AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರ ಬಂಧನ!

Viral News: ಚೀಟಿಂಗ್ ಮಾಡಲು ಬಳಕೆ ಮಾಡಲಾಗುತ್ತಿದ್ದ ಚಪ್ಪಲಿಗಳನ್ನು ಬರೋಬ್ಬರಿ 2 ರಿಂದ 6 ಲಕ್ಷದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರ ಬಂಧನ!
ಚಪ್ಪಲಿಯೊಳಗೆ ಬ್ಲ್ಯೂಟೂತ್ ಹಾಗೂ ಮೊಬೈಲ್ ಫೋನ್ ಇಟ್ಟುಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರ ಬಂಧನ!
TV9 Web
| Edited By: |

Updated on:Sep 28, 2021 | 3:43 PM

Share

ರಾಜಸ್ಥಾನ ಶಿಕ್ಷಕರ ನೇಮಕಾತಿ ಪರೀಕ್ಷೆಯ (REET) ವೇಳೆ ಅಭ್ಯರ್ಥಿಗಳು ಚಪ್ಪಲಿಯೊಳಗೆ ಬ್ಲೂಟೂತ್ ಹಾಗೂ ಮೊಬೈಲ್ ಫೋನ್ ಅಡಗಿಸಿಟ್ಟುಕೊಂಡು ಚೀಟ್ ಮಾಡುತ್ತಿದ್ದ ವಿಷಯವೊಂದು ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಮೋಸ ಮಾಡಲು ಮುಂದಾದ ಅಭ್ಯರ್ಥಿಗಳಿಂದ ಒಟ್ಟು 6 ಲಕ್ಷ ಮೌಲ್ಯದ ಚಪ್ಪಲಿಯನ್ನು ವಶಪಡಿಸಿಕೊಳ್ಳಲಾಗಿದೆ. ಚಪ್ಪಲಿಯೊಳಗೆ ಬ್ಲ್ಯೂಟೂತ್ ಮತ್ತು ಮೊಬೈಲ್ ಫೊನ್​ಗಳನ್ನು ಇರಿಸಿಕೊಳ್ಳಲಾಗಿತ್ತು. ಜತೆಗೆ ಅಭ್ಯರ್ಥಿಗಳು ಬ್ಲ್ಯೂಟೂತ್ ಸಹಾಯದಿಂದ ಉತ್ತರವನ್ನು ಹೊರಗಡೆ ನಿಂತಿದ್ದ ವ್ಯಕ್ತಿಯಿಂದ ಕೇಳಿ ತಿಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದರು.

ರಾಜಸ್ಥಾನ ಶಿಕ್ಷಕರ ಅರ್ಹತಾ ನೇಮಕಾತಿ ಪರೀಕ್ಷೆಯು ಭಾನುವಾರ ನಡೆಯಿತು. ರಾಜಸ್ಥಾನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಲು REET ಉತ್ತೀರ್ಣರಾಗಬೇಕು. ಐವರು ಅಭ್ಯರ್ಥಿಗಳು ಬ್ಲ್ಯೂಟೂತ್ ಇದ್ದ ಚಪ್ಪಲಿಯನ್ನು ಧರಿಸಿ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವ ಮೊದಲೇ ಅವರನ್ನು ತಡೆಯಲಾಗಿದೆ. ಜತೆಗೆ ಈ ದಂಧೆಯಲ್ಲಿ ಪಾಲ್ಗೊಂಡಿದ್ದ ಇತರರನ್ನೂ ಸಹ ಬಂಧಿಸಲಾಗಿದೆ. ಚೀಟಿಂಗ್ ಮಾಡಲು ಬಳಕೆ ಮಾಡಲಾಗುತ್ತಿದ್ದ ಚಪ್ಪಲಿಗಳನ್ನು ಬರೋಬ್ಬರಿ 2 ರಿಂದ 6 ಲಕ್ಷದ ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಕಾರಲ್ಲಿ ಬಂದು ಲೂಟಿ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಕಳ್​ ಮಂಜ ಅರೆಸ್ಟ್​; 5 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಆಭರಣ ವಶಕ್ಕೆ

ಅರೆಸ್ಟ್​ ಆದ ಬಿಗ್​ ಬಾಸ್​ ಸ್ಪರ್ಧಿಗೆ ಶಾಕ್​; ನಟಿಯ ಜತೆಗೆ ಬಾಯ್​ಫ್ರೆಂಡ್ಅನ್ನೂ ಜೀಪು ಹತ್ತಿಸಿದ ಪೊಲೀಸರು ​

(Five arrested for putting Bluetooth and mobile phones in chappals for reet exam)

Published On - 1:15 pm, Tue, 28 September 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ