AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಫ್ಲೋರಿಡಾದಲ್ಲಿ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧ
ಅಕ್ಷತಾ ವರ್ಕಾಡಿ
|

Updated on:Mar 27, 2024 | 2:51 PM

Share

ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ ಸೋಮವಾರ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್​​ ಮೀಡಿಯಾ ಬಳಕೆ ನಿಷೇಧದ ಮಸೂದೆಗೆ ಸಹಿ ಹಾಕಿದರು. ಈ ಮೂಲಕ ಈ ದೇಶದಲ್ಲಿ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಇದಲ್ಲದೇ 14 ಮತ್ತು 15 ವರ್ಷ ವಯಸ್ಸಿನ ಮಕ್ಕಳು ಸೋಶಿಯಲ್​ ಮೀಡಿಯಾ ಬಳಸಲು ಪೋಷಕರ ಒಪ್ಪಿಗೆ ಪಡೆಯಬೇಕು.

ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ. ಇದರಿಂದಲೇ ಈ ಹೊಸ ಕಾನುನೂ ಜಾರಿಗೊಳಿಸಲಾಗಿದೆ ಎಂದು ಡಿಸಾಂಟಿಸ್ ಹೇಳಿಕೆ ನೀಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಟ್ರೈನ್ ಚಕ್ರಗಳಿ​ಗೆ ರಬ್ಬರ್ ಟೈರ್ ಹಾಕಿದರೆ ಅದು ಸರಾಗವಾಗಿ ಚಲಿಸುತ್ತದಾ? ಈ ವೈರಲ್ ವೀಡಿಯೊ ನೋಡಿ

ನೂತನ ಕಾಯ್ದೆ ಪ್ರಕಾರ, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ 14 ವರ್ಷದೊಳಗಿನ ಎಲ್ಲಾ ಮಕ್ಕಳ ಖಾತೆಗಳನ್ನು ಡಿಲೀಟ್​​ ಮಾಡುವಂತೆ ಸೂಚನೆ ನೀಡಲಾಗಿದೆ. NetChoice, Facebook  ಮೆಟಾ ಪ್ಲಾಟ್‌ಫಾರ್ಮ್‌ಗಳು, TikTok ಮತ್ತು Snap ಅನ್ನು ಒಳಗೊಂಡಿರುವ ಟೆಕ್-ಇಂಡಸ್ಟ್ರಿ ಟ್ರೇಡ್ ಅಸೋಸಿಯೇಷನ್, ಕಳೆದ ಜೂನ್‌ನಲ್ಲಿ ಅರ್ಕಾನ್ಸಾಸ್ ಕಾನೂನನ್ನು ನಿಲ್ಲಿಸಲು ಮೊಕದ್ದಮೆ ಹೂಡಿತ್ತು. 40 ಕ್ಕೂ ಹೆಚ್ಚು ರಾಜ್ಯಗಳು ಮೆಟಾ ವಿರುದ್ಧ ಮೊಕದ್ದಮೆ ಹೂಡಿದ ನಂತರ ವಿಷಯ ನಿರ್ಬಂಧಗಳು ಬಂದವು. ಈ ಕಾಯ್ದೆಯಿಂದ ನಮ್ಮ ಮಕ್ಕಳನ್ನು ಸುರಕ್ಷಿತವಾಗಿಡಲು ಹಾಗೂ ಉತ್ತಮ ಭವಿಷ್ಯ ರೂಪಿಸಲು ಪೋಷಕರಿಗೆ ಸಹಾಯವಾಗಲಿದೆ ಎಂದು ಗವರ್ನರ್ ರಾನ್ ಡೆಸ್ಯಾಂಟಿಸ್ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Wed, 27 March 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ