AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಿನಂಗಡಿ: ಗೂಗಲ್ ಮ್ಯಾಪ್ ಎಡವಟ್ಟು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಕಾರು ಸೇರಿದ್ದು ತುಂಬಿ ಹರಿಯುತ್ತಿದ್ದ ಹೊಳೆಗೆ

ಗೊತ್ತಿಲ್ಲದ ಸ್ಥಳಗಳಿಗೆ ಪ್ರಯಾಣಿಸುವಾಗ ಹೆಚ್ಚಿನವರು ಗೂಗಲ್‌ ಮ್ಯಾಪ್‌ ನೋಡಿಕೊಂಡು ಪ್ರಯಾಣಿಸುತ್ತಾರೆ. ಕೆಲವೊಮ್ಮೆ ಈ ಗೂಗಲ್‌ ಮ್ಯಾಪ್‌ ನಂಬಿ ಎಡವಟ್ಟುಗಳಾಗುತ್ತಿರುತ್ತವೆ. ಅದೇ ರೀತಿಯ ಆಘಾತಕಾರಿ ಘಟನೆಯೊಂದು ಇದೀಗ ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌ ನಂಬಿ ಕಾರನ್ನು ಸೀದಾ ಹೊಳೆಗೆ ಇಳಿಸಿದ್ದಾರೆ. ಅದೃಷ್ಟವಶಾತ್‌ ಈ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ: ಗೂಗಲ್ ಮ್ಯಾಪ್ ಎಡವಟ್ಟು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಕಾರು ಸೇರಿದ್ದು ತುಂಬಿ ಹರಿಯುತ್ತಿದ್ದ ಹೊಳೆಗೆ
ವೈರಲ್ ಸುದ್ದಿ
ಮಾಲಾಶ್ರೀ ಅಂಚನ್​
| Edited By: |

Updated on: Jul 01, 2024 | 5:33 PM

Share

ಈ ಡಿಜಿಟಲ್‌ ಯುಗದಲ್ಲಿ ದಾರಿ ಗೊತ್ತಾಗದಿದ್ದರೆ ಗೂಗಲ್‌ ಮ್ಯಾಪ್‌ ಬಳುವುದು ಮಾಮೂಲು. ಈಗಂತೂ ಬಹುತೇಕ ಎಲ್ಲರೂ ಗೂಗಲ್‌ ಮ್ಯಾಪ್‌ ನೋಡಿಕೊಂಡೇ ಗೊತ್ತಿಲ್ಲದ ಸ್ಥಳಗಳಿಗೆ ಬೈಕ್‌, ಕಾರುಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಆದರೆ ಎಷ್ಟೋ ಸಂದರ್ಭಗಳಲ್ಲಿ ಈ ಮ್ಯಾಪ್‌ ನಮ್ಮನ್ನು ದಾರಿ ತಪ್ಪಿಸುವುದು ಉಂಟು. ಹೌದು ಈ ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರು ನದಿಗೆ ಬಿದ್ದ, ಹೊಂಡಕ್ಕೆ ಬಿದ್ದ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌ ನಂಬಿ ಕಾರನ್ನು ಸೀದಾ ಹೊಳೆಗೆ ಇಳಿಸಿದ್ದಾರೆ. ಅದೃಷ್ಟವಶಾತ್‌ ಈ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಈ ಬಗ್ಗೆ ಸುದ್ದಿಯೊಂದು ವೈರಲ್​​ ಆಗುತ್ತಿದೆ.

ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ಪಳ್ಳಂಜಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಕೇರಳದ ಕಾಸರಗೋಡಿನ ತಸ್ರೀಫ್‌ (36) ಮತ್ತು ಅಬ್ದುಲ್‌ ರಶೀದ್‌ (35) ಎಂಬವರು ಉಪ್ಪಿನಂಗಡಿಯಲ್ಲಿನ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಅವರು ಗೂಗಲ್‌ ಮ್ಯಾಪ್‌ ನಂಬಿ ಕಾರನ್ನು ತುಂಬಿ ಹರಿಯುತ್ತಿದ್ದ ಹೊಳೆಗೆ ಇಳಿಸಿದ್ದಾರೆ. ಅದೃಷ್ಟವಶಾತ್‌ ಈ ಇಬ್ಬರೂ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಜೀವ ರಕ್ಷಿಸಿದ ಆರಕ್ಷಕರು, ರೋಚಕ ವಿಡಿಯೋ ವೈರಲ್‌

ಗೂಗಲ್‌ ಮ್ಯಾಪ್‌ ಆಧರಿಸಿ ಕಾರು ಚಲಾಯಿಸುತ್ತಿದ್ದ ವೇಳೆ ಪಳ್ಳಂಜಿಯ ಎಂಬಲ್ಲಿನ ಹೊಳೆಯ ಸೇತುವೆ ದಾಟುವಾಗ ಈ ಘಟನೆ ಸಂಭವಿಸಿದೆ. ಜೋರು ಮಳೆಯಿಂದ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ಸೇತುವೆಯ ಎರಡೂ ಬದಿಯಲ್ಲಿ ಯಾವುದೇ ದಂಡೆ ಇಲ್ಲದ ಕಾರಣ, ಕಾರು ಸೀದಾ ಹೋಗಿ ಹೊಳೆಗೆ ಬಿದ್ದಿದೆ. ಕಾರು ತೇಳುತ್ತಾ ಹೋಗಿ ಅಲ್ಲೇ ದಡದಲ್ಲಿದ್ದ ಮರವೊಂದಕ್ಕೆ ಸಿಕ್ಕಿಹಾಕಿಕೊಂಡಿದ್ದು, ಆ ತಕ್ಷಣ ಯುವಕರು ತಮ್ಮ ಸಮಯಪ್ರಜ್ಞೆ ಬಳಸಿ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಈ ಇಬ್ಬರೂ ಯುವಕರನ್ನು ಬಾರೀ ದೊಡ್ಡ ಅಪಾಯದಿಂದ ಪಾರು ಮಾಡಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ