರೆಸ್ಟ್​; 5 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಆಭರಣ ವಶಕ್ಕೆ

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​

(Five arrested for putting Bluetooth and mobile phones in chappals for reet exam)

Published On - 1:15 pm, Tue, 28 September 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!